ಲೈಂಗಿಕ ಕಿರುಕುಳ ಕೇಸ್: ತೆಹಲ್ಕಾ ಸಹ ಸಂಸ್ಥಾಪಕ ತರುಣ್ ತೇಜಪಾಲ್ ಖುಲಾಸೆ
ಪಣಜಿ, ಮೇ 21: ಗೋವಾದ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರದಂದು ಖ್ಯಾತ ಪತ್ರಕರ್ತ, ತೆಹಲ್ಕಾ ಸಹ ಸಂಸ್ಥಾಪಕ, ಸಂಪಾದಕ ತರುಣ್ ತೇಜಪಾಲ್ ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ತಮ್ಮ ಸಂಸ್ಥೆಯ ಮಹಿಳಾ ಸಹೋದ್ಯೋಗಿ ಅಸಭ್ಯವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದ ಪ್ರಕರಣದಿಂದ ತೇಜಪಾಲ್ ಖುಲಾಸೆಗೊಂಡಿದ್ದಾರೆ.
ಗೋವಾದ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕ್ಷಮಾ ಜೋಶಿ ಅವರು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ, ತೇಜ್ ಪಾಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ.
ಈ ಪ್ರಕರಣ ಬೆಳಕಿಗೆ ಬಂದ ಬಳಿಕ ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆ ತೊರೆದಿದ್ದರು. ನಂತರ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಅಮಾನತು ಮಾಡಲಾಗಿತ್ತು. 2013ರ ಲೈಂಗಿಕ ಕಿರುಕುಳ ಪ್ರಕರಣದಿಂದ ಮುಕ್ತಿ ಬಯಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲು ನಿರಾಕರಿಸಿರುವ ಸುಪ್ರೀಂಕೋರ್ಟ್, " ತೇಜಪಾಲ್ ವಿರುದ್ಧದ ಆರೋಪ ಗಂಭೀರವಾಗಿದೆ ಹಾಗೂ ಸಂತ್ರಸ್ತೆಯ ಖಾಸಗಿತನ ಮೇಲಿನ ಆಕ್ರಮಣವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಗೋವಾದ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ತರುಣ್ ತೇಜಪಾಲ್ ಅವರು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.
It's been a long nightmare for my family. I'm relieved that it is finally over & I'm very grateful to have received justice because it is not always the given thing in this country anymore: Tarun Tejpal, Former Editor-in-Chief of Tehelka Magazine pic.twitter.com/NaOY0d9DuB
— ANI (@ANI) May 21, 2021
2013ರಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಗೋವಾದಲ್ಲಿ ತೇಜಪಾಲ್ ಹಾಗೂ ಕಿರಿಯ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮೂರು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ತನಗಾದ ಕಿರುಕುಳ ಬಗ್ಗೆ ಖಾಸಗಿ ಮಾಧ್ಯಮವೊಂದರಲ್ಲಿ ಮಹಿಳಾ ಉದ್ಯೋಗಿ ದುಃಖ ತೋಡಿಕೊಂಡಿದ್ದರು. ಗೋವಾದಲ್ಲಿ ಈ ಘಟನೆ ನಡೆದಿದ್ದರಿಂದ ಪಣಜಿ ಪೊಲೀಸರು ತೇಜ್ ಪಾಲ್ ವಿರುದ್ಧ ಐಪಿಸಿ ಸೆಕ್ಷನ್ 354, 354 ಎ, 341, 342, 276, 376(2)(ಎಫ್), 376(2)(ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications