ಬಿಜೆಪಿಯೊಂದಿಗಿನ ಮೈತ್ರಿ ತಳ್ಳಿಹಾಕಿದ ಗೋವಾ ಕಾಂಗ್ರೆಸ್ ನಾಯಕ ಮೈಕೆಲ್ ಲೋಬೋ
ಪಣಜಿ,ಜು.12: ಕಾಂಗ್ರೆಸ್ ವಿರುದ್ಧ ಬಿಜೆಪಿಯೊಂದಿಗೆ ಪಿತೂರಿ ನಡೆಸಿದ ಆರೋಪದ ಮೇಲೆ ಗೋವಾ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಂಡಿರುವ ಮೈಕೆಲ್ ಲೋಬೋ ಸೋಮವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ನಿರಾಕರಿಸಿದ್ದಾರೆ.
ಗೋವಾ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಸಂಬಂಧದ ಆರೋಪಗಳ ನಡುವೆ ಮೈಕೆಲ್ ಲೋಬೋ, ಇಲ್ಲ ನಾವು ಬಿಜೆಪಿಯೊಂದಿಗೆ ಯಾವುದೇ ಮೈತ್ರಿ ಮಾಡಿಕೊಂಡಿಲ್ಲ. ಯಾರೋ ವಿರೋಧ ಪಕ್ಷದ ನಾಯಕರಾಗಲು ಬಯಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಅದನ್ನು ಮಾಡುತ್ತಿದ್ದಾರೆ. ತಾನು ಇನ್ನೂ ಹಳೆಯ ಪಕ್ಷ ಕಾಂಗ್ರೆಸ್ನಲ್ಲಿಯೇ ಇದ್ದೇನೆ. ಪತ್ರಿಕಾಗೋಷ್ಠಿಗೆ ಹಾಜರಾಗದಿರುವುದು ಅನರ್ಹತೆಗೆ ಕಾರಣವಾಗುವುದಿಲ್ಲ ಎಂದು ಹೇಳಿದರು.
ಗೋವಾ ಕಾಂಗ್ರೆಸ್ ಬಿಕ್ಕಟ್ಟು; ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆರೋಪ
ಮುಕುಲ್ ವಾಸ್ನಿಕ್ ಅವರೊಂದಿಗಿನ ಭೇಟಿ ಸಿಎಲ್ಪಿ ಸಭೆಯಲ್ಲ. ಕಾಂಗ್ರೆಸ್ನ ಹಿರಿಯ ರಾಜ್ಯಸಭಾ ಸದಸ್ಯರು ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಇಲ್ಲಿಗೆ ಬಂದಿದ್ದರು. ನಾವು ಕಾಂಗ್ರೆಸ್ ಪಕ್ಷದೊಂದಿಗಿದ್ದೇವೆ ಎಂದು ನಾನು ಅವರಿಗೆ ಹೇಳಿದ್ದೇನೆ. ಪತ್ರಿಕಾಗೋಷ್ಠಿಗೆ ಹಾಜರಾಗದಿರುವುದು ಅನರ್ಹತೆಗೆ ಕಾರಣವಾಗುವುದಿಲ್ಲ ಎಂದು ಮೈಕೆಲ್ ಲೋಬೊ ಪುನರುಚ್ಚರಿಸಿದರು. ಅವರ ವಿರುದ್ಧದ ಬಿಜೆಪಿಯೊಂದಿಗೆ ಸೇರಿ ಪಿತೂರಿ ನಡೆಸಿದ ಆರೋಪದ ಮೇಲೆ ಅವರನ್ನು ಭಾನುವಾರ ಗೋವಾ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕಾಂಗ್ರೆಸ್ ತೆಗೆದುಹಾಕಿತು.
ಕಾಂಗ್ರೆಸ್ನ ಎಲ್ಲಾ 11 ಶಾಸಕರು ಪಕ್ಷದಲ್ಲೇ ಇದ್ದಾರೆ ಎಂದು ವಿರೋಧ ಪಕ್ಷದ ಉಪನಾಯಕ ಸಂಕಲ್ಪ್ ಅಮೋನ್ಕರ್ ಅವರು ಸದನದಲ್ಲಿ ಪ್ರಸ್ತಾಪಿಸಿದರು. ಆದರೆ ಅವರಲ್ಲಿ 7 ಮಂದಿ ನಿನ್ನೆ ಮತ್ತು ಇಂದು ಕಾಂಗ್ರೆಸ್ ಸಭೆಗೆ ಹಾಜರಾಗಿದ್ದರು. ನಾವು ಮಂಗಳವಾರ ಸಂಜೆ ಮತ್ತೆ ಸಿಎಲ್ಪಿ ಸಭೆ ಕರೆದಿದ್ದೇವೆ. ಎಷ್ಟು ಸದಸ್ಯರನ್ನು ನೋಡೋಣ ಎಂದು ಎಂದು ಗೋವಾ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಪಾಟ್ಕರ್ ಹೇಳಿದ್ದಾರೆ.
ಬಿಜೆಪಿ ಸೇರಲು 40 ಕೋಟಿ ರುಪಾಯಿ ಆಫರ್: ಗೋವಾ ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ
ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಚರ್ಚೆ
ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಮೇಲ್ವಿಚಾರಣೆಗಾಗಿ ಗೋವಾದಲ್ಲಿರುವ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ಅವರು ಗೋವಾದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಿದ್ದು, ಅಲ್ಲಿ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬುದರ ಕುರಿತು ಚರ್ಚಿಸಿದ್ದಾರೆ ಎಂದು ಹೇಳಿದರು. ಗೋವಾದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರೊಂದಿಗೆ ಸಭೆ ನಡೆಸಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ಪ್ರಕಾರ, ಕಾಂಗ್ರೆಸ್ ಶಾಸಕರು ಬಿಜೆಪಿ ತಮ್ಮನ್ನು ಒಡೆಯಲು ಸಾಧ್ಯವಿಲ್ಲ ಎಂದು ತೋರಿಸಿದ್ದಾರೆ. ಕೆಲವರು ವಿವಿಧ ರಾಜಕೀಯ ಪಕ್ಷಗಳ ಅದರಲ್ಲೂ ಕಾಂಗ್ರೆಸ್ನ ಶಾಸಕರನ್ನು ಒಡೆಯಲು ಬಯಸುತ್ತಾರೆ. ಅವರು ಗೋವಾದಲ್ಲಿ ನಮ್ಮ ಪಕ್ಷದೊಂದಿಗೆ ಅದೇ ರೀತಿ ಮಾಡಲು ಪ್ರಯತ್ನಿಸಿದರು. ಆದರೆ ಕಾಂಗ್ರೆಸ್ ಶಾಸಕರು ಇಲ್ಲಿ ಹಾಗೆ ಮಾಡುವವರ ದಯನೀಯ ವಿಫಲತೆಯನ್ನು ತೋರಿಸಿದ್ದಾರೆ ಎಂದು ವಾಸ್ನಿಕ್ ಹೇಳಿದರು.
ಯಾರೂ ನನ್ನ ಸಂಪರ್ಕದಲ್ಲಿಲ್ಲ
ಶಾಸಕರನ್ನು ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ನಾವು ಯಾರನ್ನೂ ಬಿಜೆಪಿಗೆ ಬರುವಂತೆ ಹೇಳಿಲ್ಲ. ರಾಜ್ಯಾಧ್ಯಕ್ಷರಾಗಿ ಯಾರೂ ನನ್ನ ಸಂಪರ್ಕದಲ್ಲಿಲ್ಲ. ಇದು ಅವರ ಆಂತರಿಕ ಜಗಳ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ್ದಾರೆ. ಬಿಜೆಪಿಯ ಕಾಂಗ್ರೆಸ್ನ ಐವರು ಶಾಸಕರು ಅಜ್ಞಾತರಾಗುತ್ತಿದ್ದಂತೆ ಬಿಜೆಪಿಯಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಮೇಲ್ವಿಚಾರಣೆಗಾಗಿ ಗೋವಾ ರಾಜ್ಯಕ್ಕೆ ಧಾವಿಸುವಂತೆ ಪಕ್ಷದ ಸಂಸದ ಮುಕುಲ್ ವಾಸ್ನಿಕ್ ಅವರಿಗೆ ಸೂಚಿಸಿದ್ದಾರೆ.
ಶಾಸಕರಿಗೆ ದೊಡ್ಡ ಮೊತ್ತದ ಹಣ
ಪಕ್ಷಾಂತರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೊ ಅವರನ್ನು ಕಾಂಗ್ರೆಸ್ ಭಾನುವಾರ ವಜಾಗೊಳಿಸಿದೆ. ಬಿಜೆಪಿಯು ಕಾಂಗ್ರೆಸ್ನ 2/3 ಭಾಗದಷ್ಟು ವಿಭಜನೆಗೆ ಪ್ರಯತ್ನಿಸುತ್ತಿದೆ ಹಾಗೂ ಪಕ್ಷದ ಶಾಸಕರಿಗೆ ದೊಡ್ಡ ಮೊತ್ತದ ಹಣವನ್ನು ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಶಾಸಕ ಸಂಕಲ್ಪ್ ಅಮೋನ್ಕರ್, ಇದು ಪ್ರಜಾಪ್ರಭುತ್ವದ ಕೊಲೆ. ಬಿಜೆಪಿ ಸರ್ಕಾರ ವಿರೋಧ ಪಕ್ಷವನ್ನು ಮುಗಿಸಲು ಬಯಸುತ್ತಿದೆ. ಬಿಜೆಪಿಯವರು ನಮ್ಮ 2/3ರಷ್ಟು ಶಾಸಕರನ್ನು ತಮ್ಮೊಂದಿಗೆ ವಿಲೀನಗೊಳಿಸಬೇಕೆಂದು ಪ್ರಯತ್ನಿಸಿದ್ದರು. ಆದರೆ ನಮ್ಮ ಶಾಸಕರು ಅದಕ್ಕೆ ಅವಕಾಶ ನೀಡಲಿಲ್ಲ. ನಾವು ಈಗ ಸಭೆ ನಡೆಸಿದ್ದೇವೆ. ಹೊಸ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುತ್ತೇವೆ. ಸದ್ಯಕ್ಕೆ ಎಲ್ಲಾ 11 ಶಾಸಕರು ಕಾಂಗ್ರೆಸ್ನಲ್ಲಿದ್ದಾರೆ ಎಂದರು.
ನನ್ನನ್ನು ಅನೇಕರು ಭೇಟಿಯಾಗಲು ಬರುತ್ತಾರೆ
ಲೋಬೋ ಅವರು ದಿಗಂಬರ ಕಾಮತ್ ಜೊತೆಗೂಡಿ ಬಿಜೆಪಿಯೊಂದಿಗಿನ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಮಧ್ಯೆ ಭಾನುವಾರ, ಕಾಂಗ್ರೆಸ್ ಶಾಸಕ ಮತ್ತು ಮೈಕೆಲ್ ಲೋಬೋ ಅವರ ಪತ್ನಿ ದೆಲಿಲಾ ಲೋಬೋ ಅವರು ಸಿಎಂ ಮತ್ತು ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರ ನಿವಾಸದಲ್ಲಿ ಕಂಡುಬಂದಿದ್ದರು. ಕಾಂಗ್ರೆಸ್ ಶಾಸಕರು ತಮ್ಮನ್ನು ಭೇಟಿ ಮಾಡಲು ಬಂದಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್, ಮುಖ್ಯಮಂತ್ರಿಯಾಗಿ ಅನೇಕರು ನನ್ನನ್ನು ಭೇಟಿಯಾಗಲು ಬರುತ್ತಾರೆ. ನಾಳೆ ವಿಧಾನಸಭೆ, ಜನರು ನನ್ನನ್ನು ಭೇಟಿ ಮಾಡಲು ಬರುತ್ತಾರೆ. ನಾನು ನನ್ನ ವಿಧಾನಸಭೆ ಕೆಲಸದಲ್ಲಿ ನಿರತನಾಗಿದ್ದೇನೆ. ಇತರ ಪಕ್ಷಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಾನು ಏಕೆ ಪ್ರತಿಕ್ರಿಯಿಸಬೇಕು? ಎಂದರು.