ಪಾಕಿಸ್ತಾನವನ್ನು ಚೆಕ್ ಮೇಟ್ ಮಾಡಿದ ವಿದೇಶಾಂಗ ಸಚಿವ ಜೈಶಂಕರ್!

ನವದೆಹಲಿ, ನವೆಂಬರ್ 16: "ಪಾಕಿಸ್ತಾನಕ್ಕೆ ಭಾರತದೊಂದಿಗೆ ಉತ್ತಮ ಸಂಬಂಧ ಬೇಕು ಎಂದಾದರೆ ಮೋಸ್ಟ್ ವಾಂಟೆಡ್ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಲಿ" ಎನ್ನುವ ಮೂಲಕ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ವಿದೇಶಾಂಗ ಸಚಿವ ಎಸ್ ಜೈಶಂಕರ್.

ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದ ಜೈಶಂಕರ್, ಫ್ರೆಂಚ್ ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ರೀತಿ ಹೇಳಿದರು.

"ಭಾರತದೊಂದಿಗೆ ಸ್ನೇಹಯುತ ಸಂಬಂಧವನ್ನು ಇಟ್ಟುಕೊಳ್ಳುವ ಬಗ್ಗೆ ಪಾಕಿಸ್ತಾನ ಗಂಭೀರವಾಗಿ ಯೋಚಿಸುತ್ತದೆ ಎಂದಾದರೆ ಅದು ದಾವೂದ್ ಇಬ್ರಾಹಿಂ, ಹಫೀಜ್ ಸಯ್ಯದ್ ರಂಥ ಮೋಸ್ಟ್ ವಾಂಟೆಡ್ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಬೇಕು" ಎಂದು ಅವರು ಹೇಳಿದರು.

S Jaishankar Says, Pakistan Should Hand Over Most Wanted Terrorists

ಲ್ಯಾಡೆನ್ ಪಾಕಿಸ್ತಾನದ ಹೀರೋ: ಪರ್ವೇಜ್ ಮುಷರಫ್

"ಉಭಯ ದೇಶಗಳ ನಡುವೆ ಸೌಹಾರ್ದಯು ಸಂಬಂಧ ನೆಲೆಗೊಳ್ಳದಿರುವುದಕ್ಕೆ ಮುಖ್ಯ ಕಾರಣವೆಂದರೆ ಪಾಕಿಸ್ತಾನ ತನ್ನ ನೆಲದಲ್ಲಿ ಒಂದು ಉಗ್ರ ಕಾರ್ಖಾನೆಯನ್ನು ಸ್ಥಾಪಿಸಿದೆ. ಮತ್ತು ಭಾರತದ ವಿರುದ್ಧ ದಾಳಿ ನಡೆಸಲು ಅವರನ್ನು ಕಳಿಸುತ್ತಿದೆ. ತನ್ನ ಈ ಸ್ಥಿತಿಯನ್ನು ಪಾಕಿಸ್ತಾನವೇ ಒಪ್ಪಿಕೊಂಡಿದೆ. ಹೀಗಿರುವಾಗ ಸ್ನೇಹಕ್ಕೆ ಕೈಚಾಚಲು ಅದರ ಬಳಿ ಯಾವ ನೈತಿಕತೆ ಇದೆ?" ಎಂದು ಅವರು ಪ್ರಶಸ್ನಿಸಿದರು.

ಜಾಗತಿಕ ಉಗ್ರ ಮಸೂದ್ ಅಜರ್, ಹಫೀಜ್ ಸಯ್ಯದ್ ಮತ್ತು ಭೂಗತ ದೊರೆ ದಾವೂದ್ ಇಬ್ರಾಹಿಂ ಈ ಮೂವರೂ ಉಗ್ರರೂ ಪಾಕಿಸ್ತಾನದಲ್ಲೇ ಇದ್ದಾರೆ ಎಂಬುದಕ್ಕೆ ಸಾಕ್ಷ್ಯಗಳಿದ್ದರೂ ಪಾಕಿಸ್ತಾನ ಅವರಿಗೆ ರಕ್ಷನೆ ನೀಡುತ್ತಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಹಿಂದೇಟು ಹಾಕುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+