ರೈತರ ಆದಾಯ ದುಪ್ಪಟ್ಟಾಗಲ್ಲ, ಕುಸಿಯುತ್ತಿದೆ: ತೇಜಸ್ವಿ ಯಾದವ್

ಪಾಟ್ನಾ, ಸೆ. 25: ಕೇಂದ್ರ ಸರಕಾರದ ರೈತ ಹಾಗೂ ಕೃಷಿಕೂಲಿಕಾರರು, ಕಸುಬುದಾರರ ಆಧಾರಿತ ಕೃಷಿ ವಿರೋಧಿಯಾದ ಕಾರ್ಪೊರೇಟ್ ಕಂಪನಿಗಳ ಪರವಾದ ಕೃಷಿ ಸಂಬಂಧಿತ ವಿಧೇಯಕರನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸೆಪ್ಟಂಬರ್ 25 ರಂದು ದೇಶದೆಲ್ಲೆಡೆ ರೈತ ಸಂಘಟನೆಗಳು ಭಾರತ್ ಬಂದ್ ನಡೆಸುತ್ತಿವೆ. ಬಿಹಾರದಲ್ಲಿ ಚುನಾವಣೆ ಮುಂದಿಟ್ಟುಕೊಂಡು ರೈತದ ಸಮಸ್ಯೆ ರಾಜಕೀಯ ವಿಷಯವಾಗಿ ಪರಿಣಮಿಸಿದ್ದು, ಬಿಜೆಪಿ ಮಿತ್ರಪಕ್ಷಗಳು ಕೂಡಾ ಅನಿವಾರ್ಯವಾಗಿ ಕಣಕ್ಕಿಳಿದಿವೆ.

ಈ ನಡುವೆ ಬಿಹಾರದಲ್ಲಿ ಎನ್ಡಿಎ ಮಿತ್ರಪಕ್ಷ ರಾಷ್ಟ್ರೀಯ ಜನತಾ ದಳ(ಆರ್ ಜೆ ಡಿ) ಮುಖಂಡ ತೇಜಸ್ವಿ ಯಾದವ್ ಅವರು ಟ್ರ್ಯಾಕ್ಟರ್ ಮೇಲೆ ಕುಳಿತು ರಸ್ತೆ ತಡೆ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿ, ರೈತರ ಆದಾಯವನ್ನು 2022ರೊಳಗೆ ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಈಗ ಮಂಡನೆಯಾಗಿರುವ ವಿಧೇಯಕದಿಂದ ಕೈಗೆ ಬರುತ್ತಿರುವ ಆದಾಯವೂ ಖೋತಾ ಆಗಲಿದೆ ಎಂದಿದ್ದಾರೆ.

Bharat Bandh: Govt promised double income by 2022, but making farmers poorer: Tejashwi Yadav

ಹರ್ಯಾಣ, ಪಂಜಾಬ್, ಬಿಹಾರ, ಉತ್ತರಪ್ರದೇಶದ ಕೆಲವೆಡೆ ಬಂದ್ ಬಿಸಿ ಜೋರಾಗಿ ತಟ್ಟಿದೆ. ಎನ್ಡಿಎ ಮಿತ್ರಪಕ್ಷ ಶಿರೋಮಣಿ ಅಕಾಲಿ ದಳ ಪಂಜಾಬ್ ನಲ್ಲಿ ರೈತರ ಪರ ನಿಂತಿದ್ದರೆ. ಕಾಂಗ್ರೆಸ್ ಸೇರಿದಂತೆ ವಿವಿಧ ವಿಪಕ್ಷಗಳು ರೈತ ಸಂಘಟನೆಗಳ ಪ್ರತಿಭಟನೆಗೆ ಬೆಂಬಲ ನೀಡಿವೆ.

ಭಾರತೀಯ ಕಿಸಾನ್ ಯೂನಿಯನ್ (BKU), ಅಖಿಲ ಭಾರತ ರೈತರ ಒಕ್ಕೂಟ (AIFU), ಅಖಿಲ ಭಾರತ ಕಿಸಾನ್ ಸಂಘರ್ಷಣ ಸಮನ್ವಯ ಸಮಿತಿ (AIKSCC), ಅಖಿಲ ಭಾರತ ಕಿಸಾನ್ ಮಹಾಸಂಘ್(AIKM), ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್ ,ಹರ್ಯಾಣದ ವಿವಿಧ ರೈತ ಸಂಘಟನೆಗಳು ಬೆಂಬಲಿಸಿವೆ. ಕರ್ನಾಟಕದಲ್ಲಿ ರೈತ ಸಂಘಟನೆಗಳು ಬಂದ್ ಬದಲಿಗೆ ರಸ್ತೆ ತಡೆ ನಡೆಸಿವೆ.

ಅನ್ನದಾತರಲ್ಲಿ ಫಂಡ್ ದಾತರನ್ನಾಗಿಸಿಕೊಂಡು ರೈತವಿರೋಧಿ ನಿಲುವು ತಳೆದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸುತ್ತೇವೆ. ಕಾರ್ಪೊರೇಟ್ ಕೈಗೆ ಕೃಷಿ ವಲಯ ನೀಡುವುದಕ್ಕೆ ಬಿಡುವುದಿಲ್ಲ ಎಂದಿದ್ದಾರೆ.

Recommended Video

      ಭಾರತದ ಪವರ್ ಗೆ ಶಾಕ್ ಆದ China | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+