ತಂದೆಯ ಹಾದಿ ಮುಗಿಯಿತು! ಗೋವಾ ರಾಜಕೀಯ ನೋಡಿ ಭಾವುಕರಾದ ಪರಿಕ್ಕರ್ ಪುತ್ರ
ಪಣಜಿ, ಜುಲೈ 11: ಗೋವಾದಲ್ಲಿ ಕಳೆದ ರಾತ್ರಿಯಿಂದ ಆರಂಭವಾಗಿರುವ ರಾಜಕೀಯ ಬೃಹನ್ನಾಟಕದ ಕುರಿತು ವಿಷಾದ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್, 'ತಂದೆಯವರ ರಾಜಕೀಯ ಹಾದಿ ಮಾರ್ಚ್ 17ರಂದೇ ಅಂತ್ಯವಾಯಿತು' ಎಂದಿದ್ದಾರೆ.
"ರಾಜಕೀಯದಲ್ಲಿ ನಮ್ಮ ತಂದೆಯವರು ಉಳಿಸಿಕೊಂಡು ಬಂದಿದ್ದ ನಂಬಿಕೆಯ ಹಾದಿ ಮಾರ್ಚ್ 17 ರಂದೇ ಮುಗಿದುಹೋಯಿತು" ಎಂದು ಭಾವುಕರಾದ ಅವರು, ಗೋವಾದ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಕ್ರಮವನ್ನು ಪರೋಕ್ಷವಾಗಿ ಖಂಡಿಸಿದರು.
"ಗೋವಾದ ರಾಜೀಯ ಬೆಳವಣಿಗೆಯನ್ನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಒಪ್ಪಿಕೊಳ್ಳುತ್ತಾರೆಯೇ?" ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಕೇವಲ ಕಾಲವೇ ಅಕ್ಕೆ ಉತ್ತರ ನೀಡುತ್ತದೆ" ಎಂದು ಒಗಟಾಗಿ ಹೇಳಿದರು.

'ನನ್ನ ತಂದೆಯವರು ನಡೆದು ಬಂದ ರಾಜಕೀಯದ ವಿಶ್ವಾಸದ ಹಾದಿಯನ್ನು ಮತ್ತೆ ಸ್ಥಾಪಿಸಲು ನಾನು ಇಷ್ಟಪಡುತ್ತೇನೆ, ಆದರೆ ಅದರ ಪರಿಣಾಮ ಎದುರಿಸಬೇಕಾಗಬಹುದು ಎಂಬುದು ನನಗೆ ಗೊತ್ತಿದೆ. ಅದಕ್ಕೂ ನಾನು ಸಿದ್ಧ' ಎಂದು ಉತ್ಪಲ್ ಹೇಳಿದರು.
ಮಂಗಳವಾರ ಸಂಜೆ ನಡೆದ ಅನಿರೀಕ್ಷಿತ ಬೆಳವಣಿಗೆಯಲ್ಲಿ ಕಾಂಗ್ರೆಸ್ ನ ಒಟ್ಟು 15(40) ಶಾಸಕರಲ್ಲಿ 10 ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದರು.
ಮಾಜಿ ಮುಖ್ಯಮಂತ್ರಿ, ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಕಳೆದ ಮಾರ್ಚ್ 17 ರಂದು ಇಹಲೋಕ ತ್ಯಜಿಸಿದ್ದರು. ಅವರ ನಿಧನದ ನಂತರ ತೆರವಾದ ಪಣಜಿ ವಿಧಾನಸಭಾ ಕ್ಷೇತ್ರಕ್ಕೆ ಉತ್ಪಲ್ ಅವರನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೊನೆಯ ಕ್ಷಣದ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿಯ ಸಿದ್ಧಾರ್ಥ್ ಕುಂಕೋಲಿಯೆಂಕರ್ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಕಾಂಗ್ರೆಸ್ ನ ಅಟಾನಾಸಿಯೋ ಮೊನ್ಸೆರಟ್ಟ್ ಅವರ ವಿರುದ್ಧ 1775 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸೋಲುಂಡಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications