ಲೈಂಗಿಕ ಕಿರುಕುಳ ಕೇಸ್: ತೆಹಲ್ಕಾ ಸಹ ಸಂಸ್ಥಾಪಕ ತರುಣ್ ತೇಜಪಾಲ್ ಖುಲಾಸೆ
ಪಣಜಿ, ಮೇ 21: ಗೋವಾದ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರದಂದು ಖ್ಯಾತ ಪತ್ರಕರ್ತ, ತೆಹಲ್ಕಾ ಸಹ ಸಂಸ್ಥಾಪಕ, ಸಂಪಾದಕ ತರುಣ್ ತೇಜಪಾಲ್ ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ತಮ್ಮ ಸಂಸ್ಥೆಯ ಮಹಿಳಾ ಸಹೋದ್ಯೋಗಿ ಅಸಭ್ಯವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದ ಪ್ರಕರಣದಿಂದ ತೇಜಪಾಲ್ ಖುಲಾಸೆಗೊಂಡಿದ್ದಾರೆ.
ಗೋವಾದ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕ್ಷಮಾ ಜೋಶಿ ಅವರು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ, ತೇಜ್ ಪಾಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ.
ಈ ಪ್ರಕರಣ ಬೆಳಕಿಗೆ ಬಂದ ಬಳಿಕ ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆ ತೊರೆದಿದ್ದರು. ನಂತರ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಅಮಾನತು ಮಾಡಲಾಗಿತ್ತು. 2013ರ ಲೈಂಗಿಕ ಕಿರುಕುಳ ಪ್ರಕರಣದಿಂದ ಮುಕ್ತಿ ಬಯಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲು ನಿರಾಕರಿಸಿರುವ ಸುಪ್ರೀಂಕೋರ್ಟ್, " ತೇಜಪಾಲ್ ವಿರುದ್ಧದ ಆರೋಪ ಗಂಭೀರವಾಗಿದೆ ಹಾಗೂ ಸಂತ್ರಸ್ತೆಯ ಖಾಸಗಿತನ ಮೇಲಿನ ಆಕ್ರಮಣವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.
ಗೋವಾದ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ತರುಣ್ ತೇಜಪಾಲ್ ಅವರು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.
It's been a long nightmare for my family. I'm relieved that it is finally over & I'm very grateful to have received justice because it is not always the given thing in this country anymore: Tarun Tejpal, Former Editor-in-Chief of Tehelka Magazine pic.twitter.com/NaOY0d9DuB
— ANI (@ANI) May 21, 2021
2013ರಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಗೋವಾದಲ್ಲಿ ತೇಜಪಾಲ್ ಹಾಗೂ ಕಿರಿಯ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮೂರು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ತನಗಾದ ಕಿರುಕುಳ ಬಗ್ಗೆ ಖಾಸಗಿ ಮಾಧ್ಯಮವೊಂದರಲ್ಲಿ ಮಹಿಳಾ ಉದ್ಯೋಗಿ ದುಃಖ ತೋಡಿಕೊಂಡಿದ್ದರು. ಗೋವಾದಲ್ಲಿ ಈ ಘಟನೆ ನಡೆದಿದ್ದರಿಂದ ಪಣಜಿ ಪೊಲೀಸರು ತೇಜ್ ಪಾಲ್ ವಿರುದ್ಧ ಐಪಿಸಿ ಸೆಕ್ಷನ್ 354, 354 ಎ, 341, 342, 276, 376(2)(ಎಫ್), 376(2)(ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.