ಗಂಗಾ ನದಿಗೆ ಶವಗಳನ್ನು ಎಸೆದಿದ್ದು ಅಂಬ್ಯುಲೆನ್ಸ್ ಚಾಲಕರು
ಪಾಟ್ನಾ, ಮೇ 11; ಗಂಗಾ ನದಿಯ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯದ ಗಡಿಭಾಗದಲ್ಲಿ ಮಂಗಳವಾರ ಸಹ ಹಲವಾರು ಶವಗಳು ಪತ್ತೆಯಾಗಿವೆ. ಬಿಹಾರದಲ್ಲಿ ಸೋಮವಾರದಿಂದ ಸುಮಾರು 71 ಶವಗಳು ಪತ್ತೆಯಾಗಿವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಅಂಬ್ಯುಲೆನ್ಸ್ ಚಾಲಕರು ಸೇತುವೆ ಬಳಿಯಿಂದ ಶವಗಳನ್ನು ನದಿಗೆ ಎಸೆಯುತ್ತಿರುವ ವಿಡಿಯೋಗಳು ಸಾಮಾಜಿಕಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರ ಸರ್ಕಾರ ಇದಕ್ಕೆ ಉತ್ತರ ಪ್ರದೇಶವೇ ಕಾರಣ ಎಂದು ಆರೋಪಿಸಿದೆ.
ಬಿಹಾರದ ಬಿಜೆಪಿ ಸಂಸದ ಜನಾರ್ದನ್ ಸಿಂಗ್ ಸಿಗ್ರಿವಾಲ್, "ಜಯಪ್ರಭು ಸೇತು ಮೇಲಿಂದ ಅಂಬ್ಯುಲೆನ್ಸ್ ಚಾಲಕರು ಶವಗಳನ್ನು ನದಿಗೆ ಎಸೆದಿದ್ದಾರೆ" ಎಂದು ಆರೋಪಿಸಿದ್ದಾರೆ.

"ಬಕ್ಸರ್ ಜಿಲ್ಲೆಯ ಜಿಲ್ಲಾಡಳಿತ ಸೇತುವೆ ಬಳಿ ಭದ್ರತೆ ನಿಯೋಜಿಸಬೇಕು. ಇದರಿಂದಾಗಿ ಶವಗಳನ್ನು ನದಿಗೆ ಎಸೆಯದಂತೆ ತಡೆಯಬಹುದು" ಎಂದು ಜಿಲ್ಲಾಡಳಿತವನ್ನು ಸಂಸದರು ಒತ್ತಾಯಿಸಿದ್ದಾರೆ.
ಸೋಮವಾರ ಬಿಹಾರದ ಚೌಸಾ ಪ್ರದೇಶದಲ್ಲಿ ಕೋವಿಡ್ ಸೋಂಕಿತರದ್ದು ಎಂದು ಹೇಳಲಾದ ಶವಗಳು ಪತ್ತೆಯಾಗಿದ್ದವು. ಈ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಹಲವು ಶವಗಳಿಗೆ ಕೋವಿಡ್ ಸೋಂಕು ತಗುಲಿಲ್ಲ ಎಂದು ಬಳಿಕ ಸ್ಪಷ್ಟಪಡಿಸಲಾಗಿತ್ತು.
ಅಂತ್ಯ ಸಂಸ್ಕಾರದ ವೆಚ್ಚ ಅಧಿಕವಾಗಿದೆ. ಆದ್ದರಿಂದ ಜನರು ಶವಗಳನ್ನು ನದಿಗೆ ಎಸೆಯುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು ಆದರೆ ಅಂತ್ಯಸಂಸ್ಕಾರಕ್ಕೆ ಯಾವುದೇ ಸಮಸ್ಯೆಗಳು ಇಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
ಗಂಗಾ ನದಿಯಲ್ಲಿ ಶವಗಳು ಪತ್ತೆಯಾದ ಪ್ರಕರಣದ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ನಡುವೆ ಆರೋಪಕ್ಕೆ ಕಾರಣವಾಗಿದೆ. ಬಿಹಾರದ ಸಚಿವ ಸಂಜಯ್ ಕುಮಾರ್ ಝಾ, ಘಟನೆ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications