ಗೋವಾ; ಹೊಸ ವರ್ಷದ ಪಾರ್ಟಿಗೆ ಸರ್ಕಾರದ ಒಪ್ಪಿಗೆ!
ಪಣಜಿ, ಡಿಸೆಂಬರ್ 29; ಓಮಿಕ್ರಾನ್ ಹರಡುವಿಕೆ ಭೀತಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ವಿವಿಧ ರಾಜ್ಯ ಸರ್ಕಾರಗಳು ನಿಷೇಧ ಹೇರಿವೆ, ನೈಟ್ ಕರ್ಫ್ಯೂ ಜಾರಿಗೊಳಿಸಿವೆ. ಆದರೆ ಗೋವಾ ರಾಜ್ಯ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದೆ.
ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, "ರಾಜ್ಯದಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಯಾವುದೇ ನಿಯಮಗಳನ್ನು ಜಾರಿಗೊಳಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದರು.
"ಡಿಸೆಂಬರ್ 31ರಂದು ರಾಜ್ಯದಲ್ಲಿ ಪಾರ್ಟಿ, ಕಾರ್ಯಕ್ರಮಗಳನ್ನು ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಆಗಮಿಸುವ ಅತಿಥಿಗಳು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಅಥವ ಎರಡು ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕು" ಎಂದು ಪ್ರಮೋದ್ ಸಾವಂತ್ ಹೇಳಿದದರು.

"ಎರಡು ಡೋಸ್ ಲಸಿಕೆ ಪಡೆದ ದಾಖಲು, ನೆಗಟಿವ್ ರಿಪೋರ್ಟ್ ಅತಿಥಿಗಳಿಗೆ ಕಡ್ಡಾಯಗೊಳಿಸಲಾಗಿದೆ. ಇಲ್ಲವಾದಲ್ಲಿ ಯಾರನ್ನೂ ಸಹ ಕಾರ್ಯಕ್ರಮಗಳಿಗೆ ಬಿಡುವುದಿಲ್ಲ" ಎಂದು ತಿಳಿಸಿದರು.
ಮಂಗಳವಾರ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಮೂರಂಕಿಗೆ ತಲುಪಿದೆ. ಆದ್ದರಿಂದ ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ನೀಡುವ ಕುರಿತು ಪ್ರಶ್ನೆ ಎದ್ದಿತ್ತು.
"ಸರ್ಕಾರ ಯಾವುದೇ ನಿರ್ಬಂಧ ಅಥವ ನೈಟ್ ಕರ್ಫ್ಯೂ ಜಾರಿಗೊಳಿಸುವುದಿಲ್ಲ. ಪ್ರವಾಸೋದ್ಯಮ ಕ್ಷೇತ್ರಕ್ಕೆ ನಾವು ನಷ್ಟ ಉಂಟು ಮಾಡುವುದಿಲ್ಲ. ಡಿಸೆಂಬರ್ 31ರ ಕಾರ್ಯಕ್ರಮಗಳು ಕುರಿತು ವಿವರವಾದ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.
ಜನವರಿ 3ಕ್ಕೆ ಸಭೆ; ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಸರ್ಕಾರ ನಿಗಾವಹಿಸಿದೆ. ಜನವರಿ 3ರಂದು ರಾಜ್ಯ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯನ್ನು ಕರೆಯಲಾಗಿದೆ. ಕಠಿಣ ಕ್ರಮಗಳು ಅಗತ್ಯವಿದ್ದರೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ವರ್ಷಾಂತ್ಯಕ್ಕೆ ಗೋವಾ ಪ್ರವಾಸಿಗರಿಂದ ತುಂಬಿ ಹೋಗಿದೆ. ಹೋಟೆಲ್ಗಳು ಶೇ 90ರಷ್ಟು ಭರ್ತಿಯಾಗಿವೆ. ವಿವಿಧ ಬೀಚ್ಗಳಲ್ಲಿ ಹೆಚ್ಚು ಜನಸಂದಣಿ ಕಂಡು ಬರುತ್ತಿದೆ. ಗುರುವಾರ ಮತ್ತು ಶುಕ್ರವಾರ ಮತ್ತಷ್ಟು ಜನರು ಗೋವಾಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ದೇಶದ ವಿವಿಧ ರಾಜ್ಯಗಳು ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ ಹೇರಿವೆ. ನೈಟ್ ಕರ್ಫ್ಯೂ ಸೇರಿದಂತೆ ಹಲವಾರು ಕಠಿಣ ನಿಯಮಗಳನ್ನು ಜಾರಿಗೊಳಿಸಿವೆ. ಇಂತಹ ಸಂದರ್ಭದಲ್ಲಿಯೇ ಗೋವಾ ರಾಜ್ಯ ಪಾರ್ಟಿ, ಕಾರ್ಯಕ್ರಮಗಳಿಗೆ ಅವಕಾಶ ನೀಡುವ ಮೂಲಕ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದೆ.
ಗೋವಾ ರಾಜ್ಯದ ಆದಾಯ ಪ್ರವಾಸೋದ್ಯಮದ ಮೇಲೆಯೆ ಅವಲಂಬಿತವಾಗಿದೆ. ವರ್ಷಾಂತ್ಯದ ಸಂದರ್ಭದಲ್ಲಿ ಹೆಚ್ಚಿನ ಜನರು ರಾಜ್ಯಕ್ಕೆ ಆಗಮಿಸುತ್ತಾರೆ. ಕೋವಿಡ್ ಸಂದರ್ಭದಲ್ಲಿ ರಾಜ್ಯದ ಪ್ರವಾಸೋದ್ಯಮ ಚಟುವಟಿಕೆ ನೆಲಕಚ್ಚಿತ್ತು, ಈಗ ಪುನಃ ಚೇತರಿಸಿಕೊಳ್ಳುತ್ತಿದೆ.
ಮಂಗಳವಾರ ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ. ಸೋಮವಾರ 67 ಹೊಸ ಪ್ರಕರಣ ದಾಖಲಾಗಿತ್ತು. ಆದರೆ ಮಂಗಳವಾರ 112 ಪ್ರಕರಣಗಳು ದಾಖಲಾಗಿವೆ.
ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,80,229. ಒಟ್ಟು ಮೃತಪಟ್ಟವರ ಸಂಖ್ಯೆ 3,520. ಮೊದಲ ಓಮಿಕ್ರಾನ್ ಪ್ರಕರಣ ಸಹ ಇದೇ ರಾಜ್ಯದಲ್ಲಿ ದಾಖಲಾಗಿವೆ.
ಹೊಸ ಪ್ರಕರಣಗಳು ಹೆಚ್ಚಳ; ದೇಶದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ದೇಶದಲ್ಲಿನ ಹೊಸ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ 24 ಗಂಟೆಯಲ್ಲಿ 9,195 ಹೊಸ ಪ್ರಕರಣ ದಾಖಲಾಗಿದೆ.
ಭಾರತದಲ್ಲಿನ ಕೋವಿಡ್ ಗುಣಮುಖ ಪ್ರಮಾಣ ಶೇ 98.04 ಆಗಿದೆ. 2020ರ ಮಾರ್ಚ್ ಬಳಿಕ ಇದು ಅತಿ ಹೆಚ್ಚಿನ ಗುಣಮುಖ ಪ್ರಮಾಣವಾಗಿದೆ. ದೇಶದ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 781ಕ್ಕೆ ಏರಿಕೆಯಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications