ಸಾವಿನ ಪಕ್ಕದಲ್ಲೇ ಕೂತು ಕೊನೆಯ ಬಾರಿ ಫೈಲ್ ಗೆ ಸಹಿ ಮಾಡಿದ್ದ ಪರಿಕ್ಕರ್!
ಪಣಜಿ, ಮಾರ್ಚ್ 18: ರಾಜಕಾರಣದಲ್ಲಿದ್ದುಕೊಂಡೂ ಸರಳತೆ, ಪ್ರಾಮಾಣಿಕತೆ, ಮಾನವೀಯತೆಯಿಂದ ಬದುಕುವುದುಕ್ಕೆ ಸಾಧ್ಯ ಎಂಬುದನ್ನು ಸಾಬೀತುಪಡಿಸಿದ ಮನೋಹರ್ ಪರಿಕ್ಕರ್ ಅವರಿಗೆ ತಮ್ಮ ಕೆಲಸದ ಮೇಲಿದ್ದ ಸಮರ್ಪಣಾಭಾವ ಎಂಥದ್ದು ಎಂಬುದಕ್ಕೆ ಸಾಕಷ್ಟು ನಿದರ್ಶನಗಳು ಸಿಗುತ್ತವೆ.
ಅದಕ್ಕೆ ಒಂದು ಅತ್ಯುತ್ತಮ ಉದಾಹರಣೆ ಮರಣಶಯ್ಯೆಯಲ್ಲಿ ಮಲಗಿಯೇ ಅವರು ಇತ್ತೀಚೆಗೆ ಮಹತ್ವದ ಕಡತವೊಂದಕ್ಕೆ ಸಹಿ ಮಾಡಿದ್ದು. ಗೋವಾ ಸಚಿವ ವಿಶ್ವಜಿತ್ ರಾಣೆ ಅವರು ಚಾನೆಲ್ ವೊಂದಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ಮನೋಹರ್ ಪರಿಕ್ಕರ್ ಅವರ ಕರ್ತವ್ಯ ಪ್ರಜ್ಞೆಯ ಬಗ್ಗೆ ಮಾತನಾಡುತ್ತಿದ್ದರು.

ಸಂದರ್ಭದಲ್ಲಿ ಮಹತ್ವದ ಕಡತವೊಂದಕ್ಕೆ ತು ಸಹಿ ಮಾಡಬೇಕಿದೆ ಎಂದು ಖುದ್ದು ಅವರೇ ರಾಣೆ ಅವರನ್ನು ಆಸ್ಪತ್ರೆಗೆ ಕರೆಸಿಕೊಂಡಿದ್ದ ಘಟನೆಯನ್ನು ನೆನಪಿಸಿಕೊಂಡರು.
ಪರಿಕ್ಕರ್ ಅವರು ಪ್ಯಾಂಕ್ರಿಯಾಸ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂಬುದು ತಿಳಿದಂದಿನಿಂದಲೂ ಅವರು ತಮ್ಮ ಕರ್ತವ್ಯಕ್ಕೆ ಎಂದಿಗೂ ಚ್ಯುತಿ ಬರುವಂತೆ ವರ್ತಿಸಿಲ್ಲ. ಕೊನೆಯ ಉಸಿರಿರುವವರೆಗೂ ಗೋವಾ ಜನರ ಸೇವೆ ಸಲ್ಲಿಸುತ್ತೇನೆ ಎಂದಿದ್ದ ಅವರು ತಮ್ಮ ಮಾತನ್ನು ಕೊನೆಗೂ ಉಳಿಸಿಕೊಂಡರು.

ಮರಣಶಯ್ಯೆಯಲ್ಲಿ ಮಲಗಿಯೇ ಕಡತಕ್ಕೆ ಸಹಿ!
"ಪರಿಕ್ಕರ್ ಅವರು ಸಹಿ ಮಾಡಿದ ಕಟ್ಟಕಡೆಯ ಕಡತ ನಾನೇ ಒಯ್ದಿದ್ದು. ಅವರು ಆಸ್ಪತ್ರೆಯಲ್ಲಿ ಮಲಗಿದ್ದಾಗ ನನ್ನನ್ನು ಕರೆದು ಆ ಕಡತಕ್ಕೆ ನಾನು ಸಹಿ ಮಾಡಬೇಕು ಎಂದಿದ್ದರು. ಸಹಿ ಮಾಡಿದರು ಕೂಡ. ಆದರೆ ಅದೇ ಅವರು ಸಹಿ ಮಾಡಿದ ಕೊನೆಯ ಕಡತವಾಗುತ್ತದೆ ಎಂಬುದು ನನಗೆ ಗೊತ್ತಿರಲಿಲ್ಲ" ಎಂದು ವಿಶ್ವಜಿತ್ ರಾಣೆ ಹೇಳಿದರು.
"ಪರಿಕ್ಕರ್ ಅವರ ಸ್ಥಾನವನ್ನು ಇನ್ಯಾರೂ ತುಂಬುವುದಕ್ಕೆ ಸಾಧ್ಯವಿಲ್ಲ. ಅವರ ಅಗಲಿಕೆ ಗೋವಾ ರಾಜಕೀಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಒಂದು ಶಾಶ್ವತವಾದ ನಿರ್ವಾತ ಸೃಷ್ಟಿಸಿದೆ" ಎಂದು ರಾಣೆ ಭಾವುಕರಾಗಿ ನುಡಿದರು.

ನ್ಯಾಸೋ ಗ್ಯಾಸ್ಟ್ರಿಕ್ ಟ್ಯೂಬ್ ತೊಟ್ಟೇ ಕೆಲಸ
ಕಳೆದ ಡಿಸೆಂಬರ್ ನಲ್ಲಿ ಮಾಂಡೋವಿ ನದಿಯ ಸೇತಿವೆಯನ್ನು ವೀಕ್ಷಿಸಲು ಬಂದಿದ್ದ ಮನೋಹರ್ ಪರಿಕ್ಕರ್ ಅವರು ಮೂಗಿಗೆ ನ್ಯಾಸೋ ಗ್ಯಾಸ್ಟ್ರಿಕ್ ಟ್ಯೂಬ್ ತೊಟ್ಟು, ವೈದ್ಯರ ಸಹಾಯದಿಂದ ನಿಂತಿದ್ದ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ಪ್ರಚಾರದ ಗಿಮಿಕ್ ಎಂದು ಕೆಲವರು ಕರೆದರೆ, ಮನೋಹರ್ ಪರಿಕ್ಕರ್ ಅವರ ಕರ್ತವ್ಯಪ್ರಜ್ಞೆಗೆ ಸಾಕಷ್ಟು ಜನ ಸಲಾಂ ಎಂದಿದ್ದರು.

ಆಸ್ಪತ್ರೆಯಿಂದ ನೇರ ಸದನಕ್ಕೆ!
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಿಕ್ಕರ್, ಡಿಸ್ಚಾರ್ಜ್ ಆದ ದಿನವೇ ಆಸ್ಪತ್ರೆಯಿಂದ ನೇರ ವಿಧಾನಸಭೆಗೆ ಆಗಮಿಸಿ ಬಜೆಟ್ ಮಂಡಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆದಿದ್ದರು. ನಂತರ ಇತ್ತೀಚೆಗಷ್ಟೇ ಬಿಡುಗಡೆಯಾದ 'ಉರಿ' ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರವನ್ನು ನೋಡಿ, 'ಹೌ ಇಸ್ ದಿ ಜೋಶ್' ಎಂದು ಅಭಿಮಾನಿಗಳಲ್ಲಿ ಕೇಳುವ ಮೂಲಕ ಸುದ್ದಿಯಾಗಿದ್ದರು.

ಆಸ್ಪತ್ರೆಯಲ್ಲೇ ಸಭೆ!
ಆಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಮನೋಹರ್ ಪರಿಕ್ಕರ್ ಅವರು ತಮ್ಮ ಸಂಪುಟದ ಸಚಿವರನ್ನು ಕರೆಸಿ ಸಭೆ ನಡೆಸುತ್ತಿದ್ದರು. ಡಿಸ್ಚಾರ್ಜ್ ಆದ ಬಳಿಕವೂ, ತೀವ್ರ ಅನಾರೋಗ್ಯವಿದ್ದರೂ ಮೂಗಿಗೆ ನಳಿಕೆ ಸಿಕ್ಕಿಸಿಕೊಂಡೇ ಸಂಪುಟ ಸಭೆ ನಡೆಸುತ್ತಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications