ಗೋವಾದಲ್ಲಿ ಅತಂತ್ರ ಫಲಿತಾಂಶದ ಮುನ್ಸೂಚನೆ: ಶಾಸಕರ ಹಿಡಿತಕ್ಕೆ ಮುಂದಾದ ಕಾಂಗ್ರೆಸ್
ಗೋವಾ, ಮಾ.10: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶ ಬರುವ ಮುನ್ನವೇ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ತನ್ನ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲು ಮುಂದಾಗಿದೆ.
40 ವಿಧಾನಸಭಾ ಕ್ಷೇತ್ರದ ಗೋವಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ತೀವ್ರ ಪೈಪೋಟಿ ನಡೆಸಿವೆ. ಮತದಾನೋತ್ತರ ಸಮೀಕ್ಷೆ ಪ್ರಕಾರ ಗೋವಾದಲ್ಲಿ ಯಾರಿಗೂ ಸ್ಪಷ್ಟ ಬಹುಮತ ಇದಲ್ಲದೆ ಅತಂತ್ರ ಫಲಿತಾಂಶ ಬರಬಹುದು ಎಂದು ನಿರೀಕ್ಷಿಸಲಾಗಿದೆ.
ಬೀಡು ಬಿಟ್ಟ ಕಾಂಗ್ರೆಸ್ ನಾಯಕರು:
ಗೋವಾದಲ್ಲಿ ಕಳೆದ ಬಾರಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಈ ಬಾರಿ ಆ ರೀತಿ ಆಗದಂತೆ ನೋಡಿಕೊಳ್ಳಲು ಎಲ್ಲ ಪ್ರಮುಖ ನಾಯಕರನ್ನು ಗೋವಾಕ್ಕೆ ಕಳುಹಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ದಿನಗಳ ಹಿಂದೆಯೇ ಗೋವಾಕ್ಕೆ ತೆರಳಿದ್ದಾರೆ. ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಅಲ್ಲಿಯೇ ಉಳಿದುಕೊಂಡಿದ್ದಾರೆ. ಇನ್ನು ಎಐಸಿಸಿ ವೀಕ್ಷಕ ಪಿ. ಚಿದಂಬರಂ, ವೀಕ್ಷಕ ಸತೀಶ್ ಜಾರಕಿಹೊಳಿ ಸಹಿತ ಎಲ್ಲರೂ ಗೋವಾದ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.

ಶಾಸಕರ ಸಭೆ:
ಪಿ. ಚಿದಂಬರಂ, ಡಿ.ಕೆ. ಶಿವಕುಮಾರ್ ಮತ್ತು ದಿನೇಶ್ ಗುಂಡೂರಾವ್ ಸಹಿತಿ ಹಲವು ನಾಯಕರು ಬುಧವಾರ ರಾತ್ರಿ ಮಡಗಾಂವ್ನಲ್ಲಿ ಗೋವಾದ ಹಾಲಿ ಶಾಸಕರು ಮತ್ತು ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು. ಗೋವಾ ವಿಧಾನಸಭೆ ಪ್ರತಿಪಕ್ಷ ನಾಯಕ ದಿಗಂಬರ ಕಾಮತ್, ಸುನೀಲ್, ಅಲೆಕ್ಸಿಯೋ ಸಿಕ್ವೆರಿಯೋ ಮತ್ತಿತರರು ಭಾಗವಹಿಸಿದ್ದರು.
ಗೋವಾದಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಅತಂತ್ರವಾದಲ್ಲಿ ಎಲ್ಲರೂ ಪಕ್ಷಕ್ಕೆ ನಿಷ್ಠರಾಗಿರಬೇಕು. ಉನ್ನತ ಮಟ್ಟದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಂಡರೂ ಅದನ್ನು ಎಲ್ಲರೂ ಬೆಂಬಲಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.

ಗೋವಾ ಮತದಾರರು ಬದಲಾವಣೆ ಬಯಸಿದ್ದಾರೆ
'ಗೋವಾ ಮತದಾರರು ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಸರ್ಕಾರ ತರಲು ಇಚ್ಚಿಸಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಕಳೆದ ಬಾರಿ ಆದ ತಪ್ಪು ಈ ಬಾರಿ ಮರುಕಳಿಸುವುದಿಲ್ಲವೇ ಎಂಬ ಪ್ರಶ್ನೆಗೆ, 'ನಮ್ಮ ಎಲ್ಲ ಸದಸ್ಯರು ಪಕ್ಷದ ಪರ ನಿಷ್ಠೆ ತೋರಿದ್ದು, ಯಾರೊಬ್ಬರೂ ಪಕ್ಷ ತೊರೆಯುವುದಿಲ್ಲ. ಎಲ್ಲರೂ ಒಟ್ಟಾಗಿ ಹೋರಾಡಿದ್ದು, ಪರಿಸ್ಥಿತಿಯನ್ನು ಒಟ್ಟಾಗಿ ನಿಭಾಹಿಸುತ್ತೇವೆ' ಎಂದರು.
ಗೋವಾದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂಬ ಸಿಎಂ ಅವರ ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಅನ್ಯ ಪಕ್ಷದ ಹಾಗೂ ಆ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ' ಎಂದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications