ಬಿಹಾರ: ಗೆದ್ದವರಲ್ಲಿ 163 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ
ಪಟ್ನಾ, ನವೆಂಬರ್ 12: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದವರ ಪೈಕಿ 163 ಮಂದಿ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ತಮ್ಮ ವಿರುದ್ಧ ಅಪರಾಧ ಪ್ರಕರಣಗಳಿವೆ ಎಂದು ತಮ್ಮ ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್ನಲ್ಲಿ ಮಾಹಿತಿ ನೀಡಿದ್ದ ಅಭ್ಯರ್ಥಿಗಳಲ್ಲಿ ಗೆಲುವು ಕಂಡ 163 ಮಂದಿ ಅಂದರೆ ಶೇ 68ರಷ್ಟು ಮಂದಿ ಅಪರಾಧ ಪ್ರಕರಣಗಳನ್ನು ಹೊಂದಿದ್ದಾರೆ. ಇದರಲ್ಲಿ ಆರ್ಜೆಡಿ ಮೊದಲ ಸ್ಥಾನದಲ್ಲಿದ್ದು, ಶೇ 73ರಷ್ಟು ಚುನಾಯಿತ ಅಭ್ಯರ್ಥಿಗಳು ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ.
163 ಮಂದಿಯ ಪೈಕಿ ಅವರ ಅಫಿಡವಿಟ್ಗಳಲ್ಲಿ ಹೇಳಿರುವಂತೆ 123 ಮಂದಿ (ಶೇ 51) ತಮ್ಮ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳು ಬಾಕಿ ಇರುವುದಾಗಿ ತಿಳಿಸಿದ್ದಾರೆ. ಅಂದರೆ ಕೊಲೆ, ಕೊಲೆ ಪ್ರಯತ್ನ, ಅಪಹರಣ ಮತ್ತು ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಅವರ ಮೇಲಿದೆ.
2015ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿದ್ದ 142 ಶಾಸಕರು ತಮ್ಮ ಅಫಿಡವಿಟ್ನಲ್ಲಿ ಈ ರೀತಿಯ ಪ್ರಕರಣಗಳನ್ನು ಎದುರಿಸುತ್ತಿವುದಾಗಿ ತಿಳಿಸಿದ್ದರು. ಪ್ರಸ್ತುತ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ (ಎಡಿಆರ್) 243 ವಿಜೇತ ಅಭ್ಯರ್ಥಿಗಳ ಪೈಕಿ 241 ಮಂದಿಯ ಸ್ವಘೋಷಿತ ಅಫಿಡವಿಟ್ಗಳನ್ನು ಪರಿಶೀಲನೆ ನಡೆಸಿದೆ. ಉಳಿದ ವಿಜೇತರ ಬಗ್ಗೆ ಎಡಿಆರ್ ಯಾವುದೇ ಅಂತಹ ವಿವರ ನೀಡಿಲ್ಲ.

123 ವಿಜೇತರಲ್ಲಿ 19 ಕೊಲೆ ಪ್ರಕರಣ, 31 ಕೊಲೆಯ ಪ್ರಯತ್ನ ಮತ್ತು ಎಂಟು ಮಂದಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳನ್ನು ಹೊಂದಿದ್ದಾರೆ. ತೇಜಸ್ವಿ ಯಾದವ್ ಅವರ ಆರ್ಜೆಡಿ ಪಕ್ಷದ 74 ವಿಜೇತರಲ್ಲಿ 54 (ಶೇ 73) ಮಂದಿ ವಿರುದ್ಧ ಅಪರಾಧ ಪ್ರಕರಣಗಳು ಬಾಕಿ ಇದೆ. ಇನ್ನು ಬಿಜೆಪಿಯ 73 ರಲ್ಲಿ 47 ಮಂದಿ (ಶೇ 64) ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ.
ಜೆಡಿಯುದ 43 ವಿಜೇತರಲ್ಲಿ 20 ಮಂದಿ (ಶೇ 47), ಕಾಂಗ್ರೆಸ್ನ 19ರಲ್ಲಿ 16 ಮಂದಿ (ಶೇ 84), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ ಲೆನಿನಿಸ್ಟ್ ಲಿಬರೇಷನ್ ಪಕ್ಷದ 12 ರಲ್ಲಿ 10 (ಶೇ 83) ಮಂದಿ ಹಾಗೂ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷದ ಐದರಲ್ಲಿ ಐದೂ (ಶೇ 100) ಅಭ್ಯರ್ಥಿಗಳು ಅಪರಾಧ ಪ್ರಕರಣ ಎದುರಿಸುತ್ತಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications