ಗಂಗೆಯಲ್ಲಿ ಶವಗಳ ರಾಶಿ, ನಮ್ಮದಲ್ಲ ಉತ್ತರ ಪ್ರದೇಶದ್ದು ಎಂದ ಬಿಹಾರ
ಪಾಟ್ನಾ, ಮೇ 10: ಪವಿತ್ರ ಗಂಗಾನದಿಯಲ್ಲಿ ಶವಗಳ ರಾಶಿ ರಾಶಿ ಹರಿದುಬಂದಿದೆ, ಇದು ಕಂಡುಬಂದಿದ್ದು, ಬಿಹಾರದಲ್ಲಿ ಆದರೆ ಬಿಹಾರವು ಇವು ನಮ್ಮದಲ್ಲ ಉತ್ತರ ಪ್ರದೇಶದ್ದು ಎಂದು ಹೇಳಿದೆ.
ಸ್ಥಳೀಯ ಅಧಿಕಾರಿಗಳು ಅನಧಿಕೃತವಾಗಿ ಇವು ಸೋಂಕಿತರ ಮೃತದೇಹಗಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಈಗಲೇ ಏನು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.
ಇನ್ನು ನದಿಯಲ್ಲಿ ತೇಲುತ್ತಿರುವ ಮೃತದೇಹಗಳಿಂದಾಗಿ ಉತ್ತರ ಪ್ರದೇಶ ಮತ್ತು ಬಿಹಾರ ನಡುವೆ ಆರೋಪ- ಪ್ರತ್ಯಾರೋಪ ಶುರುವಾಗಿದೆ.ಕಳೆದ ವರ್ಷ ದೇಶಾದ್ಯಂತ ಲಾಕ್ಡೌನ್ ವಿಧಿಸಿದ ವೇಳೆ ಕಾರ್ಖಾನೆ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ತಡೆ ನೀಡಲಾಗಿತ್ತುಇದರಿಂದ ರಾಸಾಯನಿಕ, ಮಾಲಿನ್ಯಕಾರಕಗಳು ಕೂಡ ಗಂಗೆ ಒಡಲು ಸೇರುತ್ತಿರಲಿಲ್ಲ. ಇದರಿಂದಾಗಿ ಲಾಕ್ಡೌನ್ ಬಳಿಕ ಗಂಗಾ ನದಿಯ ನೀರಿನ ಗುಣಮಟ್ಟ ಗಣನೀಯವಾಗಿ ಹೆಚ್ಚಾಗಿದೆ.
ಇದೀಗ ಆ ನೀರು ಕುಡಿಯಲು ಯೋಗ್ಯವಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದರು. ಆದರೆ, ಈಗ ಕೊರೊನಾ ಎರಡನೇ ಅಲೆಯಲ್ಲಿ ಸೋಂಕು ಹೆಚ್ಚಾಗಿದ್ದು, ಸಾವು ಹೆಚ್ಚಳಗೊಂಡಿದ್ದು, ಗಂಗೆಯಲ್ಲಿ ಮೃತದೇಹಗಳು ಸೇರುವ ಮೂಲಕ ಜನರಲ್ಲಿ ಆತಂಕ ಮೂಡಿಸಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು, ಕಳೆದ ಮೂರು ವಾರಗಳಲ್ಲಿ ದೇಶದಲ್ಲಿ 4000 ಸಾವಿರಕ್ಕೂ ಅಧಿಕ ಮಂದಿ ಕೋವಿಡ್ನಿಂದಾಗಿ ಮೃತ ಪಟ್ಟಿದ್ದಾರೆ. ಎಲ್ಲಡೆ ಶವಗಳ ಅಂತ್ಯಕ್ರಿಯೆಗೆ ಸಾಲುಗಳು ಕಂಡು ಬಂದಿದ್ದು, ಶಾಂತವಾಗಿದ್ದ ಚಿತಾಗಾರಗಳು ಗಿಜಿಗುಡುತ್ತಿವೆ. ಅಲ್ಲಿನ ಸಿಬ್ಬಂದಿಗಳು ಕೂಡ ದಿನ ಬಿಡುವಿಲ್ಲದ ಅಂತ್ಯಕ್ರಿಯೆಯಿಂದ ರೋಸಿದ್ದಾರೆ.
ಚೌಸಾದ ಬಿಡಿಒ ಅಶೋಕ್ ಕುಮಾರ್ ಈ ಬಗ್ಗೆ ಮಾತನಾಡಿ, ಇಲ್ಲಿ ಬಂದಿದ್ದು, 40-45 ಶವಗಳಾಗಿರಬಹುದು, ವಿವಿಧ ಸ್ಥಳಗಳಿಂದ ನದಿಯಲ್ಲಿ ಹರಿದು ಇವುಗಳು ಇಲ್ಲಿಗೆ ಬಂದು ಸೇರಿವೆ.
ಆದರೆ ಇವು ನಮ್ಮ ಜಿಲ್ಲೆಗೆ, ರಾಜ್ಯಕ್ಕೆ ಸೇರಿದ್ದಲ್ಲ, ನಾವು ಈ ನಿಟ್ಟಿನಲ್ಲಿ ಒಬ್ಬ ಕಾವಲುಗಾರರನ್ನು ನೇಮಿಸಿದ್ದು, ಅವರ ಸಮ್ಮುಖದಲ್ಲೇ ಶವಗಳನ್ನು ಸುಡಲಾಗುತ್ತದೆ. ಹೀಗಾಗಿ ಸದ್ಯ ಬರುತ್ತಿರುವ ಶವಗಳು ನಮ್ಮ ರಾಜ್ಯದಲ್ಲ. ಉತ್ತರ ಪ್ರದೇಶದಿಂದ ಹರಿದು ಬರುವ ಶವಗಳನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications