ಪಂಚಭೂತಗಳಲ್ಲಿ ಲೀನವಾದ ಮನೋಹರ್ ಪರಿಕ್ಕರ್
ಪಣಜಿ, ಮಾರ್ಚ್ 18 : ಗೋವಾ ಮುಖ್ಯಮಂತ್ರಿ, ಬಿಜೆಪಿ ನಾಯಕ ಮನೋಹರ್ ಪರಿಕ್ಕರ್ ಪಂಚಭೂತಗಳಲ್ಲಿ ಲೀನವಾದರು. ಪಣಜಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಯಿತು.
ಸೋಮವಾರ ಸಂಜೆ ಪಣಜಿಯ ಮೀರಾಮಾರ್ ಬೀಚ್ ಸಮೀಪ ಮನೋಹರ್ ಪರಿಕ್ಕರ್ ಅವರ ಅಂತ್ಯಕ್ರಿಯೆ ನಡೆಯಿತು. ಪುತ್ರ ಚಿತೆಗೆ ಅಗ್ನಿಸ್ಪರ್ಶವನ್ನು ಮಾಡಿದರು. ಗೌಡ ಸಾರಸ್ವತ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಿತು.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮೋನೊಹರ್ ಪರಿಕ್ಕರ್ ಅವರು (63) ಭಾನುವಾರ ರಾತ್ರಿ ವಿಧಿವಶರಾಗಿದ್ದರು. ನೂರಾರು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸರಳತೆಯ ಪ್ರತೀಕವಾಗಿದ್ದ ಪರಿಕ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಸೋಮವಾರ ಬೆಳಗ್ಗೆ ಮನೋಹರ್ ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಪಂಜಿಮ್ನ ಬಿಜೆಪಿ ಕಚೇರಿಯಲ್ಲಿ ಒಂದೂವರೆ ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಕಲಾ ಅಕಾಡೆಮಿಗೆ ತೆಗೆದುಕೊಂಡು ಹೋಗಲಾಯಿತು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ವಿವಿಧ ಕೇಂದ್ರ ಸಚಿವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಅಂತಿಮ ನಮನ ಸಲ್ಲಿಸಿ, ಭಾವುಕರಾದರು.

ಅಂತಿಮ ನಮನ ಸಲ್ಲಿಸಿದ ಮೋದಿ
ಪಣಜಿಯ ಕಲಾ ಅಕಾಡೆಮಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮನೋಹರ್ ಪರಿಕ್ಕರ್ ಅವರಿಗೆ ಅಂತಿನ ನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕೇಂದ್ರ ಸಚಿವರಿಂದ ಅಂತಿಮ ನಮನ
ಕೇಂದ್ರ ಸಚಿವ ನಿತಿನ್ ಗಡ್ಕರಿ, ಸ್ಮೃತಿ ಇರಾನಿ ಸೇರಿದಂತೆ ಹಲವರು ಕಲಾ ಅಕಾಡೆಮಿಗೆ ಆಗಮಿಸಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಪಾರ್ಥಿವ ಶರೀರದ ಮೆರವಣಿಗೆ
ಕಲಾ ಅಕಾಡೆಮಿಯಿಂದ ಸಂಜೆ 4 ಗಂಟೆಗೆ ಪಾರ್ಥಿವ ಶರೀರದ ಮೆರವಣಿಗೆಯನ್ನು ಆರಂಭಿಸಲಾಯಿತು. ಸೇನಾ ವಾಹನದಲ್ಲಿ ಮೀರಾಮಾರ್ ಬೀಚ್ಗೆ ಪಾರ್ಥಿವ ಶರೀರ ತರಲಾಯಿತು. ಈ ಸಂದರ್ಭದಲ್ಲಿ ನೂರಾರು ಜನರು ಆಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

ಚಿತೆಗೆ ಅಗ್ನಿ ಸ್ಪರ್ಶ
ಮೀರಾಮಾರ್ ಬೀಚ್ನಲ್ಲಿ ಪಾರ್ಥಿವ ಶರೀರಕ್ಕೆ ಮೊದಲು ಗೋವಾ ಮತ್ತು ಕೇಂದ್ರ ಸರ್ಕಾರದ ಕಡೆಯಿಂದ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಮನೋಹರ್ ಪರಿಕ್ಕರ್ ಪುತ್ರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications