ಮಿಗ್ ತರಬೇತಿ ವಿಮಾನ ಪತನ: ಪೈಲಟ್ಗಳು ಪಾರು
ದಾಬೋಲಿಮ್, ನವೆಂಬರ್ 16: ಗೋವಾ ಐಎನ್ಎಸ್ ಹನ್ಸಾ ಏರ್ಬೇಸ್ನಲ್ಲಿ ತರಬೇತಿ ನಿರತವಾಗಿದ್ದ ಮಿಗ್-29ಕೆ ಯುದ್ಧವಿಮಾನ ಪತನವಾಗಿದೆ. ಗೋವಾದ ಡಾಬೋಲಿಂನಲ್ಲಿ ತರಬೇತಿ ವಿಮಾನ ಇದಾಗಿದ್ದು ಅದೃಷ್ಟವಶಾತ್ ಇಬ್ಬರೂ ಫೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನಿತ್ಯದಂತೆ ತರಬೇತಿಯಲ್ಲಿ ನಿರತವಾಗಿದ್ದ ಈ ವಿಮಾನ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ಪತನಗೊಂಡ ತರಬೇತಿ ವಿಮಾನದಲ್ಲಿ ಕ್ಯಾಪ್ಟನ್ ಎಂ ಶೇಯೋಖಾಂಡ್ ಮತ್ತು ಲೆಫ್ಟಿನೆಂಟ್ ಕಮಾಂಡರ್ ದೀಪಕ್ ಯಾದವ್ ಇದ್ದು ತಕ್ಷಣವೇ ವಿಮಾನದಿಂದ ಬೇರ್ಪಟ್ಟು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ವಾಯುಸೇನೆ ಈ ವಿಚಾರವಾಗಿ ಅಧಿಕೃತ ಹೇಳಿಕೆಯನ್ನು ನೀಡಿದ್ದು, ತರಬೇತಿ ವರ್ಷನ್ನ ಎರಡು ಸೀಟ್ಗಳುಳ್ಳ ವಿಮಾನ ಇದಾಗಿದೆ ಎಂದು ತಿಳಿಸಿದೆ. ಈ ತರಬೇತಿ ವಿಮಾನಕ್ಕೆ ಹಕ್ಕಿ ಡಿಕ್ಕಿಹೊಡದ ಕಾರಣ ಇಮಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಫೈಲಟ್ಗಳು ಪರಿಸ್ಥಿತಿಯನ್ನು ತಕ್ಷಣಕ್ಕೆ ಅರಿತುಕೊಂಡು ವಿಮಾನದಿಂದ ಬೇರ್ಪಟ್ಟಿದ್ದಾರೆ. ಯಾವುದೇ ಜನವಸತಿಯಿಲ್ಲದ ಕಡೆ ವಿಮಾನ ಪತನಗೊಂಡಿರುವುದರಿಂದ ಯಾವುದೇ ಅಪಾಯಗಳು ಆಗಿಲ್ಲ ಎಂದು ವಾಯುಸೇನೆ ಅಧಿಕೃತ ಪ್ರಕಟಣೆಯಲ್ಲಿ ಹೇಳಿದೆ. ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಈ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ. ಇಬ್ಬರೂ ಫೈಲಟ್ಗಳ ಜೊತೆಗೂ ಮಾತನಾಡಿದ್ದು, ಫೈಲಟ್ಗಳ ಸಮಯ ಪ್ರಜ್ಞೆಯಿಂದಾಗಿ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಶುಭಹಾರೈಸಿದ್ದಾರೆ.
ಕಳೆದ ಜೂನ್ ತಿಂಗಳಲ್ಲೂ ಗೋವಾದ ಏರ್ಬೇಸ್ನಲ್ಲಿ ಮಿಗ್-29ಕೆ ತರಬೇತಿ ವಿಮಾನವೊಂದು ಪತನಗೊಂಡಿತ್ತು. ಆ ಸಂದರ್ಭದಲ್ಲಿ ಗೋವಾ ವಿಮಾನ ನಿಲ್ದಾಣದಲ್ಲಿ ಸುಮಾರು 90 ನಿಮಿಷಗಳ ಕಾಲ ವಿಮಾನ ಹಾರಾಟದ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications