ವಾಯುಸೇನೆಗೆ ಐತಿಹಾಸಿಕ ದಿನ: ಇಂದು ಭಾರತೀಯ ಸೇನೆ ಸೇರಲಿರುವ ರಫೇಲ್
Recommended Video
ನವದೆಹಲಿ, ಅಕ್ಟೋಬರ್ 08: ಭಾರತದ ಎರಡು ದಶಕಗಳ ಕನಸು ನನಸಾಗುವುದಕ್ಕೆ ಇಂದು ಮುಹೂರ್ತ ಕೂಡಿಬಂದಿದೆ. ವಿವಾದದ ಕೇಂದ್ರಬಿಂದುವಾಗಿದ್ದ ರಫೇಲ್ ಫೈಟರ್ ಜೆಟ್ ಇಂದು ಅಧಿಕೃತವಾಗಿ ಭಾರತೀಯ ಸೇನೆ ಸೇರಲಿದ್ದು, ವಾಯುಸೇನೆ ನೂರಾನೆ ಬಲ ನೀಡಲಿದೆ. ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಫ್ರಾನ್ಸ್ ರಾಜಧಾನಿ ಪ್ಯಾರಿಸ್ ಗೆ ತೆರಳಿದ್ದು, ಅದ್ಧೂರಿ ಕಾರ್ಯಕ್ರಮದಲ್ಲಿ ಯುದ್ಧ ವಿಮಾನಗಳನ್ನು ಸ್ವೀಕರಿಸಲಿದ್ದಾರೆ.
ದಸರಾ ಮತ್ತು 87ನೇ ವಾಯುಸೇನಾ ದಿನ(ಅಕ್ಟೋಬರ್ 8)ದ ಸುಸಂದರ್ಭದಲ್ಲಿ ರಫೇಲ್ ಅನ್ನು ಭಾರತ ಸ್ವೀಕರಿಸುತ್ತಿದೆ.
RB-01 ಎಂಬ ಹೆಸರಿನ ರಫೇಲ್ ಯುದ್ಧ ವಿಮಾನ ಭಾರತ ಫ್ರಾನ್ಸ್ ನಿಂದ ಖರೀದಿ ಮಾಡುತ್ತಿರುವ 36 ಯುದ್ಧ ವಿಮಾನಗಳಲ್ಲಿ ಮೊದಲನೆಯದಾಗಿದೆ. ಅತ್ಯಾಧುನಿಕ ತಂತ್ರಜ್ಞಾನವುಳ್ಳ ಈ ಯುದ್ಧ ವಿಮಾನ ಎದುರಾಳಿಗಳ ದಾಳಿಯನ್ನು ಸಮರ್ಥವಾಗಿ ಎದುರಿಸಲು ಮತ್ತು ಸೋಲಿಸಲು ಅತ್ಯಂತ ಸಮರ್ಪಕವಾಗಿದೆ ಎಂಬುದು ಸೇನಾ ಮುಖ್ಯಸ್ಥರ ಮಾತು.
RB-01 ಎಂದರೆ ಏರ್ ಮಾರ್ಶಲ್ ಆರ್ ಕೆ ಎಸ್ ಬಾದುರಿಯಾ ಅವರ ಹೆಸರಿನ ಇನಿಶಿಯಲ್ ಆಗಿದ್ದು, ಭಾರತ ಮತ್ತು ಫ್ರಾನ್ಸ್ ನಡುವಿನ ರಫೇಲ್ ಒಪ್ಪಂದದಲ್ಲಿ ಅವರು ಮುಖ್ಯ ಪಾತ್ರ ವಹಿಸಿದ್ದರು.

ರಫೇಲ್ ಜೆಟ್ ಎದುರಾಳಿ ಸೇನೆಯ ಬಳಿಗೆ ತೆರಳದೆ ದೋರದಿಂದಲೇ ಖರಾರುವಾಕ್ ದಾಳಿ ನಡೆಸಬಲ್ಲ ಸಂಬಂಧ ಹೊಂದಿದೆ.
36 ರಾಫೆಲ್ ಯುದ್ಧ ವಿಮಾನ ವ್ಯವಹಾರ ಒಪ್ಪಂದಕ್ಕೆ ಸೆಪ್ಟೆಂಬರ್ 23, 2016ರಂದು ಶುಕ್ರವಾರ ಉಭಯ ದೇಶಗಳ ಪ್ರತಿನಿಧಿಗಳು ಸಹಿ ಹಾಕಿದ್ದರು. ಸುಮಾರು 7.8 ಬಿಲಿಯನ್ ಯುರೋ (ಸುಮಾರು 780 ಕೋಟಿ) ವ್ಯವಹಾರಿಕ ಮೊತ್ತ ಇದಾಗಿದೆ. ಅಂದು ಕೇಂದ್ರ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವ ಜಿಯಾನ್ ವೈವೆಸ್ ಲೆಡ್ರಿಯನ್ ಅವರು ದೆಹಲಿಯಲ್ಲಿ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ್ದರು.
ಈ ಯುದ್ಧ ವಿಮಾನ ಖರೀದಿಯಲ್ಲಿ ಭಾರೀ ಹಗರಣ ನಡೆದೆ ಎಂಬ ದೂರು ಎನ್ ಡಿಎ 1 ಸರ್ಕಾರದ ವಿರುದ್ಧ ಕೇಳಿಬಂದಿತ್ತು. ಕಳೆದ ಲೋಕಸಭೆ ಚುನಾವಣೆಯ ಸಮಯದಲ್ಲೂ ವಿಪಕ್ಷಗಳು ಇದನ್ನೇ ಪ್ರಚಾರದ ಮುಖ್ಯ ವಿಷಯವನ್ನಾಗಿ ಮಾಡಿಕೊಂಡಿದ್ದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications