ಮಿಗ್ ತರಬೇತಿ ವಿಮಾನ ಪತನ: ಪೈಲಟ್ಗಳು ಪಾರು
ದಾಬೋಲಿಮ್, ನವೆಂಬರ್ 16: ಗೋವಾ ಐಎನ್ಎಸ್ ಹನ್ಸಾ ಏರ್ಬೇಸ್ನಲ್ಲಿ ತರಬೇತಿ ನಿರತವಾಗಿದ್ದ ಮಿಗ್-29ಕೆ ಯುದ್ಧವಿಮಾನ ಪತನವಾಗಿದೆ. ಗೋವಾದ ಡಾಬೋಲಿಂನಲ್ಲಿ ತರಬೇತಿ ವಿಮಾನ ಇದಾಗಿದ್ದು ಅದೃಷ್ಟವಶಾತ್ ಇಬ್ಬರೂ ಫೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನಿತ್ಯದಂತೆ ತರಬೇತಿಯಲ್ಲಿ ನಿರತವಾಗಿದ್ದ ಈ ವಿಮಾನ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ಪತನಗೊಂಡ ತರಬೇತಿ ವಿಮಾನದಲ್ಲಿ ಕ್ಯಾಪ್ಟನ್ ಎಂ ಶೇಯೋಖಾಂಡ್ ಮತ್ತು ಲೆಫ್ಟಿನೆಂಟ್ ಕಮಾಂಡರ್ ದೀಪಕ್ ಯಾದವ್ ಇದ್ದು ತಕ್ಷಣವೇ ವಿಮಾನದಿಂದ ಬೇರ್ಪಟ್ಟು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ವಾಯುಸೇನೆ ಈ ವಿಚಾರವಾಗಿ ಅಧಿಕೃತ ಹೇಳಿಕೆಯನ್ನು ನೀಡಿದ್ದು, ತರಬೇತಿ ವರ್ಷನ್ನ ಎರಡು ಸೀಟ್ಗಳುಳ್ಳ ವಿಮಾನ ಇದಾಗಿದೆ ಎಂದು ತಿಳಿಸಿದೆ. ಈ ತರಬೇತಿ ವಿಮಾನಕ್ಕೆ ಹಕ್ಕಿ ಡಿಕ್ಕಿಹೊಡದ ಕಾರಣ ಇಮಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಫೈಲಟ್ಗಳು ಪರಿಸ್ಥಿತಿಯನ್ನು ತಕ್ಷಣಕ್ಕೆ ಅರಿತುಕೊಂಡು ವಿಮಾನದಿಂದ ಬೇರ್ಪಟ್ಟಿದ್ದಾರೆ. ಯಾವುದೇ ಜನವಸತಿಯಿಲ್ಲದ ಕಡೆ ವಿಮಾನ ಪತನಗೊಂಡಿರುವುದರಿಂದ ಯಾವುದೇ ಅಪಾಯಗಳು ಆಗಿಲ್ಲ ಎಂದು ವಾಯುಸೇನೆ ಅಧಿಕೃತ ಪ್ರಕಟಣೆಯಲ್ಲಿ ಹೇಳಿದೆ. ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಈ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ. ಇಬ್ಬರೂ ಫೈಲಟ್ಗಳ ಜೊತೆಗೂ ಮಾತನಾಡಿದ್ದು, ಫೈಲಟ್ಗಳ ಸಮಯ ಪ್ರಜ್ಞೆಯಿಂದಾಗಿ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಶುಭಹಾರೈಸಿದ್ದಾರೆ.
ಕಳೆದ ಜೂನ್ ತಿಂಗಳಲ್ಲೂ ಗೋವಾದ ಏರ್ಬೇಸ್ನಲ್ಲಿ ಮಿಗ್-29ಕೆ ತರಬೇತಿ ವಿಮಾನವೊಂದು ಪತನಗೊಂಡಿತ್ತು. ಆ ಸಂದರ್ಭದಲ್ಲಿ ಗೋವಾ ವಿಮಾನ ನಿಲ್ದಾಣದಲ್ಲಿ ಸುಮಾರು 90 ನಿಮಿಷಗಳ ಕಾಲ ವಿಮಾನ ಹಾರಾಟದ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications