ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಣಜಿ ಉಪ ಚುನಾವಣೆ : ಪರಿಕ್ಕರ್ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್

|
Google Oneindia Kannada News

ಪಣಜಿ, ಏಪ್ರಿಲ್ 28 : ಪಣಜಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದೆ. ಗೋವಾ ಮುಖ್ಯಮಂತ್ರಿಯಾಗಿದ್ದ ದಿ.ಮನೋಹರ್ ಪರಿಕ್ಕರ್ ಪುತ್ರನಿಗೆ ಟಿಕೆಟ್ ನೀಡಿಲ್ಲ.

ಮನೋಹರ್ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಉಪ ಚುನಾವಣೆ ನಡೆಯಲಿದೆ. ಬಿಜೆಪಿ ಭಾನುವಾರ ಸಿದ್ಧಾರ್ಥ್‌ ಕುಂಕಲೇನಕರ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

ಗೋವಾ ಉಪ ಚುನಾವಣೆಗೆ ಮನೋಹರ್ ಪುತ್ರನಿಗೆ ಟಿಕೆಟ್?ಗೋವಾ ಉಪ ಚುನಾವಣೆಗೆ ಮನೋಹರ್ ಪುತ್ರನಿಗೆ ಟಿಕೆಟ್?

ದಿ.ಮನೋಹರ್ ಪರಿಕ್ಕರ್ ಪುತ್ರ ಉತ್ಪಾಲ್ ಪರಿಕ್ಕರ್ ಅವರಿಗೆ ಟಿಕೆಟ್ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಸಿದ್ಧಾರ್ಥ್‌ ಕುಂಕಲೇನಕರ್ ಎರಡು ಬಾರಿ ಪಣಜಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈಗ ಪುನಃ ಅವರಿಗೆ ಟಿಕೆಟ್ ನೀಡಲಾಗಿದೆ.

ಗೋವಾ ರಾಜಕೀಯದಲ್ಲಿ ಮತ್ತೆ ನಾಟಕೀಯ ತಿರುವುಗೋವಾ ರಾಜಕೀಯದಲ್ಲಿ ಮತ್ತೆ ನಾಟಕೀಯ ತಿರುವು

bjp

ಸಿದ್ಧಾರ್ಥ್‌ ಕುಂಕಲೇನಕರ್ ಅವರು 2017ರ ಮೇ 10ರಂದು ಮನೋಹರ್ ಪರಿಕ್ಕರ್ ವಿಧಾನಸಭೆಗೆ ಆಯ್ಕೆಯಾಗಲು ಅವಕಾಶ ನೀಡುವುದಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಈಗ ಉಪ ಚುನಾವಣೆಯಲ್ಲಿಯೂ ಅವರಿಗೆ ಟಿಕೆಟ್ ನೀಡಲಾಗಿದೆ.

ರಾತ್ರೋ ರಾತ್ರಿ ಗೋವಾ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆರಾತ್ರೋ ರಾತ್ರಿ ಗೋವಾ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ

ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಅವರು ಗೋವಾ ರಾಜಕಾರಣಕ್ಕೆ ವಾಪಸ್ ಬಂದು ಗೋವಾ ಮುಖ್ಯಮಂತ್ರಿಯಾಗಿದ್ದರು. 2018ರ ಮಾರ್ಚ್ 17ರಂದು ಅವರು ವಿಧಿವಶರಾಗಿದ್ದರು.

English summary
BJP announced Panaji by poll ticket to Siddharth Kunkalienkar. Party denied ticket for late Goa Chief Minister Manohar Parrikar son Utpal Parrikar. By poll will be held on May 19, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X