Breaking: ಸೋನಾಲಿ ಫೋಗಾಟ್ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು- ಗೋವಾ ಸಿಎಂ ಹೇಳಿಕೆ
ಬಿಜೆಪಿ ನಾಯಕಿ ಹಾಗೂ ಟಿಕ್ಟಾಕ್ ತಾರೆ ಸೋನಾಲಿ ಫೋಗಾಟ್ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಸೋನಾಲಿ ಫೋಗಾಟ್ (42) ಅವರು ಆಗಸ್ಟ್ 23 ರಂದು ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ದೇಹದ ಮೇಲೆ ಮೊಂಡಾದ ಬಲದ ಗಾಯಗಳಿರುವುದು ಕಂಡು ಬಂದಿತ್ತು. ಇದು ಸಹಜ ಸಾವು ಅಲ್ಲ ಇದೊಂದು ಕೊಲೆ ಎಂದು ಸೋನಾಲಿ ಕುಟುಂಬಸ್ಥರು ಆರೋಪ ಮಾಡಿದ್ದರು. ಮರೋತ್ತರ ಪರೀಖ್ಷೆ ಹಾಗೂ ಕುಟುಂಬಸ್ಥರ ಆರೋಪದ ಮೇಲೆ ಗೋವಾ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

ತನ್ನ ಸಹಚರರೊಂದಿಗೆ ಕ್ಲಬ್ನಲ್ಲಿ ಸೋನಾಲಿ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇದು ಸೆರೆಯಾಗಿದೆ. ಹೀಗಾಗಿ ಪೊಲೀಸರು ಫೋಗಾಟ್ ನ ಪಿಎ ಮತ್ತು ಅವನ ಸಹಚರನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು ಐವರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಡ್ರಗ್ಸ್ ಇತ್ಯಾದಿ ಆರೋಪಗಳತ್ತ ಸುತ್ತುವರಿಯುತ್ತಿದ್ದಂತೆ ಪ್ರಕರಣದ ಆಳವಾದ ತನಿಖೆಯನ್ನು ಸಿಬಿಐಗೆ ನೀಡುವಂತೆ ಕುಟುಂಬಸ್ಥರು ಒತ್ತಾಯಿಸಿದ್ದರು. ಇದರ ಬೆನ್ನಲ್ಲೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋನಾಲಿ ಫೋಗಾಟ್ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಜನರ ಬೇಡಿಕೆಯನ್ನು ಅನುಸರಿಸಿ, ವಿಶೇಷವಾಗಿ ಅವರ ಮಗಳ ಬೇಡಿಕೆಯನ್ನು ಅನುಸರಿಸಿ ತನಿಖೆಯನ್ನು ಇಂದು ಸಿಬಿಐಗೆ ಹಸ್ತಾಂತರಿಸುತ್ತಿದ್ದೇವೆ. ಹಸ್ತಾಂತರಕ್ಕಾಗಿ ನಾನು ಗೃಹ ಸಚಿವರಿಗೆ ಪತ್ರ ಬರೆಯುತ್ತಿದ್ದೇನೆ. ನಮ್ಮ ಪೊಲೀಸರನ್ನು ನಾವು ನಂಬುತ್ತೇವೆ ಮತ್ತು ಅವರು ಉತ್ತಮ ತನಿಖೆ ಮಾಡುತ್ತಿದ್ದಾರೆ. ಆದರೆ ಸೋನಾಲಿ ಪೋಗಟ್ ಪ್ರಕರಣ ಸಿಬಿಐಗೆ ಹಸ್ತಾಂತರಿಸುವುದು ಜನರ ಬೇಡಿಕೆಯಾಗಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications