ಮನೋಹರ್ ಪರಿಕರ್ ನಿಧನ ಸುದ್ದಿಗೆ ಯಾರು, ಏನು ಹೇಳಿದರು?
Recommended Video

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ತಮ್ಮ 63ನೇ ವರ್ಷದಲ್ಲಿ (13 ಮಾರ್ಚ್ 1955- 17 ಮಾರ್ಚ್ 2019) ಭಾನುವಾರ ನಿಧನರಾಗಿದ್ದಾರೆ. ಕಳೆದ ವರ್ಷ ಮೇದೋಜ್ಜೀರಕ ಗ್ರಂಥಿ ಸಮಸ್ಯೆಗಾಗಿ ಚಿಕಿತ್ಸೆ ಪಡೆದಿದ್ದ ಅವರು, ಕೆಲವು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದರು. ಭಾನುವಾರ ರಾತ್ರಿ ಮುಖ್ಯಮಂತ್ರಿ ಕಚೇರಿಯಿಂದ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎಂಬ ಟ್ವೀಟ್ ಬಂದಿತ್ತು.
ಆ ಟ್ವೀಟ್ ಬಂದ ಒಂದು-ಒಂದೂವರೆ ಗಂಟೆಯೊಳಗೆ ಅವರ ನಿಧನ ವಾರ್ತೆ ಹೊರಬಿದ್ದಿದೆ. ಪರಿಕರ್ ನಿಧನಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಗೋವಾದ ಜನರಿಗಾಗಿ ಮನೋಹರ್ ಪರಿಕರ್ ಅವರು ಸಲ್ಲಿಸಿದ ಸೇವೆ ಮರೆಯಲು ಸಾಧ್ಯವೇ ಇಲ್ಲ ಎಂದು ಸ್ಮರಿಸಿದ್ದಾರೆ.
ಇನ್ನು ಸೋಮವಾರದಂದು ಬೆಳಗ್ಗೆ ಹನ್ನೊಂದು ಗಂಟೆಗೆ ಕೇಂದ್ರ ಸಂಪುಟದಿಂದ ಗೋವಾದ ದಿವಂಗತ ಮುಖ್ಯಮಂತ್ರಿ ಮನೋಹರ್ ಪರಿಕರ್ ಅವರ ಸಂತಾಪ ಸಭೆ ಕರೆಯಲಾಗಿದೆ. ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿ, ಮನೋಹರ್ ಪರಿಕರ್ ಅವರ ಸಾವಿನ ವಾರ್ತೆಯಿಂದ ಬಹಳ ದುಃಖವಾಗಿದೆ. ಕ್ಯಾನ್ಸರ್ ಜತೆಗಿನ ಹೋರಾಟದ ಹೊರತಾಗಿಯೂ ಅವರೊಬ್ಬ ನಿಜವಾದ ಹೋರಾಟಗಾರ. ಜನರ ಸಲುವಾಗಿ ದಣಿವರಿಯದೆ ದುಡಿದವರು ಎಂದಿದ್ದಾರೆ.
|
ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ
ಮನೋಹರ್ ಪರಿಕರ್ ಜೀ ಸಾವಿನಿಂದ ಬಹಳ ದುಃಖವಾಗಿದೆ. ಈ ನಷ್ಟವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಆ ದೇವರು ನೀಡಲಿ ಎಂದಿದ್ದಾರೆ.
|
ಪಕ್ಷಾತೀತವಾಗಿ ಅಭಿಮಾನ, ಗೌರವ ಇತ್ತು
ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದ ವಿರುದ್ಧ ಹೋರಾಡುತ್ತಾ ಬಂದಿದ್ದ ಧೈರ್ಯಶಾಲಿ ಮನೋಹರ್ ಪರಿಕರ್ ಜೀ ಅವರ ಸಾವಿನ ಸುದ್ದಿ ಕೇಳಿ ಬಹಳ ದುಃಖ ಆಗಿದೆ. ಪಕ್ಷಾತೀತವಾಗಿ ಅವರ ಬಗ್ಗೆ ಗೌರವ, ಅಭಿಮಾನ ಇತ್ತು. ಗೋವಾದ ಮೆಚ್ಚಿನ ಮಗನಲ್ಲಿ ಅವರೂ ಒಬ್ಬರು. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಯಸುತ್ತೇನೆ.
|
ತಾಳ್ಮೆಯಿಂದ ನಡೆದುಕೊಂಡರು
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಜೀ ಸಾವಿನಿಂದ ದುಃಖವಾಗಿದೆ. ತಮ್ಮ ಕಾಯಿಲೆ ವಿರುದ್ಧ ತುಂಬ ತಾಳ್ಮೆಯಿಂದ ನಡೆದುಕೊಂಡರು. ಮನೋಹರ್ ಪರಿಕರ್ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ.
|
ಸಜ್ಜನ-ಪ್ರಾಮಾಣಿಕ ವ್ಯಕ್ತಿ, ಉತ್ತಮ ಸ್ನೇಹಿತ
ಮನೋಹರ್ ಪರಿಕರ್ ಸಾವಿನಿಂದ ವಿಪರೀತ ದುಃಖವಾಗಿದೆ. ಅವರೊಬ್ಬ ಮಹಾನ್ ನಾಯಕ. ಸಜ್ಜನ- ಪ್ರಾಮಾಣಿಕ ವ್ಯಕ್ತಿ ಮತ್ತು ತುಂಬ ಒಳ್ಳೆ ಸ್ನೇಹಿತ. ದೇಶವು ಅವರನ್ನು ಸ್ಮರಿಸುತ್ತದೆ ಎಂದಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications