ಗೋವಾದಲ್ಲೀಗ ಪಕ್ಷಾಂತರ ವಿರೋಧಿ ಕಾಯಿದೆ ಅನ್ವಯವಾಗೋಲ್ಲ, ಯಾಕೆ?
ಪಣಜಿ, ಜುಲೈ 11: ಚುನಾಯಿತ ಪ್ರತಿನಿಧಿಗಳು ಒಂದು ಪಕ್ಷ ತೊರೆದು ಮತ್ತೊಂದು ಪಕ್ಷಕ್ಕೆ ಹಾರುವ ಪ್ರಕ್ರಿಯೆಗೆ ಕಡಿವಾಣ ಹಾಕಿದ್ದು ಪಕ್ಷಾಂತರ ನಿಷೇಧ ಕಾಯಿದೆ. ಪಕ್ಷ ವಿರೋಧಿ ನಡೆ ಮತ್ತು ಪಕ್ಷಕ್ಕೆ ದ್ರೋಹ ಮಾಡಿ, ಜನಾದೇಶವನ್ನೂ ಧಿಕ್ಕರಿಸಿ ಬೇರೊಂದು ಪಕ್ಷ ಸೇರುವ ಶಾಸಕ/ಸಂಸದರ ವಿರುದ್ಧ ಪ್ರಯೋಗಿಸಬಹುದಾದ ಈ ಪರಿಣಾಮಕಾರಿ ಕಾಯಿದೆ ಕೆಲವೊಂದು ಸಂದರ್ಭದಲ್ಲಿ ಉಪಯೋಗಕ್ಕೆ ಬರಲಾರದು. ಅದಕ್ಕೆ ಅತ್ಯುತ್ತ ಉದಾಹರಣೆ ಗೋವಾ.
ಗೋವಾದಲ್ಲಿ ಕಾಂಗ್ರೆಸ್ ನ 15 ಶಾಸಕರಲ್ಲಿ 10 ಶಾಸಕರು ಬಿಜೆಪಿಗೆ ಬೆಂಬಲ ಘೋಷಿಸಿ, ಬಿಜೆಪಿ ಜೊತೆ ಪಕ್ಷವನ್ನು ವಿಲೀನಗೊಳಿಸಲು ಮುಂದಾಗಿದ್ದಾರೆ. ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಪಕ್ಷದ ವರಿಷ್ಟರಿಗೆ ಸಾಧ್ಯವಿಲ್ಲ. ಏಕೆಂದರೆ 1985 ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ಅವಧಿಯಲ್ಲಿ ಸಂವಿಧಾನದ 10 ನೇ ಪರಿಚ್ಛೇದ 52 ನೇ ತಿದ್ದುಪಡಿಯಲ್ಲಿ ಪಕ್ಷೇತರ ನಿಷೇಧ ಕಾಯಿದೆಯನ್ನು ಸೇರಿಸಲಾಯಿತು. ಇದರ ಪ್ರಕಾರ ಯಾವುದೇ ಪಕ್ಷಶದ ಮೂರನೇ ಎರಡರಷ್ಟು(2/3) ಚುನಾಯಿತ ಪ್ರತಿನಿಧಿಗಳು ಬೇರ ಪಕ್ಷದೊಂದಿಗೆ ವಿಲೀನಕ್ಕೆ ಮುಂದಾದರೆ ಅದನ್ನು ತಡೆಯುವುದಕ್ಕೆ ಸಂವಿಧಾನದಲ್ಲಿ ಸಾಧ್ಯವಿಲ್ಲ. ಹೆಚ್ಚಿನ ಸಂಖ್ಯೆಯ ಚುನಾಯಿತ ಪ್ರತಿನಿಧಿಗಳು ಅದೇ ಅಭಿಪ್ರಾಯಕ್ಕೆ ಬೆಂಬಲ ಸೂಚಿಸಿದ್ದಾರೆ ಎಂಬ ಕಾರಣಕ್ಕೆ ಈ ವಿಲೀನಕ್ಕೆ ವಿರೋಧ ವ್ಯಕ್ತಪಡಿಸುವುದು ಸಾಧ್ಯವಾಗುವುದಿಲ್ಲ.
ಇದೀಗ ಗೋವಾದಲ್ಲಿ ಒಟ್ಟು 15 ಕಾಂಗ್ರೆಸ್ ಶಾಸಕರಲ್ಲಿ 10 ಶಾಸಕರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅಂದರೆ 15x2/3=10. ಬಿಜೆಪಿಗೆ ಬೆಂಬಲ ನೀಡಿದ ಶಾಸಕರ ಸಂಖ್ಯೆ ಮೂರನೆಯ ಎರಡರಷ್ಟಿರುವುದರಿಂದ ಅವರು ಪಕ್ಷಾಂತರ ನಿಷೇಧ ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ.

ಅಕಸ್ಮಾತ್ ಅದಕ್ಕಿಂತ ಕಡಿಮೆ ಶಾಸಕರು ಪಕ್ಷ ತೊರೆದಿದ್ದರೆ, ಆಗ ಅವರ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲಿ ಕ್ರಮ ತೆಗೆದುಕೊಳ್ಳಲು ಸಾಧ್ಯವಿತ್ತು. ಅವರ ಅನರ್ಹತೆಯನ್ನು ಘೋಷಿಸುವ ಅಧಿಕಾರ ಪಕ್ಷಕ್ಕಿತ್ತು. ಆದರೆ ಈಗ ಅದು ಸಾಧ್ಯವಿಲ್ಲ.
ಇತ್ತೀಚೆಗಷ್ಟೇ ಗೋವಾದಲ್ಲಿ ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷದ ಮೂವರು ಶಾಸಕರಲ್ಲಿ ಇಬ್ಬರು ಬಿಜೆಪಿಗೆ ಬೆಂಬಲಿಸಿ, ಪಕ್ಷವನ್ನು ವಿಲೀನಗೊಳಿಸಿದ್ದರು. ಆಗಲೂ ಪಕ್ಷಾಂತರ ನಿಷೇಧ ಕಾಯಿದೆ ಅನ್ವಯವಾಗಿರಲಿಲ್ಲ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications