ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಿಜೆಪಿ ತೊರೆದ ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ

|
Google Oneindia Kannada News

ಪಣಜಿ, ಜನವರಿ 21: ಗೋವಾ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಕ್ಕರ್ ಪುತ್ರನಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ.

ತಂದೆ ಮನೋಹರ್ ಪರಕ್ಕರ್ ಪ್ರತಿನಿಧಿಸುತ್ತಿದ್ದ ಪಣಜಿ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬಿಜೆಪಿ ತೊರೆದಿದ್ದಾರೆ.

Goa Assembly Election 2022: Former CM Manohar Parikkar Son left the BJP

"ಕೇಂದ್ರ ನಾಯಕರು ಉತ್ಪಲ್ ಪರಿಕ್ಕರ್ ಜೊತೆ ಸಂಪರ್ಕದಲ್ಲಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸಲು ಎರಡು ಕ್ಷೇತ್ರಗಳ ಆಯ್ಕೆ ನೀಡಲಾಗಿದೆ. ನನಗೆ ಭರವಸೆ ಇದೆ, ಈ ವಿಚಾರ ಬಗೆಹರಿಯಲಿದೆ. ಪಕ್ಷದ ಆಯ್ಕೆಯನ್ನು ಅವರು ಒಪ್ಪಿಕೊಳ್ಳಲಿದ್ದಾರೆ,'' ಎಂದು ಸಿಎಂ ಪ್ರಮೋದ್ ಸಾವಂತ್ ಗುರುವಾರ ತಿಳಿಸಿದ್ದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಉತ್ಪಲ್ ಪರಿಕ್ಕರ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ನನ್ನ ಮೌಲ್ಯಗಳಿಗಾಗಿ ಸ್ವಲ್ಪ ನಿಲುವು ತೆಗೆದುಕೊಳ್ಳಬೇಕಾದ ಸಮಯ ಬಂದಿದೆ ಎಂದು ಹೇಳಿದರು.

"ಕಳೆದ ಮತ್ತು ಈ ಚುನಾವಣೆಯ ಸಮಯದಲ್ಲಿ ನಾನು ನನ್ನ ಪಕ್ಷಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದೆ. ನಾನು ಎಲ್ಲಾ ಪಕ್ಷದ ಸದಸ್ಯರ ಬೆಂಬಲವನ್ನು ತೆಗೆದುಕೊಳ್ಳುತ್ತಿದ್ದೇನೆ, ನಾನು ಪಣಜಿಯ ಸಾಮಾನ್ಯ ಜನರ ಬೆಂಬಲವನ್ನು ಸಹ ಆನಂದಿಸುತ್ತೇನೆ ಎಂದು ಉತ್ಪಲ್ ಪರಿಕ್ಕರ್ ಶುಕ್ರವಾರ ಸಂಜೆ ಸುದ್ದಿಗಾರರಿಗೆ ತಿಳಿಸಿದರು.

ಇಷ್ಟಾದರೂ ಪಣಜಿ ಕ್ಷೇತ್ರದ ಉಮೇದುವಾರಿಕೆಯನ್ನು ಪಡೆಯಲು ನನಗೆ ಸಾಧ್ಯವಾಗುತ್ತಿಲ್ಲ. ಕಳೆದ ಎರಡು ವರ್ಷಗಳಲ್ಲಿ ಬಿಜೆಪಿ ಪಕ್ಷಕ್ಕೆ ಅವಕಾಶವಾದಿಯಾಗಿ ಬಂದವರಿಗೆ ಅದನ್ನು ನೀಡಲಾಗಿದೆ. ಅದಕ್ಕಾಗಿಯೇ ನಾನು ಮುಂದುವರಿಯಲು ಬಯಸುತ್ತೇನೆ ಮತ್ತು ಪಣಜಿಯ ಜನರು ನನ್ನ ರಾಜಕೀಯ ಭವಿಷ್ಯ ಬರೆಯಲಿದ್ದಾರೆ ಎಂದರು.

ಮೂರು ಬಾರಿ ಗೋವಾ ಮುಖ್ಯಮಂತ್ರಿಯಾಗಿದ್ದ ಮತ್ತು ಕಡಲತೀರದ ರಾಜ್ಯದಲ್ಲಿ ಬಿಜೆಪಿಯ ಉನ್ನತ ನಾಯಕರಾಗಿದ್ದ ವರ್ಚಸ್ವಿ ಮತ್ತು ಜನಪ್ರಿಯ ನಾಯಕ ಮನೋಹರ್ ಪರಿಕ್ಕರ್ 2019ರಲ್ಲಿ ಪಕ್ಷದ ಕಚೇರಿಯಲ್ಲಿ ನಿಧನರಾಗಿದ್ದರು. ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಮನೋಹರ್ ಪರಿಕ್ಕರ್ ಜೀವಮಾನದ ಪ್ರತಿಸ್ಪರ್ಧಿಯಾಗಿದ್ದ ಬಾಬುಷ್ ಮಾನ್ಸೆರೇಟ್ ಈಗ ಪಣಜಿ ಕ್ಷೇತ್ರಕ್ಕೆ ಮನೋಹರ್ ಪರಿಕ್ಕರ್ ಮಗನಿಗಿಂತ ಪಕ್ಷದ ಆಯ್ಕೆಯಾಗಿದ್ದಾರೆ.

Recommended Video

South Africa ನೆಲದಲ್ಲಿ ಭಾರತಕ್ಕೆ ಮುಖಭಂಗ,ಇದಕ್ಕೆ ಕಾರಣ Virat!! | Oneindia

ಫೆಬ್ರವರಿ 14ರಂದು ಮತದಾನ
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜನವರಿ 21ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಜನವರಿ 28 ಕೊನೆಯ ದಿನವಾಗಿದೆ. ಜನವರಿ 31 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಗೊಳ್ಳಲಿದೆ.

English summary
Manohar Parrikar's son Utpal Parrikar has quit the BJP after he was denied a ticket from the Panaji constituency represented by Manohar Parrikar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X