ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ: ಬಿಹಾರ್ನಲ್ಲಿ 9 ಕಾರ್ಮಿಕರು ಸಾವು
ಪಾಟ್ನಾ, ಮೇ 18: ದೇಶದಲ್ಲಿ ವಲಸೆ ಕಾರ್ಮಿಕರ ರಸ್ತೆ ಅಪಘಾತ ಹೆಚ್ಚು ಸಂಭವಿಸುತ್ತಿದೆ. ಲಾಕ್ಡೌನ್ ಕಾರಣದಿಂದ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು, ಬಸ್ ಮತ್ತು ರೈಲಿಗೆ ಕಾಯದೆ ಹೆದ್ದಾರಿಗಳಲ್ಲಿ ನಡೆದುಕೊಂಡು, ಟ್ರಕ್, ಸೈಕಲ್ಗಳಲ್ಲಿ ಊರು ಸೇರುವ ಸಾಹಸ ಮಾಡ್ತಿದ್ದಾರೆ.
ಈ ನಡುವೆ ಅಪಘಾತಗಳಿಗೆ ಸಿಕ್ಕಿ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಪ್ರತಿದಿನವೂ ವರದಿಯಾಗುತ್ತಿದೆ. ಬಿಹಾರದ ಭಾಗಲ್ಪುರದ ನೌಗಾಚಿಯಾ ಬಳಿ ಟ್ರಕ್ ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಕೊರೊನಾ ಭೀತಿಯಲ್ಲಿ ಮನೆಗೆ ಹೊರಟವರು ಸೇರಿದ್ದು ಮಸಣ
ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಟ್ರಕ್ನಲ್ಲಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದು, ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರಕ್ ರಸ್ತೆಯಿಂದ ಹಳ್ಳಕ್ಕೆ ಬಿದ್ದಿದೆ. ಬಳಿಕ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಬಂದು ಕಾರ್ಯಾಚರಣೆ ಮಾಡಿದ್ದಾರೆ.
ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ 4 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 4 ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಬಸ್ ಸೋಲಾಪುರದಿಂದ ಜಾರ್ಖಂಡ್ಗೆ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ.
Bihar: At least 9 labourers dead & several injured after a truck & a bus collided in Naugachhia, Bhagalpur. The truck in which the labourers were travelling, fell off the road following the collision. Rescue operation underway. pic.twitter.com/rGVxw6xQVh
— ANI (@ANI) May 19, 2020
ಉತ್ತರ ಪ್ರದೇಶದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದರೆ, 12 ಮಂದಿ ಗಾಯಗೊಂಡಿದ್ದಾರೆ.