ಪ್ಯಾರಿಸ್ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಚಾಕುವಿನಿಂದ ದಾಳಿ ನಡೆಸಿ, ನಾಲ್ವರ ಹತ್ಯೆ
ಪ್ಯಾರಿಸ್, ಅಕ್ಟೋಬರ್ 3: ಪ್ಯಾರಿಸ್ ನ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿಯೊಬ್ಬ ಅಧಿಕಾರಿಗಳ ಮೇಲೆ ಗುರುವಾರ ಚಾಕುವಿನಿಂದ ಹಲ್ಲೆ ನಡೆಸಿ, ಕನಿಷ್ಠ ನಾಲ್ಕು ಮಂದಿಯನ್ನು ಕೊಂದಿದ್ದಾನೆ. ದಾಳಿಕೋರನನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಫ್ರೆಂಚ್ ಪೊಲೀಸ್ ಯೂನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಯನ್ನು ದಾಳಿಕೋರ ಕಚೇರಿಯಲ್ಲಿ ಆರಂಭಿಸಿದ್ದಾನೆ. ಆ ನಂತರ ನೋಟ್ರ ಡೇಮ್ ಕೆಥೆಡ್ರಲ್ ಪ್ರದೇಶದಲ್ಲಿ ಇರುವ ಪೊಲೀಸ್ ಕೇಂದ್ರ ಕಚೇರಿಯ ದೊಡ್ಡ ಕಾಂಪೌಂಡ್ ನ ಉದ್ದಕ್ಕೂ ಮುಂದುವರಿಸಿದ್ದಾನೆ. ಸದ್ಯಕ್ಕೆ ಗಾಯಾಳುಗಳು ಎಷ್ಟು ಮಂದಿ ಎಂಬ ಬಗ್ಗೆ ನಿಖರವಾದ ಮಾಹಿತಿ ಸಿಕ್ಕಿಲ್ಲ.
ದಾಳಿಕೋರನ ಉದ್ದೇಶ ಏನು ಎಂಬ ಬಗ್ಗೆ ತಿಳಿದುಬಂದಿಲ್ಲ. ಇಪ್ಪತ್ತು ವರ್ಷ ವಯಸ್ಸಿನ ಪೊಲೀಸ್ ಸಿಬ್ಬಂದಿ ಈ ದಾಳಿ ನಡೆಸಿದ್ದು, ಆತ ಗುಪ್ತಚರ ಇಲಾಖೆಯಲ್ಲಿ ಆಡಳಿತಗಾರ ಹುದ್ದೆಯನ್ನು ನಿರ್ವಹಿಸುತ್ತಿದ್ದ. ಗುರುವಾರ ಆತ ದಾಳಿ ನಡೆಸುವ ತನಕ ಯಾವುದೇ ಅನುಮಾನ ಮೂಡಿರಲಿಲ್ಲ. ಅಂದ ಹಾಗೆ ಈ ಹಿಂದೆ ಪೊಲೀಸ್ ಅಧಿಕಾರಿಗಳ ಮೇಲೆ ಇಂಥ ದಾಳಿ ನಡೆದಿರಲಿಲ್ಲ ಎನ್ನಲಾಗುತ್ತಿದೆ.

ಪ್ಯಾರಿಸ್ ನ ಪೊಲೀಸರಿಗೆ ಕಡಿಮೆ ಸಂಬಳ, ಕೆಲಸದ ಅವಧಿ ಹೆಚ್ಚು ಹಾಗೂ ಪೊಲೀಸರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ದೂರಿ ಸಾವಿರಾರು ಅಧಿಕಾರಿಗಳು ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಅದಾದ ಮರುದಿನಕ್ಕೆ ಈ ಘಟನೆ ನಡೆದಿದೆ.
ಫಾನ್ಸ್ ನ ಪ್ರಧಾನಿ, ಆಂತರಿಕ ಸಚಿವ ಮತ್ತಿತರರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಈಚೆಗೆ ಉಗ್ರಗಾಮಿಗಳು ಫ್ರೆಂಚ್ ಪೊಲೀಸರನ್ನು ಗುರಿ ಮಾಡಿಕೊಂಡು ದಾಳಿ ನಡೆಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications