ಗೋವಾ ಚುನಾವಣೆ: ಪಣಜಿಯಲ್ಲಿ ನಾಮಪತ್ರ ಸಲ್ಲಿಸಲಿರುವ ಉತ್ಪಲ್ ಪರಿಕ್ಕರ್
ಪಣಜಿ, ಜನವರಿ 27: ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಪಣಜಿಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಇಂದು(ಜ.27) ನಾಮಪತ್ರ ಸಲ್ಲಿಸಲಿದ್ದಾರೆ.
ಗೋವಾ ಚುನಾವಣೆ ಇದೀಗ ರಂಗೇರಿದೆ. ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿತ್ತು. ಗೋವಾ ಚುನಾವಣೆಗೆ ಸ್ಪರ್ಧಿಸುವ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಇದೀಗ ಪರಿಕ್ಕರ್ ಕುಟುಂಬದ ತಲೆನೋವು ಎದುರಿಸುತ್ತಿದೆ.
ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅಸಮಾಧಾನ ತೋಡಿಕೊಂಡ ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ.

ಗೋವಾ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಪಣಜಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಉತ್ಪಲ್ ಪರಿಕ್ಕರ್ ಘೋಷಿಸಿದ್ದಾರೆ.
ಮನೋಹರ್ ಪರಿಕ್ಕರ್ ನಿಧನದ ಬಳಿಕ ಉತ್ಪಲ್ ಪರಿಕ್ಕರ್ ಗೋವಾ ಬಿಜೆಪಿಯಲ್ಲಿ ತಮ್ಮ ಸ್ಥಾನ ಗಟ್ಟಿಮಾಡಿಕೊಳ್ಳಲು ಯತ್ನಿಸಿದ್ದರು. ಇದೇ ವೇಳೆ ಪರಿಕ್ಕರ್ ಕುಟುಂಬ ಹಾಗೂ ಬಿಜೆಪಿ ನಡುವೆ ತಿಕ್ಕಾಟ ನಡೆಯುತ್ತಲೇ ಬಂದಿತ್ತು. ಇದೀಗ ಸ್ಫೋಟಗೊಂಡಿದೆ.
ಬಿಜೆಪಿ ಹೈಕಮಾಂಡ್ ಗೋವಾ ಚುನಾವಣೆ ಅಖಾಡಕ್ಕೆ 34 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಉತ್ಪಲ್ ಪರಿಕ್ಕರ್ ಹೆಸರು ಕೈಬಿಡಲಾಗಿತ್ತು. ಇದು ಉತ್ಪಾಲ್ ಪರಿಕ್ಕರ್ ಅಸಮಾಧಾನಕ್ಕೆ ಕಾರಣವಾಗಿತ್ತು. ಬಹಿರಂಗವಾಗಿ ಅಸಮಾಧಾನ ತೋಡಿಕೊಂಡ ಉತ್ಪಾಲ್ ಪರಿಕ್ಕರ್ ಟಿಕೆಟ್ಗಾಗಿ ಪ್ರತಿಭಟನೆ ಆರಂಭಿಸಿದ್ದರು.
ಅನಾರೋಗ್ಯದಿಂದ ನಿಧನರಾಗಿರುವ ಮನೋಹರ್ ಪರಿಕ್ಕರ್ 25 ವರ್ಷಗಳಿಂದ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ತಂದೆಯ ಅನುಕಂಪ ಕಾರಣ ಪಣಜಿ ಕ್ಷೇತ್ರದಿಂದ ಗೆಲುವು ಸುಲಭ ಅನ್ನೋದು ಉತ್ಪಲ್ ಪರಿಕ್ಕರ್ ಲೆಕ್ಕಾಚಾರವಾಗಿತ್ತು. ಆದರೆ ಮನೋಹರ್ ಪರಿಕ್ಕರ್ ನಿಧನದ ಬಳಿಕ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವ ಅಟಾನಾಸಿಯೋ ಮೊನ್ಸೆರೇಟ್ಗೆ ಟಿಕೆಟ್ ನೀಡಲಾಗಿದೆ. ಈ ಬಾರಿ ಈ ಟಿಕೆಟ್ ತನಗೆ ಬೇಕು ಎಂದು ಉತ್ಪಾಲ್ ಪರಿಕ್ಕರ್ ಪಟ್ಟು ಹಿಡಿದಿದ್ದರು.
ಪರಿಕ್ಕರ್ ಕುಟುಂಬ ಬಿಜೆಪಿ ಕುಟುಂಬವಾಗಿದೆ. ಗೋವಾ ಹಾಗೂ ಕೇಂದ್ರದಲ್ಲಿ ಮನೋಹರ್ ಪರಿಕ್ಕರ್ ಕೊಡುಗೆಯನ್ನು ಬಿಜೆಪಿ ಸದಾ ಸ್ಮರಿಸಲಿದೆ. ಹೀಗಾಗಿ ಪರಿಕ್ಕರ್ ಕುಟುಂಬವನ್ನು ಬಿಜೆಪಿ ಅತ್ಯಂತ ಗೌರವದಿಂದ ಕಾಣುತ್ತದೆ.
ಉತ್ಪಲ್ ಪರಿಕ್ಕರ್ ಪಣಜಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ ಹಾಲಿ ಎಂಎಲ್ಎ ಈಗಾಗಲೇ ಈ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿರುವುದರಿಂದ ಅವರನ್ನು ಕೈಬಿಟ್ಟು ಉತ್ಪಲ್ಗೆ ಟಿಕೆಟ್ ನೀಡುವುದು ಸರಿಯಲ್ಲ. ಉತ್ಪಾಲ್ಗೆ ಬೇರೆ ಎರಡು ಕ್ಷೇತ್ರ ಸೂಚಿಸಲಾಗಿದೆ. ಆದರೆ ಉತ್ಪಾಲ್ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಇವರ ಜೊತೆಗೆ ಚರ್ಚಿಸುತ್ತೇವೆ ಎಂದು ಗೋವಾ ಚುನಾವಣೆ ಬಿಜೆಪಿ ಉಸ್ತುವಾರಿ ನಾಯಕ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಇದರ ನಡುವೆ ಉತ್ಪಲ್ ಪರಿಕ್ಕರ್ ಅಸಮಾಧಾನವನ್ನು ಆಮ್ ಆದ್ಮಿ ಪಕ್ಷ ಹಾಗೂ ಶಿವಸೇನೆ ಲಾಭ ಪಡೆಯಲು ಯತ್ನಿಸಿದೆ. ಪಣಜಿ ಕ್ಷೇತ್ರದಿಂದ ಉತ್ಪಾಲ್ ಪರಿಕ್ಕರ್ಗೆ ಆಮ್ ಆದ್ಮಿ ಪಾರ್ಟಿ ಟಿಕೆಟ್ ನೀಡುವುದಾಗಿ ಸ್ವತಃ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಇದು ಬಿಜೆಪಿ ಹಾಗೂ ಆಮ್ ಆದ್ಮಿ ಪಾರ್ಟಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಶಿವಸೇನೆ ಪಕ್ಷ ಕೂಡ ಪಣಜಿ ಕ್ಷೇತ್ರದಿಂದಲೇ ಉತ್ಪಲ್ ಪರಿಕ್ಕರ್ಗೆ ಟಿಕೆಟ್ ನೀಡುವುದಾಗಿ ಘೋಷಿಸಿದೆ. ಇತರ ಪಕ್ಷಗಳಿಂದ ಭಾರಿ ಬೆಂಬಲ ಪಡೆದಿರುವ ಉತ್ಪಾಲ್ ಪರಿಕ್ಕರ್ ಇದೀಗ ಎಲ್ಲಾ ಉಹೆಗಳನ್ನು ತಲೆಕೆಳಗಾಗಿ ಮಾಡಿದ್ದಾರೆ.
Recommended Video
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications