ಬಿಹಾರದಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಮುಜಾಫರ್ಪುರ, ಜನವರಿ 10: ಸ್ಥಳೀಯ ಬಿಜೆಪಿ ಮುಖಂಡರೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಔಷಧಿ ಅಂಗಡಿಯೊಂದರಲ್ಲಿ ಕುಳಿತದ್ದ ಬೈಜು ಪ್ರಸಾದ್ ಗುಪ್ತಾ ಎಂಬ ಎಂಬುವವರ ಬಳಿ ಔಷಧಿ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಯೊಬ್ಬ ನಂತರ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.

Bihar: BJP leader shot dead by unknown assailants

ತಕ್ಷಣವೇ ಬೈಜು ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ತೆರಳುವ ಮೊದಲೇ ಅಸುನೀಗಿದ್ದರು.

ಸಣ್ಣ ಮೆಡಿಕಲ್ ಶಾಪ್ ವೊಂದನ್ನು ಇಟ್ಟುಕೊಂಡಿದ್ದ ಬೈಜು, ಮನೆಮದ್ದುಗಳನ್ನು ತಯಾರಿಸಿ ಜನರಿಗೆ ನೀಡುತ್ತಿದ್ದರು. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.ಜನವರಿ 08 ರಂದು ಗುಜರಾತಿನ ಮಾಜಿ ಶಾಸಕ ಜಯಂತಿಲಾಲ್ ಭಾನುಶಾಲಿ ಎಂಬುವವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ನಡೆದಿತ್ತು.

ಘಟನೆ ನಡೆಯುವ ಸಂದರ್ಭದಲ್ಲಿ ಜಯಂತಿಲಾಲ್ ಅವರು ಭುಜ್ ನಿಂದ ಅಹ್ಮದಾಬಾದಿಗೆ ರೈಲಿನ ಮೂಲಕ ತೆರಳುತ್ತಿದ್ದರು.

ಗುಜರಾತಿನ ಅಬಾದಸಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಜಯಂತಿಲಾಲ್ ಅವರ ಮೇಲೆ ಕಳೆದ ವರ್ಷ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+