ಬಿಹಾರ ಚುನಾವಣೆ: ಕೊರೊನಾ ವೈರಸ್ನಿಂದ ಬಂಡಾಯ ಅಭ್ಯರ್ಥಿ ಸಾವು
ಪಟ್ನಾ, ನವೆಂಬರ್ 7: ಬಿಹಾರದಲ್ಲಿ ವಿಧಾನಸಭೆಯ ಮೂರನೇ ಹಾಗೂ ಕೊನೆಯ ಹಂತದ ಚುನಾವಣೆ ಪ್ರಗತಿಯಲ್ಲಿರುವಾಗಲೇ ಅಭ್ಯರ್ಥಿಯೊಬ್ಬರು ಕೋವಿಡ್ನಿಂದ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.
ಮಧುಬನಿಯ ಬೆನಿಪಟ್ಟಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿದ್ದ ನೀರಜ್ ಕುಮಾರ್ ಝಾ ಮೃತ ದುರ್ದೈವಿ. ಅವರು ಕೊರೊನಾ ವೈರಸ್ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನೀರಜ್ ಝಾ ಅವರು, ಕಳೆದ ಹತ್ತು ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದರಿಂದ ಪಟ್ನಾದಲ್ಲಿರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.
ಜೆಡಿಯು ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದ ನೀರಜ್ ಝಾ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿತೀಶ್ ಕುಮಾರ್ ಪಕ್ಷದಿಂದ ಟಿಕೆಟ್ ಸಿಕ್ಕಿರಲಿಲ್ಲ. ಇದರಿಂದ ಕೋಪಗೊಂಡಿದ್ದ ಅವರು ಪಕ್ಷದ ವಿರುದ್ಧ ಬಂಡಾಯವೆದ್ದು, ಸ್ವತಂತ್ರವಾಗಿ ಸ್ಪರ್ಧಿಸಿದ್ದರು.

ನೀರಜ್ ಝಾ ಅವರು ಕೋವಿಡ್ನಿಂದ ಪಾತ್ರವಲ್ಲದೆ, ಸುದೀರ್ಘ ಸಮಯದಿಂದ ಮಧುಮೇಹದಿಂದ ಕೂಡ ಬಳಲುತ್ತಿದ್ದರು. ಅವರಿಗೆ ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿತ್ತು ಎಂದು ಏಮ್ಸ್ನ ಕೊರೊನಾ ನೋಡಲ್ ಅಧಿಕಾರಿ ಡಾ. ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಬೆನಿಪಟ್ಟಿ ಕ್ಷೇತ್ರದಲ್ಲಿ ಜನಪ್ರಿಯ ಜೆಡಿಯು ನಾಯಕರಾಗಿದ್ದ ಅವರು ಪಕ್ಷದ ಮೇಲಿನ ಮುನಿಸಿನಿಂದ ಸ್ವತಂತ್ರವಾಗಿ ಕಣಕ್ಕಿಳಿದಿದ್ದರು. ಈ ಕ್ಷೇತ್ರದಲ್ಲಿ ಒಟ್ಟು 15 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ನಿತೀಶ್ ಸರ್ಕಾರದಲ್ಲಿ ಸಚಿವರಾಗಿರುವ ಬಿಜೆಪಿ ಅಭ್ಯರ್ಥಿ ವಿನೋದ್ ನಾರಾಯಣ್ ಝಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ಭಾವನಾ ಝಾ ಮುಖಾಮುಖಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಭಾವನಾ ಝಾ, ವಿನೋದ್ ನಾರಾಯಣ್ ಅವರನ್ನು ಸೋಲಿಸಿದ್ದರು. ಆದರೆ ಪರಿಷತ್ಗೆ ಆಯ್ಕೆಯಾಗಿದ್ದ ವಿನೋದ್ ಸಚಿವ ಸ್ಥಾನ ಪಡೆದಿದ್ದರು.
ಈ ಕ್ಷೇತ್ರದಲ್ಲಿ ಜೆಡಿಯು ಟಿಕೆಟ್ ಸಿಗಲಿದೆ ಎಂದು ನಿರೀಕ್ಷಿಸಿದ್ದ ನೀರಜ್ ಅವರಿಗೆ ನಿರಾಶೆಯಾಗಿತ್ತು. ಜೆಡಿಯು ಈ ಕ್ಷೇತ್ರವನ್ನು ಬಿಜೆಪಿ ಕೋಟಾಕ್ಕೆ ಬಿಟ್ಟುಕೊಟ್ಟಿತ್ತು. ಇದರಿಂದ ಕೋಪಗೊಂಡಿದ್ದ ನೀರಜ್ ಬಂಡಾಯವೆದ್ದಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications