ಗೋವಾ; 36 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ಪಣಜಿ, ಜನವರಿ 23; " ಗೋವಾ ವಿಧಾನಸಭೆ ಚುನಾವಣೆಗೆ 37 ಕ್ಷೇತ್ರಗಳ ಪೈಕಿ 36 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಇನ್ನೊಂದು ಕ್ಷೇತ್ರಕ್ಕೆ ಶೀಘ್ರವೇ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ" ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಹೇಳಿದರು.
ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "36 ಅಭ್ಯರ್ಥಿಗಳ ಜೊತೆ ಶನಿವಾರ ಸಭೆ ನಡೆಸಲಾಗಿದೆ. ಎಲ್ಲಾ ಅಭ್ಯರ್ಥಿಗಳಿ ಒಗ್ಗಟ್ಟಾಗಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾದರೆ 5 ವರ್ಷಗಳ ಕಾಲ ಪಕ್ಷದಲ್ಲಿಯೇ ಇರುವುದಾಗಿ ಭರವಸೆ ನೀಡಿದ್ದಾರೆ" ಎಂದರು.
"ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ನಂಬಿಕೆ ಇದೆ. ಗೋವಾದ ಜನರು ರಾಜ್ಯದ ಹಿತಕ್ಕಾಗಿ ಪಕ್ಷವನ್ನು ಚುನಾವಣೆಯಲ್ಲಿ ಬೆಂಬಲಿಸಲಿದ್ದಾರೆ. ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಲಿದೆ" ಎಂದು ಪಿ. ಚಿದಂಬರಂ ವಿಶ್ವಾಸ ವ್ಯಕ್ತಪಡಿಸಿದರು.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, "ಕಾಂಗ್ರೆಸ್ನ ಪ್ರತಿ ವೋಟು ಬಿಜೆಪಿಗೆ ಮತ ಹಾಕಿದಂತೆ" ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪಿ. ಚಿದಂಬರಂ, "ನಾನು ಕಾಂಗ್ರೆಸ್ ಪಕ್ಷದಲ್ಲಿ ಒಂದು ಉನ್ನತ ಸ್ಥಾನದಲ್ಲಿದ್ದೇನೆ. ಟಿಎಂಸಿಯ ಒಬ್ಬ ಸಂಸದನ ಹಂತಕ್ಕೆ ಇಳಿದು ಪ್ರತಿಕ್ರಿಯೆ ನೀಡಲಾರೆ" ಎಂದರು.
"ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಸಾಮರ್ಥ್ಯ, ಸದಸ್ಯರ ಬಲ, ತಳ ಮಟ್ಟದ ಕಾರ್ಯಕರ್ತರನ್ನು ಹೊಂದಿದೆ. ಈ ಹಿಂದೆ ಗೋವಾ ಜನರ ಸೇವೆಯನ್ನು ಮಾಡಿದೆ. ಗೋವಾದ ಜನರು ಕಾಂಗ್ರೆಸ್ಗೆ ಮತ ನೀಡಿದರೆ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಸಂಕಲ್ಪದೊಂದಿಗೆ ಮತದಾನ ಮಾಡಲಿದ್ದಾರೆ" ಎಂದು ಪಿ. ಚಿದಂಬರಂ ಹೇಳಿದರು.
ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ; ಗೋವಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವ ಕುರಿತು ಮಾತನಾಡಿದ ಪಿ. ಚಿದಂಬರಂ, "ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಎಲ್ಲಾ ಅಭ್ಯರ್ಥಿಗಳ ಸಭೆ ಕರೆಯುತ್ತೇವೆ" ಎಂದರು.
"ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವಿಚಾರದಲ್ಲಿ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಚುನಾವಣೆಗೂ ಮೊದಲು ಘೋಷಣೆ ಮಾಡಬೇಕೋ?, ಬಳಿಕವೋ ಎಂದು ಅಭಿಪ್ರಾಯ ಸಂಗ್ರಹಿಸಿ ಎಐಸಿಸಿಗೆ ಸಲ್ಲಿಕೆ ಮಾಡಲಾಗುತ್ತದೆ. ಈ ಕುರಿತು ಎಐಸಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ 37ರಲ್ಲಿ ಅಭ್ಯರ್ಥಿ ಕಣಕ್ಕಿಳಿಸುತ್ತಿದೆ. ಟಿಎಂಸಿ, ಶಿವಸೇನೆ & ಎನ್ಸಿಪಿ ನೀಡಿದ್ದ ಮೈತ್ರಿಯ ಆಹ್ವಾನ ತಳ್ಳಿ ಹಾಕಿದೆ. ಏಕಾಂಗಿಯಾಗಿ ಚುನಾವಣಾ ಕಣಕ್ಕಿಳಿಯುತ್ತಿದೆ.
ಮೊದಲ ಬಾರಿಗೆ ಗೋವಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಆಮ್ ಆದ್ಮಿ ಪಕ್ಷ ಈಗಾಗಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಳೆದ ಬುಧವಾರ ಗೋವಾ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್ ಎಂದು ಘೋಷಣೆ ಮಾಡಿದ್ದಾರೆ.
ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಶಿವಸೇನೆ & ಎನ್ಸಿಪಿ ಮೈತ್ರಿಕೂಟ ಪಕ್ಷಗಳು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಗೋವಾ ಚುನಾವಣೆಗೆ ಫೆಬ್ರವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.
ಟಿಎಂಸಿ, ಕಾಂಗ್ರೆಸ್ ಕಾರಣ; "ಒಂದು ವೇಳೆ ಗೋವಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕಾಂಗ್ರೆಸ್ ಮತ್ತು ಟಿಎಂಸಿ ನೇರ ಹೊಣೆ" ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
"ಗೋವಾದಲ್ಲಿ ಎನ್ಸಿಪಿ, ಗೋವಾ ಫಾರ್ವರ್ಡ್ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವಪನ್ನು ಶಿವಸೇನೆ ಕಾಂಗ್ರೆಸ್ ಮುಂದಿಟ್ಟಿತ್ತು. ಆದರೆ ಪಕ್ಷ ಪ್ರತಿಕ್ರಿಯೆ ನೀಡಲಿಲ್ಲ" ಎಂದು ಆರೋಪಿಸಿದರು.
Recommended Video
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications