ಸೋನಾಲಿ ಫೋಗಟ್ ಹತ್ಯೆ ಪ್ರಕರಣ: ಗೋವಾದ ಕರ್ಲೀಸ್ ರೆಸ್ಟೋರೆಂಟ್ ಧ್ವಂಸ
ಪಣಜಿ ಸೆಪ್ಟೆಂಬರ್ 09: ಕರಾವಳಿ ನಿಯಂತ್ರಣ ವಲಯ (CRZ) ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗೋವಾದ ಕರ್ಲೀಸ್ ರೆಸ್ಟೋರೆಂಟ್ ಅನ್ನು ಧ್ವಂಸ ಮಾಡಲಾಗಿದೆ.
ಕರಾವಳಿ ನಿಯಂತ್ರಣ ವಲಯ (CRZ) ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹರಿಯಾಣ ಭಾರತೀಯ ಜನತಾ ಪಕ್ಷದ ನಾಯಕಿ ಸೋನಾಲಿ ಫೋಗಟ್ ಅವರ ಸಾವಿಗೆ ಸಂಬಂಧಿಸಿದ ಉತ್ತರ ಗೋವಾದ ಅಂಜುನಾದಲ್ಲಿರುವ ವಿವಾದಿತ ರೆಸ್ಟೋರೆಂಟ್ ಅನ್ನು ಗೋವಾ ಸರ್ಕಾರ ಶುಕ್ರವಾರ ಬೆಳಗ್ಗೆ ಕೆಡವಲು ಪ್ರಾರಂಭಿಸಿದೆ.
ಗೋವಾದ ಪ್ರಸಿದ್ಧ ಅಂಜುನಾ ಬೀಚ್ನಲ್ಲಿರುವ 'ಕರ್ಲೀಸ್' ಎಂಬ ರೆಸ್ಟೋರೆಂಟ್ ಇತ್ತೀಚೆಗೆ ಸುದ್ದಿಯಲ್ಲಿದೆ. ಫೋಗಟ್ ಸಾಯುವ ಕೆಲವು ಗಂಟೆಗಳ ಮೊದಲು ಔಟ್ಲೆಟ್ನಲ್ಲಿ ಪಾರ್ಟಿ ಮಾಡುತ್ತಿರುವುದು ಕಂಡುಬಂದಿತು. ಫೋಗಟ್ ಸಾವಿನ ಪ್ರಕರಣದಲ್ಲಿ ಬಂಧಿತರಾದ ಐವರಲ್ಲಿ ಅದರ ಮಾಲೀಕ ಎಡ್ವಿನ್ ನೂನ್ಸ್ ಕೂಡ ಸೇರಿದ್ದಾರೆ. ಬಳಿಕ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.
ಜಿಲ್ಲಾಡಳಿತದ ಡೆಮಾಲಿಷನ್ ಸ್ಕ್ವಾಡ್ ಅಂಜುನಾ ಪೊಲೀಸ್ ಸಿಬ್ಬಂದಿಯೊಂದಿಗೆ ಬೆಳಗ್ಗೆ 7.30 ರ ಸುಮಾರಿಗೆ ಬೀಚ್ಗೆ ಆಗಮಿಸಿ ಸಿಆರ್ಝಡ್ ನಿಯಮಾವಳಿಗಳನ್ನು ಉಲ್ಲಂಘಿಸಿ 'ನೋ ಡೆವಲಪ್ಮೆಂಟ್ ಝೋನ್'ನಲ್ಲಿ ನಿರ್ಮಿಸಲಾಗಿದ್ದ ರೆಸ್ಟೊರೆಂಟ್ ಅನ್ನು ಕೆಡವಿದ್ದಾರೆ.

ಗೋವಾದ ಕರ್ಲೀಸ್ ರೆಸ್ಟೋರೆಂಟ್ ಧ್ವಂಸ
ಗೋವಾ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದ (GCZMA) 2016 ರ ಉರುಳಿಸುವಿಕೆಯ ಆದೇಶದ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ನಿಂದ ಯಾವುದೇ ಬಿಡುವು ಪಡೆಯಲು ಅದರ ಮಾಲೀಕರು ವಿಫಲವಾದ ನಂತರ ರೆಸ್ಟೋರೆಂಟ್ ವಿರುದ್ಧ ಕ್ರಮವನ್ನು ಪ್ರಾರಂಭಿಸಲಾಗಿದೆ.
ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ಎನ್ಜಿಟಿ ಪೀಠವು ಸೆಪ್ಟೆಂಬರ್ 6 ರಂದು ಪ್ರಕರಣದ ವಿಚಾರಣೆ ನಡೆಸಿತು. ರೆಸ್ಟೋರೆಂಟ್ ಮ್ಯಾನೇಜ್ಮೆಂಟ್ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿದ ಜಿಸಿಜೆಡ್ಎಂಎ ಆದೇಶವನ್ನು ಪೀಠ ಎತ್ತಿ ಹಿಡಿದಿತ್ತು. ಗುರುವಾರ, ಜಿಲ್ಲಾಡಳಿತವು ತನ್ನ ಡೆಮಾಲಿಷನ್ ಸ್ಕ್ವಾಡ್ಗೆ ಶುಕ್ರವಾರ ಕಟ್ಟಡವನ್ನು ನೆಲಸಮ ಮಾಡುವಂತೆ ನೋಟಿಸ್ ನೀಡಿತು.

ರೆಸ್ಟೋರೆಂಟ್ಗೂ ಸೋನಾಲಿಗೂ ಏನ್ ಸಂಬಂಧ
ಪೊಲೀಸರ ಪ್ರಕಾರ, ಮಾಜಿ ಟಿಕ್ಟಾಕ್ ತಾರೆ ಮತ್ತು 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಸೋನಾಲಿ ಫೋಗಟ್ ಆಗಸ್ಟ್ 23 ರಂದು ಸಾಯುವ ಮೊದಲು ಈ ರೆಸ್ಟೋರೆಂಟ್ನಲ್ಲಿ ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸೋನಾಲಿ ಫೋಗಟ್ ಆಗಸ್ಟ್ 23 ರಂದು ಗೋವಾದ ಕರ್ಲೀಸ್ ರೆಸ್ಟೋರೆಂಟ್ನಲ್ಲಿ ಕೊಲೆಗೀಡಾಗಿದ್ದರು. ಈ ಬಗ್ಗೆ ಗೋವಾದ ಅಂಜುನಾ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಸುಧೀರ್ ಮತ್ತು ಸುಖ್ವಿಂದರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ರೂಮ್ ಬಾಯ್ ದತ್ತ ಪ್ರಸಾದ್ ಗಾಂವ್ಕರ್, ಕರ್ಲೀಸ್ ಕ್ಲಬ್ ಮಾಲೀಕ ಎಡ್ವಿನ್ ಮತ್ತು ರಾಮ ಮಾಂಡ್ರೇಕರ್ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಐವರನ್ನು ಬಂಧಿಸಲಾಗಿದೆ.

ಸೋನಾಲಿ ಆಸ್ತಿ ಮೇಲೆ ಸುಧೀರ್ ಕಣ್ಣು
ಈ ಹಿಂದೆ ಸೋನಾಲಿಯ ಕೋಟ್ಯಂತರ ರೂಪಾಯಿ ಆಸ್ತಿ ಮೇಲೆ ಸುಧೀರ್ ಕಣ್ಣಿಟ್ಟಿದ್ದ ಎಂದು ಗೋವಾ ಪೊಲೀಸರು ಬಹಿರಂಗಪಡಿಸಿದ್ದರು. ಸೋನಾಲಿಯ ಫಾರ್ಮ್ಹೌಸ್ ಅನ್ನು ಯಾವುದೇ ಬೆಲೆಯಲ್ಲಿ 20 ವರ್ಷಗಳ ಕಾಲ ಗುತ್ತಿಗೆಗೆ ತೆಗೆದುಕೊಳ್ಳಲು ಅವರು ಬಯಸಿದ್ದರು. ಪ್ರತಿ ವರ್ಷ ಕೇವಲ 60 ಸಾವಿರ ರೂಪಾಯಿ ಪಾವತಿಸಿ ಈ ಒಪ್ಪಂದವನ್ನು ಖಚಿತಪಡಿಸಲು ಬಯಸಿದ್ದರು. ಪೊಲೀಸ್ ತನಿಖೆಯ ಪ್ರಕಾರ, ಸೋನಾಲಿ ಫೋಗಟ್ ಅವರ ಈ ಫಾರ್ಮ್ಹೌಸ್ 6.5 ಎಕರೆಗಳಲ್ಲಿ ಹರಡಿಕೊಂಡಿದೆ, ಇದರ ಮಾರುಕಟ್ಟೆ ಮೌಲ್ಯ 6 ರಿಂದ 7 ಕೋಟಿಗಳಷ್ಟಿದೆ. ಈಗ ಈ ಪ್ರಕರಣದಲ್ಲಿ ಇದೊಂದು ದೊಡ್ಡ ಬೆಳವಣಿಗೆಯಾಗಿ ಕಂಡು ಬರುತ್ತಿದೆ. ನಿಜವಾಗಿ ಸೋನಾಲಿ ಫೋಗಟ್ಗೆ ಕೋಟಿಗಟ್ಟಲೆ ಆಸ್ತಿ ಇತ್ತು, ಹಾಗಾಗಿ ಆಕೆಯನ್ನು ಹಣಕ್ಕಾಗಿ ಕೊಲೆ ಮಾಡಲಾಗಿದೆಯೇ ಅಥವಾ ಸೋನಾಲಿ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕಾಗಿ ಕೊಲೆ ಮಾಡಲಾಹಿದಿಯೇ ಎಂದು ಈ ಕೋನದಿಂದ ತನಿಖೆ ನಡೆಸಲಾಗುತ್ತಿದೆ.

ಸಿಸಿಟಿವಿ ದೃಶ್ಯಗಳಿಂದ ಸತ್ಯ ಬಯಲು
ಸುಧೀರ್ ಸಾಂಗ್ವಾನ್ ಸೋನಾಲಿಗೆ ಡ್ರಗ್ಸ್ ನೀಡಿದ ಆರೋಪ ಹೊತ್ತಿದ್ದಾರೆ. ಗೋವಾ ಪೊಲೀಸರು ತೆಗೆದಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೋನಾಲಿಗೆ ಮಾದಕ ದ್ರವ್ಯ ನೀಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೋನಾಲಿಯನ್ನು ಎಲ್ಲೋ ಕರೆದುಕೊಂಡು ಹೋಗುತ್ತಿರುವ ಮತ್ತೊಂದು ದೃಶ್ಯಾವಳಿ ಹೊರಬಿದ್ದಿದ್ದು, ಆ ವಿಡಿಯೋದಲ್ಲಿ ಟಿಕ್ ಟಾಕ್ ತಾರೆಯ ಸ್ಥಿತಿ ತುಂಬಾ ಕೆಟ್ಟದಾಗಿತ್ತು. ತನಿಖೆಯಲ್ಲಿ ಸುಧೀರ್ ಸೋನಾಲಿಗೆ ಡ್ರಗ್ಸ್ ನೀಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಡ್ರಗ್ ಥಿಯರಿಯಲ್ಲಿ ಮುಂದುವರಿದ ಪೊಲೀಸರು ಸುಧೀರ್, ಆತನ ಸಹಚರ ಸುಖ್ವಿಂದರ್ ಮತ್ತು ಡ್ರಗ್ ಡೀಲರ್ ರಾಮನನ್ನು ಬಂಧಿಸಿದ್ದಾರೆ. ಕರ್ಲಿ ಕ್ಲಬ್ ಮಾಲೀಕರನ್ನೂ ಬಂಧಿಸಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications