ಮಹದಾಯಿ ವಿಚಾರ; ಮತ್ತೆ ಕ್ಯಾತೆ ತೆಗೆದ ಗೋವಾ ಸರ್ಕಾರ
ಪಣಜಿ, ನವೆಂಬರ್ 27 : ಮಹದಾಯಿ ನದಿ ನೀರಿನ ವಿಚಾರದಲ್ಲಿ ಗೋವಾದ ಬಿಜೆಪಿ ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ. ವಿವಾದವನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಶುಕ್ರವಾರ ಮಾತನಾಡಿರುವ ಮುಖ್ಯಮಂತ್ರಿಗಳು, "ಮಹದಾಯಿ ನದಿ ನೀರಿನ ತಿರುವು ವಿವಾದದ ಬಗ್ಗೆ ನಾವು ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿ ಬಾಕಿ ಇದೆ. ಅಲ್ಲಿ ಹೋರಾಟ ಮುಂದುವರೆಸುತ್ತೇವೆ" ಎಂದರು.
"ಮಹದಾಯಿ ನ್ಯಾಯಾಧೀಕರಣ ನೀಡಿದ ತೀರ್ಪನ್ನು ಎಸ್ಎಲ್ಪಿ ಮೂಲಕ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ನ್ಯಾಯಾಲಯದ ಹೊರಗೆ ವಿವಾದ ಬಗೆಹರಿಸಿಕೊಳ್ಳುವುದಿಲ್ಲ. ಕಾನೂನು ಹೋರಾಟ ಮಾಡುತ್ತೇವೆ" ಎಂದು ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

"ಕರ್ನಾಟಕ ನಮ್ಮ ಪಾಲಿನ ನೀರನ್ನು ತಿರುಗಿಸಿಕೊಂಡಿದೆ. ಇದರಿಂದಾಗಿ ನೀರಿನ ಹರಿವು ಇಳಿಮುಖವಾಗಿದೆ. ನಮ್ಮ ಪಾಲಿನ ನೀರನ್ನು ಬಿಡುಗಡೆ ಮಾಡಿ ಎಂಬುದು ನಮ್ಮ ಬೇಡಿಕೆಯಾಗಿದೆ" ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಮಹದಾಯಿ ನ್ಯಾಯಾಧೀಕರಣದ ತೀರ್ಪನ್ನು ಉಲ್ಲಂಘನೆ ಮಾಡಿದೆ ಎಂದು ಗೋವಾ ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಹ ಸಲ್ಲಿಸಿದೆ. ಎರಡೂ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇದೆ.
2014ರಲ್ಲಿ ಮಹದಾಯಿ ನ್ಯಾಯಾಧೀಕರಣ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನದಿ ನೀರನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಇದನ್ನು ಸುಪ್ರೀಂನಲ್ಲಿ ಗೋವಾ ಪ್ರಶ್ನಿಸಿದೆ.
ಕರ್ನಾಟಕ ಸರ್ಕಾರ ನದಿ ನೀರನ್ನು ಅಂತಿಮ ಆದೇಶವನ್ನು ಉಲ್ಲಂಘನೆ ಮಾಡಿ ತಿರುಗಿಸಿದೆ ಎಂದು ಗೋವಾ ಸರ್ಕಾರ ಆರೋಪಿಸಿದೆ. ಕರ್ನಾಟಕ ಸಹ ಹೆಚ್ಚುವರಿ ನೀರನ್ನು ನೀಡಬೇಕು ಎಂದು ಬೇಡಿಕೆ ಇಟ್ಟಿದೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications