ಪಾಕ್ DNA ಯಲ್ಲೇ ಭಯೋತ್ಪಾದನೆ: ಯುನೆಸ್ಕೋದಲ್ಲೂ ಮುಖಭಂಗ
ಪ್ಯಾರಿಸ್, ನವೆಂಬರ್ 15: "ಪಾಕಿಸ್ತಾನದ ಡಿಎನ್ ಎ(ವಂಶವಾಹಿ) ಯಲ್ಲೇ ಭಯೋತ್ಪಾದನೆ ಆಳವಾಗಿ ಬೇರೂರಿದೆ" ಎನ್ನುವ ಮೂಲಕ ಭಾರತ ಪಾಕಿಸ್ತಾನಕ್ಕೆ ಯುನೆಸ್ಕೋ ಸಾಮಾನ್ಯ ಸಭೆಯಲ್ಲಿ ತಕ್ಕ ಉತ್ತರ ಕೊಟ್ಟಿದೆ.
ಫ್ರಾನ್ಸ್ ನ ಪ್ಯಾರಿಸ್ ನಲ್ಲಿ ನಡೆದ ಯುನೆಸ್ಕೋ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಭಾರತೀಯ ನಿಯೋಗದ ನೇತೃತ್ವ ವಹಿಸಿದ ಅನನ್ಯಾ ಅಗರ್ವಾಲ್ ಮಾತನಾಡಿ, "ಪಾಕಿಸ್ತಾನದಲ್ಲಿ ಕತ್ತಲಲ್ಲದೆ ಬೇರೆ ಏನೂ ಇಲ್ಲ" ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ ೩೭೦ ನೇ ವಿಧಿಯನ್ನು ರದ್ದುಗೊಳಿಸಿ, ಕಣಿವೆ ರಾಜ್ಯಕ್ಕೆ ನೀದಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಸರ್ಕಾರ ಹಿಂಪಡೆದ ನಂತರ ಪಾಕಿಸ್ತಾನ ಭಾರತದ ವಿರುದ್ಧ ವಿಶ್ವಸಂಸ್ಥೆಯ ಬಾಗಿಲು ತಟ್ಟಿತ್ತು. ಆದರೆ ಕಾಶ್ಮೀರ ಭಾರತದ ಆಂತರಿಕ ವಿಷಯ ಎನ್ನುವ ಮೂಲಕ ಹಲವು ದೇಶಗಳು ಪಾಕಿಸ್ತಾನದ ನಡೆಗೆ ಮುಖಭಂಗವಾಗುವಂಥ ಹೇಳಲಿಕೆ ನೀಡಿದ್ದವು. ಇದೀಗ ಯುನೆಸ್ಕೋ ಸಭೆಯಲ್ಲೂ ಭಾರತ ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿರುವುದನ್ನು ನೇರವಾಗಿ ಆರೋಪಿಸಿದ್ದು, ಮತ್ತೆ ಪಾಕಿಸ್ತಾನ ಮುಖಭಂಗ ಅನುಭವಿಸುವಂತಾಗಿದೆ.

ಎಲ್ಲ ದುಷ್ಟಶಕ್ತಿಗಳಿಗೂ ಪಾಕಿಸ್ತಾನದಲ್ಲಿ ನೆಲೆ!
ದೌರ್ಭಾಗ್ಯ ಎಂದರೆ ಭಯೋತ್ಪಾದಕರು, ಉಗ್ರವಾದದ ಪ್ರತಿಪಾದಕರು ಮುಂತಾದ ಎಲ್ಲ ದುಷ್ಟಶಕ್ತಿಗಳಿಗೂ ಪಾಕಿಸ್ತಾನ ನೆಲೆ ನೀಡುತ್ತಿದೆ. ಭಯೋತ್ಪಾದನೆಯ ಪ್ರತಿಪಾದನೆಯ ಕೆಲಸ ಮಾಡುತ್ತಿದೆ ಎಂದು ಭಾರತ ದೂರಿದೆ.

ಯುನೆಸ್ಕೋ ವೇದಿಕೆ ದುರುಪಯೋಗ
ಪಾಕಿಸ್ತಾನವು ಭಾರತದ ವಿರುದ್ಧ ವಿಷ ಕಾರಲು ಮತ್ತು ಅದನ್ನು ರಾಜಕೀಯಗೊಳಿಸಲು ಯುನೆಸ್ಕೋ(The United Nations Educational, Scientific and Cultural Organization)ದಂಥ ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಅತ್ಯಂತ ವಿಷಾದಕರ ಸಂಗತಿ ಎಂದು ಭಾರತ ಬೇಸರ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆ ವೇದಿಕೆಯಲ್ಲೇ ಅಣುದಾಳಿಯ ಬೆದರಿಕೆ!
"ವಿಶ್ವಸಂಸಥೆಯ ವೇದಿಕೆಯಲ್ಲಿ ನಿಂತು ಒಂದು ದೇಶದ ಅಧ್ಯಕ್ಷರೇ ಅಣುಬಾಂಬ್ ದಾಳಿಯ ಬೆದರಿಕೆ ಒಡ್ಡುತ್ತಾರೆಂದರೆ ಅಂಥ ಕೆಲಸ ಮಾಡುವುದಕ್ಕೆ ಪಾಕಿಸ್ತಾನಕ್ಕೆ ಮಾತ್ರ ಸಾಧ್ಯ" ಎಂದ ಅನನ್ಯಾ ಅಗರ್ವಾಲ್, ಸೆಪ್ಟೆಂಬರ್ ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ್ದ ಇಮ್ರಾನ್ ಖಾನ್ ಅವರ ಭಾಷಣವನ್ನು ಸ್ಮರಿಸಿದರು. "ಅಕಸ್ಮಾತ್ ಎರಡು ನೆರೆ ದೇಶಗಳ ನಡುವೆ ಪರಸ್ಪರ ಅಣು ಯುದ್ಧವಾದರೆ ಪರಿಸ್ಥಿತಿ ತೀರಾ ಹದಗೆಡುತ್ತದೆ" ಎಮದು ಇಮ್ರಾನ್ ಖಾನ್ ಆ ಭಾಷಣದಲ್ಲಿ ಹೇಳಿದ್ದರು.

ಲ್ಯಾಡೆನ್ ನನ್ನು ಹೀರೋ ಎಂದ ಮುಷರಫ್!
"ಅಷ್ಟೇ ಅಲ್ಲ, ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, ಆಲ್ ಖೈದಾ ಉಗ್ರ ಓಸಾಮಾ ಬಿನ್ ಲ್ಯಾಡೆನ್ ನನ್ನು ಪಾಕಿಸ್ತಾನದ ಹೀರೋ ಎಂದು ಕರೆದಿದ್ದು ಸಹ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ಅದರ ನಡೆಗೆ ಸಾಕ್ಷಿ" ಎಂದು ಅಗರ್ವಾಲ್ ಆಕ್ರೋಶ ವ್ಯಕ್ತಪಡಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications