ಗೋವಾ; ಬಿಜೆಪಿಗೆ ತಲೆನೋವಾದ ಕ್ರಿಶ್ಚಿಯನ್ ಶಾಸಕರ ರಾಜೀನಾಮೆ!
ಪಣಜಿ, ಜನವರಿ 11; ಗೋವಾ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಕ್ರಿಶ್ಚಿಯನ್ ಸಮುದಾಯದ ಶಾಸಕರ ರಾಜೀನಾಮೆ ತಲೆನೋವಾಗಿದೆ. ಫೆಬ್ರವರಿ 14ರಂದು 40 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯಲಿದೆ.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದಲ್ಲಿ ಸಚಿವರಾಗಿದ್ದ ಮೈಕಲ್ ಲೋಬೋ ಸೋಮವಾರ ಸಚಿವ, ಶಾಸಕಸ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಕೊಟ್ಟಿದ್ದಾರೆ.
ಬಿಜೆಪಿ ಮೂಲಗಳ ಪ್ರಕಾರ ಚುನಾವಣೆಯಲ್ಲಿ ಪತ್ನಿಗೆ ಟಿಕೆಟ್ ಕೊಡಿಸಲು ಮೈಕಲ್ ಲೋಬೋ ಪ್ರಯತ್ನ ನಡೆಸಿದ್ದರು. ಆದರೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆಯೇ ಪಕ್ಷ ತೊರೆದಿದ್ದಾರೆ.

ಮೈಕಲ್ ಲೋಬೋ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಬಲವಾಗಿ ಹಬ್ಬಿವೆ. ಆದರೆ ಪಕ್ಷ ಪತ್ನಿಗೆ ಟಿಕೆಟ್ ನೀಡುವ ಭರವಸೆ ಕೊಟ್ಟಿದೆಯೇ? ಎಂಬುದು ಇನ್ನೂ ಗುಟ್ಟಾಗಿ ಉಳಿದಿದೆ. ಗೋವಾದಲ್ಲಿ ಮೊದಲ ಬಾರಿ ಚುನಾವಣಾ ಕಣಕ್ಕಿಳಿಯುತ್ತಿರುವ ಟಿಎಂಸಿ ಮೈಕಲ್ ಲೋಬೋ ಸೆಳೆಯಲು ಪ್ರಯತ್ನ ನಡೆಸಿದೆ ಎಂಬ ಸುದ್ದಿಯೂ ಹರಿದಾಡುತ್ತಿದೆ.
ಕಲಂಘಾಟ್ ಕ್ಷೇತ್ರದ ಶಾಸಕರಾಗಿದ್ದ ಮೈಕಲ್ ಲೋಬೋ ಉತ್ತರ ಗೋವಾದ ಪ್ರಭಾವಿ ನಾಯಕ. 5 ರಿಂದ 6 ಕ್ಷೇತ್ರಗಳಲ್ಲಿ ತಮ್ಮ ಪ್ರಭಾವವನ್ನು ಹೊಂದಿದ್ದಾರೆ. "ಬಿಜೆಪಿ ಜನ ಸಾಮಾನ್ಯರ ಪಕ್ಷವಾಗಿ ಉಳಿದಿಲ್ಲ. ತಳಮಟ್ಟದ ಕಾರ್ಯಕರ್ತರನ್ನು ಸಹ ಕಡೆಗಣಿಸಲಾಗುತ್ತಿದೆ" ಎಂದು ಲೋಬೋ ಆರೋಪ ಮಾಡಿದ್ದಾರೆ.
ಮೂವರು ಶಾಸಕರ ರಾಜೀನಾಮೆ; ಮೈಕಲ್ ಲೋಬೋ ಬಿಜೆಪಿ ತೊರೆದ ಮೊದಲ ಕ್ರಿಶ್ಚಿಯನ್ ಸಮುದಾಯದ ಶಾಸಕರಲ್ಲ. ಈಗಾಗಲೇ ಅಲಿನಾ ಸಾಲ್ದಾನಾ, ಕಾರ್ಲೊಸ್ ಅಲ್ಮೇಡಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ತಿಂಗಳು ಬಿಜೆಪಿ ಬಿಟ್ಟಿದ್ದ ಅಲಿನಾ ಸಾಲ್ದಾನಾ ಎಎಪಿ ಸೇರಿದ್ದಾರೆ. ವಾಸ್ಕೋ ಕ್ಷೇತ್ರದ ಶಾಸಕರಾಗಿದ್ದ ಕಾರ್ಲೊಸ್ ಅಲ್ಮೇಡಾ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಟಿಎಂಸಿ ಸೇರುವಂತೆ ಪ್ರಶಾಂತ್ ಕಿಶೋರ್ ಮೈಕಲ್ ಲೋಬೋ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಯೂ ಇದೆ.
ಕ್ರಿಶ್ಚಿಯನ್ ಸಮುದಾಯ; 40 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಚಿಕ್ಕ ರಾಜ್ಯ ಗೋವಾ. ರಾಜ್ಯದಲ್ಲಿ ಶೇ 27ರಷ್ಟು ಕ್ರಿಶ್ಚಿಯನ್ ಸಮುದಾಯದ ಮತಗಳಿದ್ದು, ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಲಿದ್ದಾರೆ.
ರಾಜ್ಯದಲ್ಲಿ ಶೇ 8ರಷ್ಟು ಮುಸ್ಲಿಂ, ಶೇ 20ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತಗಳಿವೆ. ಕಾಂಗ್ರೆಸ್ ಪಕ್ಷ ಮುಸ್ಲಿಂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತಗಳ ಮೇಲೆ ಕಣ್ಣಿಟ್ಟಿದ್ದು, ರಾಜ್ಯದಲ್ಲಿ ಅಧಿಕಾರ ಪಡೆಯುವ ನೀರಿಕ್ಷೆಯಲ್ಲಿದೆ.
ಕ್ರಿಶ್ಚಿಯನ್, ಮುಸ್ಲಿಂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತದಾರರು ಕಾಂಗ್ರೆಸ್ ಬೆಂಬಲಿಸುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದ್ದರಿಂದಲೇ 2017ರ ಚುನಾವಣೆಯಲ್ಲಿ 17 ಸ್ಥಾನಗಳಲ್ಲಿ ಪಕ್ಷ ಗೆಲುವು ಸಾಧಿಸಿತ್ತು. ಆದರೆ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು.
ಕಳೆದ ಚುನಾವಣೆಯಲ್ಲಿ 40 ಕ್ಷೇತ್ರಗಳ ಪೈಕಿ 37ರಲ್ಲಿ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ 17ರಲ್ಲಿ ಗೆದ್ದಿತ್ತು. 36 ಸ್ಥಾನಗಳಲ್ಲಿ ಕಣಕ್ಕಿಳಿದಿದ್ದ ಬಿಜೆಪಿ 13 ಸ್ಥಾನ ಗೆದ್ದಿತ್ತು. ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.
ಚುನಾವಣೆಯಲ್ಲಿ ಕಾಂಗ್ರೆಸ್ ಶೇ 28.35ರಷ್ಟು ಮತ ಪಡೆದಿತ್ತು. ಬಿಜೆಪಿ 32.48ರಷ್ಟು ಮತಗಳಿಸಿತ್ತು. ಈಗ ಕ್ರಿಶ್ಚಿಯನ್ ಸಮುದಾಯ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದ್ದರಿಂದ ಶಾಸಕರು ಪಕ್ಷ ಬಿಟ್ಟು ಬೇರೆ ಪಕ್ಷದತ್ತ ಹೊರಟಿದ್ದಾರೆ.
ಈ ಬಾರಿಯ ಚುನಾವಣೆ ಪೂರ್ವ ಸಮೀಕ್ಷೆಗಳು ಬಿಜೆಪಿ ಮರಳಿ ಅಧಿಕಾರ ಪಡೆಯಲಿವೆ. ಎಎಪಿ ಪ್ರತಿಪಕ್ಷ ಸ್ಥಾನಕ್ಕೆ ಬರಲಿದೆ. ಕಾಂಗ್ರೆಸ್ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಲಿವೆ ಎಂದು ಹೇಳಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications