ಗೋವಾ: ಚುನಾವಣೆಗೂ ಮುನ್ನ ಬಿಜೆಪಿ ತ್ಯಜಿಸಲು ಮುಂದಾದ ಮಾಜಿ ಸಿಎಂ
ಪಣಜಿ, ಜನವರಿ 22: ಗೋವಾ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು, ಈಗ ಅವರು ಪಕ್ಷ ತೊರೆಯುವುದಾಗಿ ಹೇಳೀದ್ದಾರೆ.
ಗೋವಾದಲ್ಲಿ ಮಾಜಿ ಸಿಎಂ ಮನೋಹರ್ ಪರಿಕ್ಕರ್ ನಂತರ ಅವರ ಉತ್ತರಾಧಿಕಾರಿಯಾಗಿದ್ದ ಲಕ್ಷ್ಮೀಕಾಂತ್ ಪರ್ಸೇಕರ್ ಶನಿವಾರ ಬಿಜೆಪಿ ತ್ಯಜಿಸಲಿದ್ದಾರೆ. ಇದು ಗೋವಾ ಚುನಾವಣೆಗೂ ಮುನ್ನ ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಶುಕ್ರವಾರವಷ್ಟೇ ದಿ.ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಪಕ್ಷ ತೊರೆದಿದ್ದರು.
ಫೆಬ್ರವರಿ ತಿಂಗಳು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಗೋವಾ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಆಡಳಿತರೂಢ ಪಕ್ಷಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ 65 ವರ್ಷದ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್, ಬಿಜೆಪಿ ಪಕ್ಷದಲ್ಲಿ ಉಳಿಯಲು ಬಯಸುವುದಿಲ್ಲ ಮತ್ತು ಶನಿವಾರ ಸಂಜೆಯೊಳಗೆ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದರು.
ಲಕ್ಷ್ಮೀಕಾಂತ್ ಪರ್ಸೇಕರ್ ಪ್ರಸ್ತುತ ಮುಂಬರುವ ಗೋವಾ ವಿಧಾನಸಭಾ ಚುನಾವಣೆಗಳಿಗಾಗಿ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದಾರೆ ಮತ್ತು ಪಕ್ಷದ ಕೋರ್ ಕಮಿಟಿಯ ಸದಸ್ಯರೂ ಆಗಿದ್ದಾರೆ.
2002 ಮತ್ತು 2017ರ ನಡುವೆ ಲಕ್ಷ್ಮೀಕಾಂತ್ ಪರ್ಸೇಕರ್ ಪ್ರತಿನಿಧಿಸಿದ್ದ ಮಾಂಡ್ರೆಮ್ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ದಯಾನಂದ್ ಸೋಪ್ಟೆ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
ದಯಾನಂದ್ ಸೋಪ್ಟೆ 2017ರ ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮೀಕಾಂತ್ ಪರ್ಸೇಕರ್ನ್ನು ಸೋಲಿಸಿದ್ದರು. ರಾಜಕೀಯ ಬದಲಾವಣೆ ನಂತರ 2019 ರಲ್ಲಿ ಒಂಭತ್ತು ಇತರ ಶಾಸಕರೊಂದಿಗೆ ಆಡಳಿತಾರೂಢ ಬಿಜೆಪಿಯನ್ನು ಸೇರಿದ್ದರು.
"ಸದ್ಯ ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಾನು ಮುಂದೆ ಏನು ಮಾಡಬೇಕು ಎಂಬುದನ್ನು ನಂತರ ನಿರ್ಧರಿಸಲಾಗುವುದು," ಎಂದು ಲಕ್ಷ್ಮೀಕಾಂತ್ ಪರ್ಸೇಕರ್ ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿದರು.
ದಯಾನಂದ್ ಸೋಪ್ಟೆ ಅವರು ಮಾಂಡ್ರೆಮ್ನಲ್ಲಿ ಮೂಲ ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದ್ದಾರೆ, ಇದರಿಂದಾಗಿ ನನಗೆ ದೊಡ್ಡ ಪ್ರಮಾಣದ ಅಸಮಾಧಾನವಿದೆ ಎಂದು ಲಕ್ಷ್ಮೀಕಾಂತ್ ಪರ್ಸೇಕರ್ ಹೇಳಿದರು.
ಲಕ್ಷ್ಮೀಕಾಂತ್ ಪರ್ಸೇಕರ್ ಅವರು 2014ರಿಂದ 2017ರ ನಡುವೆ ಗೋವಾದ ಮುಖ್ಯಮಂತ್ರಿಯಾಗಿದ್ದರು. ಆಗಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ರಕ್ಷಣಾ ಸಚಿವರಾಗಿ ಕೇಂದ್ರ ಸಂಪುಟಕ್ಕೆ ಸೇರ್ಪಡೆಗೊಂಡ ನಂತರ ಪರ್ಸೇಕರ್ ಗೋವಾದ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.
ಫೆಬ್ರವರಿ 14 ರಂದು ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಬಿಜೆಪಿ 34 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ತಂದೆ ಮನೋಹರ್ ಪರಕ್ಕರ್ ಪ್ರತಿನಿಧಿಸುತ್ತಿದ್ದ ಪಣಜಿ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬಿಜೆಪಿ ತೊರೆದಿದ್ದಾರೆ.
ಫೆಬ್ರವರಿ 14ರಂದು ಮತದಾನ
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜನವರಿ 21ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಜನವರಿ 28 ಕೊನೆಯ ದಿನವಾಗಿದೆ. ಜನವರಿ 31 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಗೊಳ್ಳಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications