ಗೋವಾ ಚುನಾವಣೆ; ಜನರ ತೀರ್ಪು ಒಪ್ಪಿಕೊಂಡ ಕಾಂಗ್ರೆಸ್ ನಾಯಕರು
ಪಣಜಿ, ಮಾರ್ಚ್ 10; ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿವೆ. ರಾಜ್ಯದ 40 ವಿಧಾನಸಭಾ ಕ್ಷೇತ್ರಗಳ ಪೈಕಿ 37ರಲ್ಲಿ ಕಣಕ್ಕಿಳಿದಿದ್ದ ಪಕ್ಷದ ಎರಡಂಕಿ ತಲುಪಲು ಸಹ ಪರದಾಡಿದೆ. ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ.
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿದ್ದವು. ಆದರೆ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡುವಲ್ಲಿ ವಿಫಲವಾಗಿದೆ.
ರಾಜ್ಯದಲ್ಲಿ ಅಧಿಕಾರ ರಚನೆ ಮಾಡುವ ಉತ್ಸಾಹದಲ್ಲಿದ್ದ ಕಾಂಗ್ರೆಸ್ ನಾಯಕರು ಚುನಾವಣೆ ಸೋಲನ್ನು ಒಪ್ಪಿಕೊಂಡಿದ್ದಾರೆ. ಜವಾಬ್ದಾರಿಯುವ ಪ್ರತಿಪಕ್ಷವಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಗೋವಾ ಚುನಾವಣೆ ಕಾಂಗ್ರೆಸ್ ವೀಕ್ಷಕರಾಗಿದ್ದ ಪಿ. ಚಿದಂಬರಂ, ಎಐಸಿಸಿ ಗೋವಾ ಚುನಾವಣಾ ಉಸ್ತುವಾರಿ ದಿನೇಶ್ ಗುಂಡೂರಾವ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.
ಪಿ. ಚಿದಂಬರಂ ಮಾತನಾಡಿ, "ಪಕ್ಷಗಳ ನಡುವೆ ಮತ ವಿಭಜನೆ ಆಗಿದ್ದರಿಂದ ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಕಡಿಮೆ ಸ್ಥಾನಗಳು ಸಿಕ್ಕಿವೆ. ಬಿಜೆಪಿ ಶೇ 33ರಷ್ಟು ಮತಗಳಿಂದ ಜಯಗಳಿಸಿದೆ. ಉಳಿದ ಮತಗಳು ವಿಭಜನೆಯಾಗಿವೆ" ಎಂದರು.
"ನಾವು ಗೋವಾ ಜನರು ನೀಡಿದ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಹಲವಾರು ತೊಂದರೆಗಳ ನಡುವೆಯೂ ನಮ್ಮ ಅಭ್ಯರ್ಥಿಗಳು ಧೈರ್ಯದಿಂದ ಚುನಾವಣೆ ಎದುರಿಸಿದ್ದಾರೆ. ಬಿಜೆಪಿಗೆ ಜನರು ಅಧಿಕಾರ ನೀಡಿದ್ದು, ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಹಲವು ಕ್ಷೇತ್ರಗಳಲ್ಲಿ ನಾವು ಅತಿ ಕಡಿಮೆ ಮತಗಳಿಂದ ಸೋತಿದ್ದೇವೆ" ಎಂದು ಹೇಳಿದರು.
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 40 ಸದಸ್ಯ ಬಲದ ವಿಧಾನಸಭೆಯಲ್ಲಿ 20 ಸ್ಥಾನಗಳಲ್ಲಿ ಜಯಗಳಿಸಿದೆ. ಆದರೆ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ ಸಿಕ್ಕಿಲ್ಲ.
ಮೂವರು ಪಕ್ಷೇತರ ಶಾಸಕರು, ಎಂಜಿಪಿ ಪಕ್ಷ ಸಹ ಬಿಜೆಪಿಗೆ ಬೆಂಬಲ ನೀಡಿದ್ದು, ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ 17 ಸ್ಥಾನಗಳಲ್ಲಿ ಜಯಗಳಿಸಿದ್ದ ಕಾಂಗ್ರೆಸ್ ಈ ಬಾರಿ 10 ಸ್ಥಾನಗಳಲ್ಲಿ ಜಯಗಳಿಸಿದ್ದು (ಸಂಜೆ 5.30ರ) ಹೊತ್ತಿಗೆ 1 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಕಾಂಗ್ರೆಸ್ ಪಕ್ಷ ಗೋವಾ ಚುನಾವಣೆಯಲ್ಲಿ ಗೋವಾ ಫಾರ್ವರ್ಡ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿತ್ತು, ಪಕ್ಷಕ್ಕೆ 3 ಸ್ಥಾನಗಳನ್ನು ಬಿಟ್ಟುಕೊಟ್ಟಿತ್ತು. ಗೋವಾ ಫಾರ್ವರ್ಡ್ ಪಕ್ಷ 1 ಸ್ಥಾನದಲ್ಲಿ ಜಯಗಳಿಸಿದೆ.
ಸಂಜೆ 5.39ರ ಹೊತ್ತಿಗೆ ಫಲಿತಾಂಶ; ಬಿಜೆಪಿ 20, ಕಾಂಗ್ರೆಸ್ 10 (1 ಲೀಡ್), ಎಎಪಿ 2, ಆರ್ಜಿಪಿ 1, ಗೋವಾ ಫಾರ್ವರ್ಡ್ ಪಕ್ಷ 1, ಎಂಜಿಪಿ 2, ಪಕ್ಷೇತರರು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications