ಗೋವಾದ ಮಾಂಸ ತಿನ್ನುವ ಹಸುಗಳಿಗೆ ಸೂಕ್ತ ಚಿಕಿತ್ಸೆ: ಮೈಕಲ್ ಲೊಬೊ
ಪಣಜಿ, ಅಕ್ಟೋಬರ್ 21: ಗೋವಾದ ಬೀದಿ ದನಗಳು ಮಾಂಸಾಹಾರ ಸೇವಿಸುವ ಸುದ್ದಿ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಮಾಂಸಾಹಾರಿಗಳಾಗಿ ಪರಿವರ್ತನೆಗೊಂಡಿರುವ ಹಸುಗಳ ಬಗ್ಗೆ ತ್ಯಾಜ್ಯ ನಿರ್ವಹಣಾ ಸಚಿವ ಮೈಕಲ್ ಲೊಬೊ ಪ್ರತಿಕ್ರಿಯಿಸಿದ್ದಾರೆ.
ಕಲಂಗೂಟ್, ಕಾಂಡೊಲಿಮ್ ಪ್ರದೇಶದಲ್ಲಿ ರಸ್ತೆ ಬದಿ ಎಸೆಯಲಾಗಿದ್ದ ಚಿಕನ್, ಮೀನು ತ್ಯಾಜ್ಯಗಳನ್ನು ಅಲ್ಲಿನ ಬೀದಿ ದನಗಳು ತಿನ್ನುತ್ತಿರುವ ಬಗ್ಗೆ ವರದಿಗಳು ಬಂದಿವೆ ಎಂದು ಲೊಬೊ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ಕಲಂಗೂಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಸಚಿವ ಲೊಬೊ ಮಾತನಾಡಿ, ಆ ಪ್ರದೇಶದಲ್ಲಿ ಸುಮಾರು 76 ಬಿಡಾಡಿ ದನಗಳಿವೆ, ಅವುಗಳನ್ನು ಹತ್ತಿರದ ಗೋಶಾಲೆಗೆ ಸೇರಿಸಲಾಗಿತ್ತು. ಆದರೆ, ಹಿಂಡಿ, ಬೂಸಾ, ಹುಲ್ಲು ತಿನ್ನುವುದನ್ನು ಬಿಟ್ಟು ಮಾಂಸಾಹಾರದ ತ್ಯಾಜ್ಯವನ್ನು ಸೇವಿಸತೊಡಗಿವೆ. ಈ ಬಗ್ಗೆ ಪಶುವೈದ್ಯರ ಬಳಿ ಮಾತನಾಡಿದ್ದೇನೆ, ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ ಎಂದಿದ್ದಾರೆ.

ಮಾಯೇಂ ಗ್ರಾಮದಲ್ಲಿರುವ ಗೋಮಾಂತಕ್ ಗೋಸೇವಕ್ ಮಹಾಸಂಗ್ ನಡೆಸುವ ಗೋಶಾಲೆಯಲ್ಲಿದ್ದ ದನಗಳು ಈ ರೀತಿ ತಮ್ಮ ಆಹಾರ ಪದ್ಧತಿ ಬದಲಾಯಿಸುವುದನ್ನು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಬೀಚ್ ಗಳಿಗೆ ಹೆಸರುವಾಸಿಯಾಗಿರುವ ಗೋವಾದಲ್ಲಿ ಕಲಂಗೂಟ್ ಬೀಚ್ ಪ್ರಮುಖ ಪ್ರೇಕ್ಷಣೀಯ ಸ್ಥಳವಾಗಿದೆ. ದೇಶ-ವಿದೇಶಗಳಿಂದ ಅಸಂಖ್ಯಾತ ಪ್ರವಾಸಿಗರು ಈ ಪ್ರದೇಶಕ್ಕೆ ಬರುತ್ತಾರೆ. ಈ ಪ್ರದೇಶದಲ್ಲಿ ಬೀದಿ ದನಗಳ ಸಂಖ್ಯೆ ಅಧಿಕವಾಗಿದ್ದು, 2013ರಲ್ಲಿ ಇಲ್ಲಿನ ಸರ್ಕಾರ ವಿಶೇಷ ಯೋಜನೆ ರೂಪಿಸಿ, ದನಗಳ ರಕ್ಷಣೆ ಹಾಗೂ ಗ್ರಾಮ ಪಂಚಾಯಿತಿಗೆ ದಂಡ ವಿಧಿಸುವ ಪದ್ಧತಿ ಅಳವಡಿಸಿಕೊಂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications