ಮಹದಾಯಿ ವಿವಾದ: ಕೇಂದ್ರ ಸಚಿವರಿಗೆ ಸೆಡ್ಡು ಹೊಡೆದ ಗೋವಾ ಬಿಜೆಪಿ ಸಿಎಂ
ಪಣಜಿ, ಜನವರಿ 01: ಮಹದಾಯಿ ವಿಚಾರದಲ್ಲಿ ಕರ್ನಾಟಕದ ಪರವಾಗಿರುವ ಕಾನೂನಿನ ಬಗ್ಗೆ ಮಾತನಾಡಿದ ತಮ್ಮದೇ ಪಕ್ಷದ ಹಿರಿಯ ಸಚಿವರ ವಿರುದ್ಧ ಗೋವಾ ಬಿಜೆಪಿ ಸಿಎಂ ಕಿಡಿ ಕಾರಿದ್ದಾರೆ.
ಕೇಂದ್ರ ಸಚಿವ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರು ಇತ್ತೀಚಿಗಷ್ಟೆ ಮಹದಾಯಿ ವಿಚಾರದ ಕುರಿತಂತೆ ಕರ್ನಾಟಕದ ಪರವಾಗಿರುವ ಕಾನೂನೊಂದರ ಬಗ್ಗೆ ಪತ್ರ ಬರೆದಿದ್ದರು. ಕರ್ನಾಟಕವು ಕಳಸಾ-ಬಂಡೂರಿ ಯೋಜನೆ ಪ್ರಾರಂಭಿಸಲು ಪರಿಸರ ಇಲಾಖೆ ಅಡ್ಡಿಯಿಲ್ಲ ಎಂದಿದ್ದರು.
ಆದರೆ ಇದರಿಂದ ಬೇಸರಗೊಂಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, 'ಮಹದಾಯಿ ವಿವಾದದ ಕುರಿತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಕಿಮ್ಮತ್ತಿಲ್ಲ' ಎಂದಿದ್ದಾರೆ.

ತಮ್ಮದೇ ಪಕ್ಷದ ರಾಷ್ಟ್ರ ನಾಯಕರ ವಿರುದ್ಧ ಟೀಕೆ ಮಾಡಿರುವ ಪ್ರಮೋದ್ ಸಾವಂತ್, 'ಪ್ರಕರಣವು ಸುಪ್ರೀಂಕೋರ್ಟ್ ನಲ್ಲಿ ಇದೆ ಹಾಗಾಗಿ ಜಾವಡೇಕರ್ ಅವರು ಹೇಳಿರುವ ಮಾತುಗಳಿಗೆ ಕಿಮ್ಮತ್ತಿಲ್ಲ, ಪ್ರಕರಣದ ತೀರ್ಮಾನ ಸುಪ್ರೀಂಕೋರ್ಟ್ನಲ್ಲಿ ಆಗುತ್ತದೆ' ಎಂದಿದ್ದಾರೆ.
ಕಳಸಾ-ಬಂಡೂರಿ ಯೋಜನೆಗೆ ಪರಿಸರ ಸಚಿವಾಲಯದ ಅನುಮತಿ ಅಗತ್ಯವಿಲ್ಲ ಎಂದು ಕಳೆದ ವಾರ ಜಾವಡೇಕರ್ ಹೇಳಿಕೆ ನೀಡಿದ್ದರು. 'ಮಹದಾಯಿ ವಿವಾದದ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿದ್ದರೂ ಈ ನದಿಯ ಕೆಲ ಪ್ರಮಾಣದ ನೀರನ್ನುತಿರುಗಿಸಲಾಗಿದೆ ಎಂಬ ಅಂಶವನ್ನು ಅವರು ಒಪ್ಪಿಕೊಂಡರು. ಈ ವಿವಾದದಲ್ಲಿ ನಮ್ಮ ಸ್ಷಷ್ಟ ನಿಲುವನ್ನು ಈಗಾಗಲೇ ಸುಪ್ರೀಂಕೋರ್ಟ್ ತಿಳಿಸಿದ್ದೇವೆ' ಎಂದು ಗೋವಾ ಸಿಎಂ ಹೇಳಿದ್ದಾರೆ.
'ಕೇಂದ್ರ ಪರಿಸರ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆಗೆ ಪತ್ರಗಳ ಮುಖೇನ ಈ ವಿಷಯವನ್ನು ನಾವು ಸ್ಪಷ್ಟಪಡಿಸಿದ್ದೇವೆ' ಎಂದು ಅವರು ಹೇಳಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications