ಬಹುಮತ ಸಾಬೀತು ಪಡಿಸುವ ವೇಳೆ ಗೋವಾ ಮುಖ್ಯಮಂತ್ರಿ ಕಣ್ಣೀರಿಟ್ಟಿದ್ದೇಕೆ?
ಪಣಜಿ, ಮಾರ್ಚ್ 21: ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸೋಮವಾರ ರಾತ್ರಿ ಪ್ರಮಾಣವಚನಸ್ವೀಕರಿಸಿದ್ದರು. ಬುಧವಾರ ನಡೆದ ಬಹುಮತ ಸಾಬೀತು ಸಭೆಯಲ್ಲಿ ಮನೋಹರ್ ಪರಿಕ್ಕರ್ ಅವರನ್ನು ನೆನೆದು ಕಣ್ಣೀರಿಟ್ಟರು.
ಬಹುಮತ ಸಾಬೀತಿನ ನಂತರ ಮಾತನಾಡುವಾಗ ಮನೋಹರ್ ಪರಿಕ್ಕರ್ ಅವರನ್ನು ನೆನಪಿಸಿಕೊಂಡು ಭಾವುಕರಾದ ಪ್ರಮೋದ್ ಅವರು, ಮನೋಹರ್ ಪರಿಕ್ಕರ್ ಅವರಿಂದಲೇ ನಾನು ಇಂದು ಇಲ್ಲಿದ್ದೇನೆ. ಶಾಸಕನಾಗಿದ್ದು, ಸ್ಪೀಕರ್ ಆಗಿದ್ದು, ಹಾಗೇ ಇಂದು ಮುಖ್ಯಮಂತ್ರಿಯಾಗಿದ್ದೂ ಕೂಡ ಅವರಿಂದಲೇ, ಅವರಿಗಾಗಿಯೇ ಎಂದು ಕಣ್ಣೀರು ಹಾಕಿದರು.
ಪರಿಕ್ಕರ್ ಅವರು ದೂರದೃಷ್ಟಿಯುಳ್ಳ ನಾಯಕ ಎಂದು ಡೆಪ್ಯೂಟಿ ಸ್ಪೀಕರ್ ಹೇಳಿದರು. ಅಲ್ಲದೆ ವಿಪಕ್ಷ ನಾಯಕ (ಐಎನ್ಸಿ) ಚಂದ್ರಕಾಂತ ಕವ್ಲೇಕರ್ ಮಾತನಾಡಿ, ಮನೋಹರ್ ಪರಿಕ್ಕರ್ ಅವರ ಕೆಲಸದ ಶೈಲಿಯನ್ನೇ ನಾವೂ ಅನುಕರಣೆ ಮಾಡಬೇಕು. ಅವರು ರಕ್ಷಣಾ ಸಚಿವರಾಗಿ ನಮ್ಮ ಇಡೀ ಗೋವಾಕ್ಕೆ ಹೆಮ್ಮೆ ತಂದುಕೊಟ್ಟಿದ್ದಾರೆ ಎಂದು ಹೇಳಿದರು.

ವಿಶ್ವಾಸಮತದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎಲ್ಲಾ ಶಾಸಕರನ್ನೂ ಗೋವಾದ ಫೈವ್ ಸ್ಟಾರ್ ಹೊಟೆಲ್ ವೊಂದಕ್ಕೆ ಕಳಿಸಿತ್ತು. ಒಟ್ಟು 40 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಗೋವಾ ಸದ್ಯಕ್ಕೆ 36 ಸದಸ್ಯ ಬಲ ಹೊಂದಿದೆ.
ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಮತ್ತು ಬಿಜೆಪಿ ಶಾಸಕ ಫ್ರಾನ್ಸಿಸ್ ಡಿಸೋಜಾ ನಿಧನದಿಂದ ಹಾಗೂ ಕಾಂಗ್ರೆಸ್ ನ ಇಬ್ಬರು ಶಾಸಕರಾದ ಸುಭಾಶ್ ಶಿರೋಡ್ಕರ್ ಮತ್ತು ದಯಾನಂದ್ ಸೊಪ್ಟೆ ಅವರ ರಾಜೀನಾಮೆಯಿಂದ ನಾಲ್ಕು ಸ್ಥಾನಗಳು ತೆರವಾಗಿವೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications