ಎಲ್ಜೆಪಿಗೂ ಬಿಜೆಪಿಗೂ ಸಂಬಂಧವಿಲ್ಲ: ಜಾವಡೇಕರ್
ಪಟ್ನಾ, ಅಕ್ಟೋಬರ್ 17: ಎಲ್ಜೆಪಿ ಜತೆಗೆ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಮಿತ್ರಪಕ್ಷಗಳಾದ ಜೆಡಿಯು, ಎಚ್ಎಎಂ-ಎಸ್ ಮತ್ತು ವಿಐಪಿಗಳು ಜತೆಗೂಡಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮುಕ್ಕಾಲು ಭಾಗದ ಸೀಟುಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಪ್ಪುದಾರಿಗೆ ಎಳೆಯುವಂತಹ ಹೇಳಿಕೆಗಳನ್ನು ನೀಡುವ ಮೂಲಕ ಚಿರಾಗ್ ಪಾಸ್ವಾನ್ ಕೇವಲ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನ ಯಾವುದೇ ಫಲ ನೀಡುವುದಿಲ್ಲ. ನಮಗೆ ಬಿಹಾರದಲ್ಲಿ ಯಾವುದೇ 'ಬಿ ಟೀಮ್' ಇಲ್ಲ ಎಂದು ಜಾವಡೇಕರ್ ಹೇಳಿದ್ದಾರೆ.
ಎಲ್ಜೆಪಿ ಮತ್ತು ಬಿಜೆಪಿ ನಡುವಿನ ಹೋರಾಟ ಸ್ನೇಹಪೂರ್ವಕವಾಗಿದೆ. ಬಿಜೆಪಿ ಗೆದ್ದರೆ ನಾವು ಅದನ್ನು ಶ್ಲಾಘಿಸುತ್ತೇವೆ. ಒಂದು ವೇಳೆ ನಾವು ಗೆದ್ದರೆ ಬಿಜೆಪಿಗೆ ಬೆಂಬಲ ನೀಡುತ್ತೇವೆ. ಬಿಹಾರದಲ್ಲಿ ಬಿಜೆಪಿ-ಎಲ್ಜೆಪಿ ಸರ್ಕಾರವನ್ನು ನೋಡಲು ಬಯಸುತ್ತಿದ್ದೇವೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದರು.

ತಾವು ಪ್ರಧಾನಿ ನರೇಂದ್ರ ಮೋದಿ ಅವರ ಹನುಮಂತ. ಮೋದಿ ಅವರು ತಮ್ಮ ಹೃದಯದಲ್ಲಿ ನೆಲೆಸಿದ್ದಾರೆ. ಬೇಕಿದ್ದರೆ ಎದೆ ಸೀಳಿ ಅವರನ್ನು ತೋರಿಸುತ್ತೇನೆ. ನಾವು ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ಮೋದಿ ಅವರ ಫೋಟೊಗಳನ್ನು ಬಳಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಪಾಸ್ವಾನ್ ಹೇಳಿದ್ದರು.
ಆದರೆ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿಯಿಂದ ಅಂತರ ಕಾಪಾಡಿಕೊಳ್ಳಲು ಬಿಜೆಪಿ ನಿರಂತರವಾಗಿ ಪ್ರಯತ್ನಿಸುತ್ತಿದೆ. ಜನರಲ್ಲಿ ಗೊಂದಲ ಮೂಡಿಸುವ ಮೂಲಕ ಬಿಜೆಪಿಯ ಮತಗಳನ್ನು ತಮ್ಮತ್ತ ಸೆಳೆದುಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ. ಎಲ್ಜೆಪಿಗೂ ಬಿಜೆಪಿಗೂ ಯಾವುದೇ ನಂಟು ಇಲ್ಲ ಎಂದು ಬಿಜೆಪಿ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications