ರಾಹುಲ್ ಗಾಂಧಿಗೆ ಒಳ್ಳೆಯ ಪಾಠ: ಪರಿಕ್ಕರ್ ಮಗ ವಾಗ್ದಾಳಿ
ಪಣಜಿ, ನವೆಂಬರ್ 15: ರಫೇಲ್ ಯುದ್ಧ ವಿಮಾನದ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ಗುರುವಾರ ಪ್ರಕಟಿಸಿದ ತೀರ್ಪು ರಾಹುಲ್ ಗಾಂಧಿ ಅವರಿಗೆ ಒಳ್ಳೆಯ ಪಾಠ ಎಂದು ಗೋವಾದ ಮಾಜಿ ಮುಖ್ಯಮಂತ್ರಿ, ದಿ. ಮನೋಹರ್ ಪರಿಕ್ಕರ್ ಅವರ ಮಗ ಉತ್ಪಲ್ ಪರಿಕ್ಕರ್ ಹೇಳಿದ್ದಾರೆ.
ರಫೇಲ್ ಯುದ್ಧ ವಿಮಾನದ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ರಾಹುಲ್ ಗಾಂಧಿ ಮತ್ತು ವಿರೋಧಪಕ್ಷದ ಇತರರು ಆರೋಪಿಸಿದ್ದರು. ಈ ಕುರಿತಾದ ಮರುಪರಿಶೀಲನಾ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ಪಲ್ ಪರಿಕ್ಕರ್ ಅವರು ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
'ರಫೇಲ್ ತೀರ್ಪು ಹೊರಬಿದ್ದಿದೆ. ಇದು ರಾಹುಲ್ ಗಾಂಧಿ ಅವರಿಗೆ ಉತ್ತಮ ಕಲಿಕೆಯ ಅನುಭವ ಎಂದು ನಾನು ಭಾವಿಸುತ್ತೇನೆ. ಈ ವಿಚಾರದಲ್ಲಿ ಅವರು ಎಲ್ಲ ರೀತಿಯ ಕೆಟ್ಟ ರಾಜಕೀಯ ಆಟವನ್ನು ಆಡಿದ್ದರು. ಅದೇ ರೀತಿ ರಾಜಕೀಯಕ್ಕಾಗಿಯೇ ಅನಾರೋಗ್ಯಪೀಡಿತರಾಗಿದ್ದ ನನ್ನ ತಂದೆಯನ್ನು ನೋಡಲು ಬಂದಿದ್ದ ಭೇಟಿಯನ್ನು ಬಳಸಿಕೊಂಡಿದ್ದರು' ಎಂದು ಉತ್ಪಲ್ ಆರೋಪಿಸಿದ್ದಾರೆ.

'ಇಂಗ್ಲೆಂಡ್ ಮೂಲದ ಆಫ್ಸೆಟ್ ಗುತ್ತಿಗೆದಾರರೊಬ್ಬರೊಂದಿಗೆ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದರು. ದೋಕ್ಲಾಂ ಬಿಕ್ಕಟ್ಟಿನ ವೇಳೆ ಎದುರಾಳಿ ದೇಶದ (ಚೀನಾ) ರಾಯಭಾರಿಯನ್ನು ರಹಸ್ಯವಾಗಿ ಭೇಟಿಯಾಗಿದ್ದರು ಎಂದು ಮಾಧ್ಯಮ ವರದಿಗಳು ಹೇಳಿವೆ. ಇವುಗಳನ್ನು ನಂಬುವುದಾದರೆ ಇಲ್ಲಿ ಕೈಗಾರಿಕಾ ಬೇಹುಗಾರಿಕೆ ನಡೆಸಿದ್ದ ವರದಿಗಳು ಪ್ರಕಟವಾಗಿದ್ದವು. ದೋಕ್ಲಾಂ ಬಿಕ್ಕಟ್ಟಿನ ಸಂದರ್ಭದಲ್ಲಿ ಕಡು ವಿರೋಧಿ ದೇಶದೊಂದಿಗೆ ನಡೆದಿದೆ ಎಂಬ ಅನುಮಾನ ಮೂಡುತ್ತದೆ. ಆದರೆ ಯಾವುದೇ ಪುರಾವೆಗಳು ಇಲ್ಲದ ಸಂಶಯದ ಲಾಭವನ್ನು ಅವರಿಗೆ ಬಿಟ್ಟುಬಿಡುತ್ತೇನೆ. ಇವುಗಳಿಂದ ಅವರು ಪಾಠ ಕಲಿತಿರಬಹುದು ಎಂದು ನಂಬುತ್ತೇನೆ' ಎಂಬುದಾಗಿ ಉತ್ಪಲ್ ಹೇಳಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications