ಬಿಜೆಪಿ ಸೇರಲು 40 ಕೋಟಿ ರುಪಾಯಿ ಆಫರ್: ಗೋವಾ ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ
ಪಣಜಿ, ಜುಲೈ 11: ಗೋವಾದಲ್ಲಿ ಕಾಂಗ್ರೆಸ್ ಶಾಸಕರು ಪಕ್ಷದಿಂದ ಸಂಪರ್ಕ ಕಡಿದುಕೊಂಡಿರುವ ಬೆನ್ನಲ್ಲೇ ಗೋವಾದ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಗಿರೀಶ್ ಚೋಡಂಕರ್ ಬಿಜೆಪಿ ವಿರುದ್ಧ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಸೇರಲು ಕಾಂಗ್ರೆಸ್ ಶಾಸಕರಿಗೆ 40 ಕೋಟಿ ರುಪಾಯಿ ಆಫರ್ ನೀಡಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಗೋವಾದಲ್ಲಿ ಸದ್ಯದ ರಾಜಕೀಯ ಬೆಳವಣಿಗೆ ಪ್ರಕಾರ ಕನಿಷ್ಟ 5 ರಿಂದ 6 ಶಾಸಕರು ಬಿಜೆಪಿಗೆ ಸೇರುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ. ಚೋಡಂಕರ್ ಮಾತನಾಡಿ, ಕೈಗಾರಿಕೋದ್ಯಮಿಗಳು ಮತ್ತು ಕಲ್ಲಿದ್ದಲು ಮಾಫಿಯಾದಿಂದ ಕಾಂಗ್ರೆಸ್ ಶಾಸಕರಿಗೆ ಕರೆಗಳು ಬರುತ್ತಿವೆ. ಇವರನ್ನು ಸಂಪರ್ಕಿಸಿದ ಕೆಲವು ಶಾಸಕರು ಕಾಂಗ್ರೆಸ್ನ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರ ಬಳಿ ಮಾಹಿತಿ ಬಹಿರಂಗಪಡಿಸಿದ್ದಾರೆ ಎಂದು ಚೋಡಂಕರ್ ಹೇಳಿದ್ದಾರೆ.
ಪಕ್ಷದಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ವರದಿಗಳನ್ನು ರಾಜ್ಯ ಕಾಂಗ್ರೆಸ್ ಕಟುವಾಗಿ ನಿರಾಕರಿಸುತ್ತಿದ್ದರೂ, ಬಹುತೇಕ ಶಾಸಕರು ಪಕ್ಷದ ಸಭೆ ಮತ್ತು ಪತ್ರಿಕಾಗೋಷ್ಠಿಗೆ ಗೈರಾಗಿದ್ದರು. ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಕೂಡ ಕಾಂಗ್ರೆಸ್ ಹಿರಿಯ ನಾಯಕರ ಬಗ್ಗೆಯೇ ಅಸಮಧಾನ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ನ ಮೈಕೆಲ್ ಲೋಬೊ, ದಿಗಂಬರ್ ಕಾಮತ್ ಬಿಜೆಪಿಗೆ ಸಹಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಮೈಕೆಲ್ ಲೋಬೋರನ್ನು ಪ್ರತಿಪಕ್ಷ ನಾಯಕನ ಸ್ಥಾನದಿಂದ ತೆಗೆದುಹಾಕಿದ್ದೇವೆ ಎಂದು ಹೇಳಿದ್ದರು.

ಆರೋಪದಲ್ಲಿ ಹುರುಳಿಲ್ಲ ಎಂದ ಬಿಜೆಪಿ
ಆದರೆ, ಬಿಜೆಪಿಯು ಚೋಡಂಕರ್ ಆರೋಪಗಳನ್ನು ತಳ್ಳಿಹಾಕಿದೆ, ಅದರ ರಾಜ್ಯಾಧ್ಯಕ್ಷ ಸದಾನಂದ್ ತಾನವಡೆ ಮಾತನಾಡಿ "ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಹಣ ನೀಡುತ್ತಿರುವ ಬಗ್ಗೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ" ಎಂದು ಹೇಳಿದ್ದಾರೆ.
"ಕಾಂಗ್ರೆಸ್ ನಾಯಕರು ಯಾವಗಲೂ ಹೀಗೆ ಸುಮ್ಮನೆ ಆರೋಪಗಳನ್ನು ಮಾಡುತ್ತಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಕಾಂಗ್ರೆಸ್ನಲ್ಲಿನ ಗೊಂದಲಕ್ಕೂ ಗೋವಾ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಮತ್ತು ಈ ವಿಷಯದಲ್ಲಿ ನಾವು ನಮ್ಮ ಪಕ್ಷದಿಂದ ಏನನ್ನೂ ಕೇಳಿಲ್ಲ" ಎಂದು ಅವರು ಹೇಳಿದರು.

ವದಂತಿ ತಳ್ಳಿಹಾಕಿದ ಮೇಕೆಲ್ ಲೋಬೋ
ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎನ್ನುವ ಶಾಸಕ ಮೈಕೆಲ್ ಲೋಬೋ ವದಂತಿಗಳನ್ನು ತಳ್ಳಿ ಹಾಕಿದರು. "ವಿಧಾನಸಭಾ ಅಧಿವೇಶನಕ್ಕೆ ಮುಂಚಿತವಾಗಿ ಉದ್ದೇಶಪೂರ್ವಕವಾಗಿ ವದಂತಿಗಳನ್ನು ಹರಡಲಾಗಿದೆ" ಎಂದು ಆರೋಪಿಸಿದರು.
"ಇವೆಲ್ಲ ವದಂತಿಗಳು. ಅಂತಹದ್ದೇನೂ ಇಲ್ಲ. ಅಧಿವೇಶನ ಪ್ರಾರಂಭವಾಗುತ್ತಿದೆ ಮತ್ತು ಯಾರೋ ಸುಮ್ಮನೆ ವದಂತಿಯನ್ನು ಹರಡಿದ್ದಾರೆ. ನನಗೆ ಕೇಳಿದ್ದರೆ ನಾನು ಮೊದಲೇ ಉತ್ತರಿಸುತ್ತಿದ್ದೆ," ಎಂದು ಅವರು ಹೇಳಿದರು.

ಬಿಜೆಪಿಯನ್ನು ದೂರಿದ ಗೋವಾ ಕಾಂಗ್ರೆಸ್ ಅಧ್ಯಕ್ಷ
ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಟೀಕಿಸಿರುವ ಗೋವಾ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಪಾಟ್ಕರ್, "ಬಿಜೆಪಿ ವದಂತಿಗಳನ್ನು ಸೃಷ್ಟಿಸುವ ಮೂಲಕ ಜನರಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತಿದೆ" ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ನ 11 ಶಾಸಕರಲ್ಲಿ ಎಂಟು ಮಂದಿ ಹೊಸಬರು. ಸೋಮವಾರ ಸದನದಲ್ಲಿ ಸಭೆ ಇತ್ತು, ನಮ್ಮ ಹಿರಿಯ ಶಾಸಕರು ಚರ್ಚೆ ನಡೆಸಿದ್ದಾರೆ. ಹೊಸ ಶಾಸಕರು, ಸೋಮವಾರದಿಂದ ಉತ್ತಮ ಜನಾಡಳಿತ ನೀಡುವ ಬಿಜೆಪಿ ಸರ್ಕಾರದ ವಿರುದ್ಧ ದನಿಯೆತ್ತಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಊಹಾಪೋಹಕ್ಕೆ ಕಾರಣವಾಗಿದ್ದು ಸಿ.ಟಿ.ರವಿ ಹೇಳಿಕೆ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಸಿ.ಟಿ.ರವಿ ಮೇ ತಿಂಗಳಿನಲ್ಲಿ, ಪ್ರಸ್ತುತ 20 ಶಾಸಕರನ್ನು ಹೊಂದಿರುವ ಬಿಜೆಪಿಯು 30 ಶಾಸಕರನ್ನು ಹೊಂದಲಿದೆ ಎಂದು ಹೇಳಿಕೆ ನೀಡಿದ್ದರು. ಆಗಿನಿಂದಲೇ ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದರಾ ಎನ್ನುವ ಅನುಮಾನ ಇತ್ತು.
ಹಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದು ಆಗಿನಿಂದಲೇ ಊಹಾಪೋಹಗಳು ಕೇಳಿಬಂದಿದ್ದವು. 20 ಶಾಸಕರ್ನು ಹೊಂದಿರುವ ಬಿಜೆಪಿ ಐವರು ಪಕ್ಷೇತರ ಶಾಸಕರ ಬೆಂಬಲದೊಂದಿದೆ ಗೋವಾದಲ್ಲಿ ಸರ್ಕಾರ ರಚನೆ ಮಾಡಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications