ಬಿಹಾರ ಚುನಾವಣೆ: ಎನ್ಡಿಎ ಮೈತ್ರಿಕೂಟ ಸೇರಲು ಮುಂದಾದ ಜಿತನ್ ರಾಮ್ ಮಾಂಝಿ
ಪಟ್ನಾ, ಸೆಪ್ಟೆಂಬರ್ 2: ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ತಮ್ಮ ಹಿಂದೂಸ್ತಾನಿ ಅವಾಮ್ ಮೋರ್ಚಾ ಪಕ್ಷವನ್ನು (ಎಚ್ಎಎಂ) ಆಡಳಿತಾರೂಢ ಜನತಾ ದಳ ಸಂಯುಕ್ತ (ಜೆಡಿಯು) ಜತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ಗುರುವಾರ ಅವರು ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಹಾರದಲ್ಲಿ ಆರ್ಜೆಡಿ ನೇತೃತ್ವದ ಮಹಾಮೈತ್ರಿಕೂಟದಿಂದ ಹೊರಬಂದ ಒಂದು ತಿಂಗಳ ಬಳಿಕ ಎಚ್ಎಎಂ ಈ ಮೈತ್ರಿ ಮಾಡಿಕೊಳ್ಳಲಿದೆ.
ಜೆಡಿಯು ಜತೆಗಿನ ಎಚ್ಎಎಂ ಮೈತ್ರಿಯೊಂದಿಗೆ ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಎನ್ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡ ನಾಲ್ಕನೆಯ ರಾಜಕೀಯ ಪಕ್ಷ ಎನಿಸಿಕೊಂಡಿದೆ.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದಿಂದ ಎಚ್ಎಎಂ ಸೀಟು ಹಂಚಿಕೆಯಲ್ಲಿ ಪಾಲು ಪಡೆಯಲಿದೆ. ಜಿತನ್ ರಾಮ್ ಮಾಂಝಿ ಅವರ ಎಚ್ಎಎಂ, ನಿತೀಶ್ ಕುಮಾರ್ ಅವರ ಜೆಡಿಯು ಜತೆಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದರಿಂದ ಎನ್ಡಿಎ ಒಕ್ಕೂಟದಲ್ಲಿ ಜೆಡಿಯು ಕೋಟಾದಡಿ 9 ಸೀಟುಗಳಲ್ಲಿ ಸ್ಪರ್ಧಿಸುವ ಅವಕಾಶ ಪಡೆದುಕೊಳ್ಳಲಿದೆ ಎನ್ನಲಾಗಿದೆ.

ಜೆಡಿಯು ಜತೆಗಿನ ಮಾಂಝಿ ಅವರ ಮೈತ್ರಿಯನ್ನು ಒಂದು ರೀತಿಯ 'ಘರ್ ವಾಪಸಿ' ಎಂದು ಕರೆಯಲಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಯು ಸೋಲಿನ ಬಳಿಕ ಮುಖ್ಯಮಂತ್ರಿ ಹುದ್ದೆಗೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ, ಮಾಂಝಿ ಅವರನ್ನು ಸಿಎಂ ಸ್ಥಾನದಲ್ಲಿ ಕೂರಿಸಿದ್ದರು.
'ಹಿಂದೂಸ್ತಾನ್ ಅವಾಮ್ ಮೋರ್ಚಾವು ಎನ್ಡಿಎ ಸೇರಿಕೊಳ್ಳುತ್ತಿರುವ ಸಂಬಂಧ ಜಿತನ್ ರಾಮ್ ಮಾಂಝಿ ಅವರು ಗುರುವಾರ ಅಧಿಕೃತ ಪ್ರಕಟಣೆ ಮಾಡಲಿದ್ದಾರೆ. ನಮ್ಮ ಪಕ್ಷವು ಜೆಡಿಯು ಜತೆಗೆ ವಿಲೀನವಾಗುತ್ತಿಲ್ಲ. ಬದಲಾಗಿ ಪ್ರತ್ಯೇಕ ಪಕ್ಷವಾಗಿಯೇ ಎನ್ಡಿಎಯನ್ನು ಸೇರಿಕೊಳ್ಳಲಿದೆ' ಎಂದು ವಕ್ತಾರ ದಾನಿಶ್ ರಿಜ್ವಾನ್ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications