ಮೋದಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್
ಪಣಜಿ, ಮಾರ್ಚ್ 16; ಗೋವಾದ ಹಂಗಾಮಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು. ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿದ್ದು, ಮತ್ತೆ ಸರ್ಕಾರ ರಚನೆ ಮಾಡಲಿದೆ.
ಬುಧವಾರ ಪ್ರಮೋದ್ ಸಾವಂತ್ ಸಂಸತ್ ಭವನದ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಮ್ಮ ಪಕ್ಷವನ್ನು ಮತ್ತೆ ಬೆಂಬಲಿಸಿದ ಗೋವಾ ಜನರಿಗೆ ಧನ್ಯವಾದಗಳು. ರಾಜ್ಯದ ಅಭಿವೃದ್ಧಿಗೆ, ಗೋವಾದ ಜನರಿಗಾಗಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮೊದಲ ಬಾರಿಗೆ ಪ್ರಮೋದ್ ಸಾವಂತ್ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆದಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಿತ್ತು.
ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸಿದೆ. ಆದರೆ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಯಾವ ಪಕ್ಷಕ್ಕೂ ಸಿಕ್ಕಿಲ್ಲ. ಮೂವರು ಪಕ್ಷೇತರರು, ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿಗೆ ಬೆಂಬಲ ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಬಲ 25ಕ್ಕೆ ಏರಿಕೆಯಾಗಿದ್ದು, ಸರ್ಕಾರ ರಚನೆ ಮಾಡಲಿದೆ. ಶನಿವಾರ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದಾರೆ.
ಗೋವಾ ಫಲಿತಾಂಶ; 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಬಿಜೆಪಿ 20, ಕಾಂಗ್ರೆಸ್ 11, ಎಎಪಿ 2, ಎಂಜಿಪಿ 2, ಗೋವಾ ಫಾರ್ವರ್ಡ್ ಪಾರ್ಟಿ 1, ಆರ್ಜಿಪಿ 1 ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷಕ್ಕೂ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21 ಸಿಕ್ಕಿಲ್ಲ.
ಮುಖ್ಯಮಂತ್ರಿ ಯಾರು?; ಗೋವಾ ವಿಧಾನಸಭೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷೇತರರು ಮತ್ತು ಎಂಜಿಪಿ ಪಕ್ಷದ ನೆರವಿನಿಂದ ಸರ್ಕಾರ ರಚನೆ ಮಾಡುವುದಾಗಿ ಹೇಳಿದೆ. ಆದರೆ ಮುಖ್ಯಮಂತ್ರಿ ಯಾರು? ಎಂಬುದು ಇನ್ನೂ ನಿಗೂಢವಾಗಿಯೇ ಇದೆ.
ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಯೇ? ಅಥವ ಹೊಸ ನಾಯಕನ ಆಯ್ಕೆ ನಡೆಯಲಿದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಹೊಸ ಶಾಸಕರ ಪ್ರಮಾಣ ವಚನ ನಡೆದಿದೆ. ಆದರೆ ಮುಖ್ಯಮಂತ್ರಿ ಆಯ್ಕೆ ನಡೆದಿಲ್ಲ.
ಬಿಜೆಪಿ ಹೈಕಮಾಂಡ್ ಬಿ. ಎಲ್. ಸಂತೋಷ್ ಮತ್ತು ಸಚಿವ ಪಿಯೂಷ್ ಘೋಯೆಲ್ರನ್ನು ಗೋವಾ ವೀಕ್ಷಕರಾಗಿ ನೇಮಕ ಮಾಡಿದೆ. ಆದರೆ ಹೋಳಿ ಹಬ್ಬದ ಬಳಿಕ ವೀಕ್ಷಕರು ಗೋವಾಕ್ಕೆ ಭೇಟಿ ನೀಡಲಿದ್ದು, ಶಾಸಕಾಂಗ ಪಕ್ಷದ ಸಭೆ ನಡೆಸಿ ಸಿಎಂ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ.
2ನೇ ಅವಧಿಗೆ ಆಯ್ಕೆ; ಪ್ರಮೋದ್ ಸಾವಂತ್ ಗೋವಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೂ ಮುಂದುವರೆಯಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ದಿನದಿಂದ ಈ ಹಿಂದೆ ಆರೋಗ್ಯ ಸಚಿವರಾಗಿದ್ದ ವಿಶ್ವಜಿತ್ ರಾಣೆ ಹೆಸರು ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿದೆ. ಆದರೆ ಗೋವಾ ಬಿಜೆಪಿ ಘಟಕ ಪ್ರಮೋದ್ ಸಾವಂತ್ ಮುಂದುವರೆಯಬೇಕು ಎಂದು ಹೈಕಮಾಂಡ್ ನಾಯಕರಿಗೆ ಶಿಫಾರಸು ಮಾಡಿದೆ.
2019ರಲ್ಲಿ ಮನೋಹರ್ ಪರಿಕ್ಕರ್ ನಿಧನದ ಬಳಿಕ ಪ್ರಮೋದ್ ಸಾವಂತ್ ಮುಖ್ಯಮಂತ್ರಿಯಾಗಿದ್ದರು. ಈ ಬಾರಿಯ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಾಗಿತ್ತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications