ಗೋವಾದ ಬಿಟ್ಸ್ ಪಿಲಾನಿ ಕ್ಯಾಂಪಸ್ನ 24 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಪಣಜಿ ಏಪ್ರಿಲ್ 1: ಕೊರೊನಾ ಮಹಾಮಾರಿಯ ಮೂರನೇ ಅಲೆಯಿಂದ ಭಾರತ ಚೇತರಿಸಿಕೊಂಡಿದೆ. ಸಾವಿನ ಪ್ರಮಾಣವನ್ನು ನಿಯಂತ್ರಿಸಲು ದೇಶದ ಹೆಚ್ಚಿನ ಜನಸಂಖ್ಯೆಗೆ ಲಸಿಕೆ ಹಾಕಲಾಗಿದೆ. ಈ ಕಾರಣದಿಂದಾಗಿ ಈಗ ಹೆಚ್ಚಿನ ರಾಜ್ಯಗಳು ಕೊರೊನಾ ನಿರ್ಬಂಧಗಳನ್ನು ತೆಗೆದುಹಾಕಿವೆ. ಆದರೆ ಗೋವಾದಿಂದ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಗೋವಾದ ಬಿಟ್ಸ್ ಪಿಲಾನಿ ಕ್ಯಾಂಪಸ್ನಲ್ಲಿ (BITS Pilani campus) 24 ವಿದ್ಯಾರ್ಥಿಗಳಿಗೆ ಒಟ್ಟಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಈಗ ಸ್ಥಳೀಯ ಆಡಳಿತ ಸಿಬ್ಬಂದಿ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ ಜನರನ್ನು ಪತ್ತೆಹಚ್ಚಿ ಪರೀಕ್ಷೆ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾತನಾಡಿದ ಸಂಸ್ಥೆಯ PRO ಅರ್ಜುನ್ ಹಲರಂಕರ್, 'ದಕ್ಷಿಣ ಗೋವಾದ BITS ಪಿಲಾನಿಯಲ್ಲಿ ಕಳೆದ ಕೆಲವು ದಿನಗಳಲ್ಲಿ 24 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಈ ಕಾರಣದಿಂದಾಗಿ ತರಗತಿಯನ್ನು ಈಗ ಆನ್ಲೈನ್ ಮಾಡಲಾಗಿದೆ. ಶುಕ್ರವಾರವೂ ಆರೋಗ್ಯ ಇಲಾಖೆಯ ತಂಡ ಕಾಲೇಜಿಗೆ ಆಗಮಿಸಿ 8 ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಿದೆ. ಅವರ ವರದಿಗಾಗಿ ಇನ್ನೂ ಕಾಯಲಾಗುತ್ತಿದೆ. ಇದರೊಂದಿಗೆ ಅಲ್ಲಿ ನಡೆಯಲಿರುವ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ' ಎಂದರು.
ದಕ್ಷಿಣ ಗೋವಾ ಜಿಲ್ಲೆಯಲ್ಲಿರುವ ಬಿಟ್ಸ್ ಪಿಲಾನಿ ಕ್ಯಾಂಪಸ್ ಸುಮಾರು 2,800 ವಿದ್ಯಾರ್ಥಿಗಳನ್ನು ಹೊಂದಿದೆ. PRO ಪ್ರಕಾರ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಕ್ಯಾಂಪಸ್ಗೆ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನ್ ಮಾಡಲಾಗುತ್ತಿದೆ. ಎರಡು-ಮೂರು ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಡಲು ಪ್ರಾರಂಭವಾಗಿದೆ. ಸೋಂಕಿತರ ಸಂಖ್ಯೆ ಈಗ 24ಕ್ಕೆ ತಲುಪಿದೆ. ಆದಾಗ್ಯೂ ಕ್ಯಾಂಪಸ್ನಲ್ಲಿರುವ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಹೆಚ್ಚಿಲ್ಲ ಎಂದಿದ್ದಾರೆ.

ದೇಶದ ಪರಿಸ್ಥಿತಿ ಹೇಗಿದೆ?
ಶುಕ್ರವಾರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1335 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 52 ಜನರು ಸಾವನ್ನಪ್ಪಿದ್ದಾರೆ. ಅದೇ ಅವಧಿಯಲ್ಲಿ1918 ರೋಗಿಗಳು ಕೊರೊನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,30,25,775 ಕ್ಕೆ ಏರಿಕೆಯಾಗಿದ್ದು. ಅದರಲ್ಲಿ 13,672 ಸಕ್ರಿಯ ಪ್ರಕರಣಗಳಿವೆ.

ಈ ರಾಜ್ಯಗಳಲ್ಲಿ ಮಾಸ್ಕ್ ರದ್ದು
ಇದರ ನಡುವೆ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆಯಾಗಿದ್ದು ಕೆಲ ರಾಜ್ಯಗಳು ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಿವೆ. ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಳಿಕೆಯಾದ ಬೆನ್ನಲ್ಲೇ ಮಹಾರಾಷ್ಟ್ರ, ದೆಹಲಿ, ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಕೊರೊನಾ ಮಾನದಂಡಗಳನ್ನು ಸಂಪೂರ್ಣ ಸಡಿಲಗೊಳಿಸುವುದಾಗಿ ಆಯಾ ರಾಜ್ಯಗಳ ಸರ್ಕಾರ ಘೋಷಿಸಿವೆ. ಚೀನಾದಲ್ಲಿ ಹೊಸ ವೈರಸ್ ಉಲ್ಬಣವಾಗಿರುವುದು ಕಂಡುಬಂದರೂ ಸಹ ದೇಶದ ಅನೇಕ ರಾಜ್ಯಗಳು ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಿವೆ. ಈ ರಾಜ್ಯಗಳಲ್ಲಿ ಎಲ್ಲಾ ಸಾಂಕ್ರಾಮಿಕ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳಲಾಗಿದೆ. ಕೊರೊನಾ ಆರಂಭದಲ್ಲಿ ದೇಶದಲ್ಲೇ ಅತೀ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ ಮಹಾರಾಷ್ಟ್ರದಲ್ಲೂ ಮಾಸ್ಕ್ ಕಡ್ಡಾಯ ಸಡಿಲಗೊಳಿಸಲಾಗಿದೆ. ಇನ್ಮುಂದೆ ಮಹಾರಾಷ್ಟ್ರದಲ್ಲಿ ಮಾಸ್ಕ್ ಕಡ್ಡಾಯವಲ್ಲ. ಜೊತೆಗೆ ಮಾಸ್ಕ್ ಹಾಕದವರಿಗೆ ದಂಡವನ್ನೂ ವಿಧಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications