ಗೋವಾದಲ್ಲಿ ಕೊರೊನಾವೈರಸ್ 2ನೇ ಡೋಸ್ ಲಸಿಕೆ ವಿತರಣೆ
ಪಣಜಿ, ಫೆಬ್ರವರಿ.13: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಗೋವಾದಲ್ಲಿ ರಾಜ್ಯ ಸರ್ಕಾರ ಶನಿವಾರದಿಂದ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ಆರಂಭಿಸಿದೆ.
ಕಳೆದ 28 ದಿನಗಳ ಹಿಂದೆ ಯಾರು ಮೊದಲ ಬಾರಿ ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಂಡಿದ್ದರೋ ಅವರಿಗೆ ಶನಿವಾರದಿಂದ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ರಾಜ್ಯ ಲಸಿಕೆ ವಿತರಣೆ ಮುಖ್ಯಾಧಿಕಾರಿ ಡಾ. ರಾಜೇಂದ್ರ ಬೋರ್ಕರ್ ತಿಳಿಸಿದ್ದಾರೆ.
ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜನವರಿ.16ರಂದು ಆರೋಗ್ಯ ಕಾರ್ಯಕರ್ತ ರಂಗನಾಥ್ ಭೊಜ್ಜೆ ಅವರಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನ್ನು ನೀಡಲಾಗಿತ್ತು. ಗೋವಾದಲ್ಲೇ ಲಸಿಕೆ ಹಾಕಿಸಿಕೊಂಡ ಮೊದಲ ಆರೋಗ್ಯ ಕಾರ್ಯಕರ್ತನಿಗೇ ಇಂದೂ ಕೂಡಾ ಮೊದಲಿಗೆ ಎರಡನೇ ಡೋಸ್ ಲಸಿಕೆಯನ್ನು ಹಾಕಲಾಯಿತು.

ಗೋವಾದಲ್ಲಿ 10,000ಕ್ಕಿಂತ ಹೆಚ್ಚು ಸಿಬ್ಬಂದಿಗೆ ಮೊದಲ ಲಸಿಕೆ:
ಕೊರೊನಾವೈರಸ್ ಲಸಿಕೆ ಪಡೆಯುವುದಕ್ಕೆ ಗೋವಾದಲ್ಲಿ 19,952 ಆರೋಗ್ಯ ಸಿಬ್ಬಂದಿಯ ಹೆಸರು ಪಟ್ಟಿ ಮಾಡಲಾಗಿದೆ. ಈ ಪೈಕಿ ಶೇ.52ರಷ್ಟು ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಅಂದರೆ 10,341 ಫಲಾನುಭವಿಗಳು ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಫೆಬ್ರವರಿ.20ರವರೆಗೂ ಮೊದಲನೇ ಡೋಸ್ ಲಸಿಕೆ ನೀಡುವ ಅಭಿಯಾನ ನಡೆಸಲಾಗುತ್ತದೆ ಎಂದು ಡಾ. ರಾಜೇಂದ್ರ ಬೋರ್ಕರ್ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ 79.67 ಮಂದಿಗೆ ಲಸಿಕೆ:
ಭಾರತದಲ್ಲಿ 28 ದಿನಗಳಲ್ಲಿ 79,67,647 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದ್ದು, ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. 5,909,136 ಆರೋಗ್ಯ ಸಿಬ್ಬಂದಿ ಮತ್ತು 2,058,511 ಕಾರ್ಮಿಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications