ಗೋವಾ; ಎಎಪಿ, ಟಿಎಂಸಿಗೆ ಟ್ವೀಟ್ ಬಾಣ ಬಿಟ್ಟ ಪಿ. ಚಿದಂಬರಂ
ಪಣಜಿ, ಜನವರಿ 17; "ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ" ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಎಎಪಿ ಮತ್ತು ಟಿಎಂಸಿಗೆ ಟ್ವೀಟ್ ಬಾಣ ಬಿಟ್ಟಿದ್ದಾರೆ. ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ.
ಗೋವಾ ಚುನಾವಣೆಗೆ ಕಾಂಗ್ರೆಸ್ ವೀಕ್ಷಕರಾಗಿರುವ ಪಿ. ಚಿದಂಬರಂ ಸೋಮವಾರ ವಿಧಾನಸಭೆ ಚುನಾವಣೆ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. ಗೋವಾದಲ್ಲಿ ಕಣಕ್ಕಿಳಿಯಲಿರುವ ಎಎಪಿ ಮತ್ತು ಟಿಎಂಸಿಗೆ ತಿರುಗೇಟು ನೀಡಿದರು.
"ನನ್ನ ವಿಶ್ಲೇಷಣೆ ಪ್ರಕಾರ ಎಎಪಿ ಮತ್ತು ಟಿಎಂಸಿ ಬಿಜೆಪಿ ಯೇತರ ಪಕ್ಷಗಳ ಮತಗಳನ್ನು ವಿಭಜನೆ ಮಾಡಲಿವೆ. ಇದು ಅರವಿಂದ ಕೇಜ್ರಿವಾಲ್ ಮೂಲಕ ಮತ್ತೊಮ್ಮೆ ಸಾಬೀತಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಇದೆ" ಎಂದು ಪಿ. ಚಿದಂಬರಂ ಟ್ವೀಟ್ ಮಾಡಿದ್ದಾರೆ.

"10 ವರ್ಷಗಳ ದುರಾಡಳಿತ ಬಳಿಕ ಬದಲಾವಣೆ ಬೇಕಾದ ಜನರು ಕಾಂಗ್ರೆಸ್ಗೆ ಮತ ನೀಡಲಿದ್ದಾರೆ. ಅದೇ ಆಡಳಿತ ಬೇಕು ಎನ್ನುವವರು ಬಿಜೆಪಿಗೆ ಮತ ನೀಡಲಿದ್ದಾರೆ" ಎಂದು ಪಿ. ಚಿದಂಬರಂ ಹೇಳಿದ್ದಾರೆ.
My assessment that the AAP (and the TMC) will only fracture the non-BJP vote in Goa has been confirmed by Mr Arvind Kejriwal
— P. Chidambaram (@PChidambaram_IN) January 17, 2022
The contest in Goa is between Congress and BJP
"ಗೋವಾದ ಜನರ ಮುಂದಿನ ಆಯ್ಕೆ ಸ್ಪಷ್ಟವಾಗಿದೆ. ನಿಮಗೆ ಹಿಂದಿನ ಅಭಿವೃದ್ಧಿ ಅಧ್ಯಾಯಗಳು ಬೇಕು ಎಂದರೆ ಕಾಂಗ್ರೆಸ್ಗೆ ಮತ ನೀಡಿ. ಬದಲಾವಣೆಗಾಗಿ ಕಾಂಗ್ರೆಸ್ಗೆ ಮತ ಕೊಡಿ" ಎಂದು ಪಿ. ಚಿದಂಬರಂ ಮನವಿ ಮಾಡಿದರು.
ಅರವಿಂದ್ ಕೇಜ್ರಿವಾಲ್ ಪ್ರಚಾರ; ಗೋವಾ ವಿಧಾನಸಭೆ ಚುನಾವಣೆ ಫೆಬ್ರವರಿ 14ರಂದು ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ. ಟಿಎಂಸಿ ಮತ್ತು ಎಎಪಿ ಮೊದಲ ಬಾರಿಗೆ ಗೋವಾ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ.
ಶನಿವಾರ ಮತ್ತು ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಹ ಪಕ್ಷ ಬಿಡುಗಡೆ ಮಾಡಿದೆ. ಭಾನುವಾರ ಗೋವಾ ಚುನಾವಣಗೆ 13 ಅಂಶಗಳ ಕಾರ್ಯಕ್ರಮಗಳನ್ನು ಸಹ ಕ್ರೇಜ್ರಿವಾಲ್ ಘೋಷಣೆ ಮಾಡಿದರು.
ಕಾಂಗ್ರೆಸ್ ಗೋವಾ ಚುನಾವಣೆ ಎದುರಿಸಲು ಗೋವಾ ಫಾರ್ವರ್ಡ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. 2017ರ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು.
ಮೈತ್ರಿ ಇಂದ ಕಾಂಗ್ರೆಸ್ ದೂರ; ಗೋವಾ ವಿಧಾನಸಭೆ ಚುನಾವಣೆಗೆ ಎನ್ಸಿಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿವೆ. ಆದರೆ ಕಾಂಗ್ರೆಸ್ ಪಕ್ಷ ಈ ಮೈತ್ರಿಕೂಟಕ್ಕೆ ಸೇರಿಲ್ಲ. ಶೀವಸೇನೆ ಕಾಂಗ್ರೆಸ್ಗೆ ಮೈತ್ರಿಕೂಟದ ಸೀಟು ಹಂಚಿಕೆ ಸಭೆಗೆ ಬರುವಂತೆ ಆಹ್ವಾನ ನೀಡಿತ್ತು. ಆದರೆ ಕಾಂಗ್ರೆಸ್ ಸೀಟು ಹಂಚಿಕೆಗೆ ಒಪ್ಪದೇ ಮೈತ್ರಿಕೂಟದಿಂದ ದೂರವಾಗಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ಸಿಪಿ ಜೊತೆ ಸೇರಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ ಗೋವಾದಲ್ಲಿ ಎರಡೂ ಪಕ್ಷಗಳ ಜೊತೆ ಹೊಂದಾಣಿಕೆಗೆ ಒಪ್ಪಿಗೆ ನೀಡಿಲ್ಲ. ಅಲ್ಲದೇ ಟಿಎಂಸಿ ಕಾಂಗ್ರೆಸ್ ಜೊತೆ ಮೈತ್ರಿ ಬಯಸಿತ್ತು. ಆದರೆ ಪಕ್ಷ ನಿರಾಕರಿಸಿದೆ.
ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿವೆ. ಅಲ್ಲದೇ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಎಎಪಿ ಪಕ್ಷ ಎರಡನೇ ಅತಿದೊಡ್ಡ ಪಕ್ಷವಾಗಲಿದ್ದು, ಪ್ರತಿಪಕ್ಷ ಸ್ಥಾನ ಅಲಂಕರಿಸಲಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ.
ಶಿವಸೇನೆ ನಾಯಕ ಸಂಜಯ್ ರಾವತ್ ಮಾತನಾಡಿ, "ಗೋವಾದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಕಣಕ್ಕಿಳಿದರೆ ಶಾಸಕರ ಸಂಖ್ಯೆ ಒಂದಂಕಿ ದಾಟುವುದಿಲ್ಲ. ಕಾಂಗ್ರೆಸ್ 30 ಸ್ಥಾನದಲ್ಲಿ ಸ್ಪರ್ಧಿಸಲಿ ಉಳಿದ ಕ್ಷೇತ್ರವನ್ನು ಮೈತ್ರಿಕೂಟಕ್ಕೆ ಬಿಟ್ಟುಕೊಡಲಿ" ಎಂದು ಹೇಳಿದ್ದಾರೆ.
Recommended Video
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications