ಎಲ್ ಜೆಪಿ ಜೆಡಿಯು ಮೈತ್ರಿ, ಚಿರಾಗ್ ನಿರ್ಣಯವೇ ಅಂತಿಮ!
ಪಾಟ್ನ, ಸೆ. 8: ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೆ ಭರದಿಂದ ಸಿದ್ಧತೆ ಸಾಗಿದೆ. ಈ ನಡುವೆ ಮೈತ್ರಿಕೂಟಗಳ ನಡುವಿನ ತಿಕ್ಕಾಟ, ಯಾವ ನೇತೃತ್ವದಲ್ಲಿ ಚುನಾವಣೆ ನಡೆಸಬೇಕು ಎಂಬುದು ಪ್ರತಿಷ್ಠೆ ಹಾಗೂ ಮುಂದಿನ ನಾಯಕತ್ವಕ್ಕೆ ನಿರ್ಣಾಯಕ ಪಾತ್ರವಾಗುತ್ತಿದೆ.
Recommended Video
ಮೈತ್ರಿಕೂಟಗಳ ನಡುವಿನ ಸೀಟು ಹಂಚಿಕೆ, ಚುನಾವಣೆ ಪ್ರಚಾರ ಆರಂಭದ ನಡುವೆ ನಾಯಕತ್ವ ಪ್ರಶ್ನೆ ಮೊದಲಿಗೆ ಲೋಕ ಜನಶಕ್ತಿ(LJP)ಪಕ್ಷದಲ್ಲಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವರ್ಚುಯಲ್ ಸಮಾವೇಶ ನಡೆಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಆದರೆ, ಮೊದಲ ಸಮಾವೇಶ ನೀರಸವೆನಿಸಿದ್ದು, ಈ ಬಾರಿಯ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಬೇಕೆ? ಬೇಡವೆ? ಎಂಬುದರ ಬಗ್ಗೆ ಎಲ್ ಜೆಪಿ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಎಲ್ ಜೆಪಿ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ನೀಡಿದೆ. ಚಿರಾಗ್ ಹಾಗೂ ನಿತೀಶ್ ನಡುವಿನ ಮೌನ ಯುದ್ಧದ ನಡುವೆ ಮುಂದಿನ ನಾಯಕತ್ವ ನಿರ್ಧಾರವಾಗಲಿದೆ.

ಬಿಜೆಪಿ ಪಾತ್ರವೇನು?
ಜೆಡಿಯು ವಿರುದ್ಧ ಎಲ್ ಜೆಪಿ ಅಭ್ಯರ್ಥಿ ಕಣಕ್ಕಿಳಿದರೆ ಮೈತ್ರಿ ಹಾಗೂ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂಬುದು ಬಿಜೆಪಿಗೂ ಗೊತ್ತಿದೆ. ಜೆಡಿಯು ಜೊತೆ ಎಲ್ ಜೆಪಿ ಗುದ್ದಾಡಿದರೂ ಬಿಜೆಪಿ ಜೊತೆ ಎಲ್ ಜೆಪಿ ಚೆನ್ನಾಗಿದೆ. ಪ್ರಧಾನಿ ನರೇಂದ್ರ ಮೋದಿ ಹೊಗಳುತ್ತಾ ಸಾಗಿರುವ ಎಲ್ ಜೆಪಿಗೆ ರಾಮ್ ವಿಲಾಸ್ ಪಾಸ್ವಾನ್ ಅವರು ಕೇಂದ್ರ ಸಚಿವರಾಗಿ ಉಳಿದುಕೊಳ್ಳಬೇಕಿದೆ. ಚುನಾವಣೆ ಹತ್ತಿರ ಇರುವುದರಿಂದ ಮೈತ್ರಿ ಉಳಿಸಿಕೊಳ್ಳುವುದು ಮೂರು ಪಕ್ಷಗಳಿಗೂ ಬೇಕಿದೆ. ಆದರೆ, ಚರ್ಚಿಸಲು ಯಾರು ಸಿದ್ಧರಾಗಿಲ್ಲ.

ಎಲ್ ಜೆಪಿ ಸಂಸದೀಯ ಮಂಡಳಿ ಸಭೆ
ಬಿಹಾರ ಚುನಾವಣೆಗಾಗಿ 143 ಅಭ್ಯರ್ಥಿಗಳ ಪಟ್ಟಿ ಸಿದ್ಧವಿದ್ದು, ಸಂಸದೀಯ ಮಂಡಳಿ ಪರಿಶೀಲನೆ ನಂತರ ಪ್ರಕಟಿಸುವುದು ಹಾಗೂ ಚಿರಾಗ್ ಪಾಸ್ವಾನ್ ಅವರಿಗೆ ಮುಂದಿನ ನಾಯಕತ್ವದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡುವುದು ಎಂಬ ಎರಡು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಶಾಸಕ ಹಾಗೂ ಮಂಡಳಿಯ ಮುಖ್ಯಸ್ಥ ರಾಜು ತಿವಾರಿ ಹೇಳಿದ್ದಾರೆ.

ಚಿರಾಗ್ ಪಾಸ್ವಾನ್ ಕಾಳಿದಾಸನಾಗಿದ್ದು
ಜೆಡಿಯು ಸಂಸದ ರಾಜೀವ್ ರಂಜನ್ ಸಿಂಗ್ ಅವರು ಈ ಹಿಂದೆ ಚಿರಾಗ್ ಪಾಸ್ವಾನ್ ರನ್ನು ಸಂಸ್ಕೃತ ಕವಿ ಕಾಳಿದಾಸನ ಪೂರ್ವ ಜೀವಿತಕ್ಕೆ ಹೋಲಿಸಿದ್ದರು. ತಾನು ಕುಳಿತ ಮರ ಕೊಂಬೆಯನ್ನು ಕತ್ತರಿಸುತ್ತಿರುವ ಕಾಳಿದಾಸನಂತೆ ಚಿರಾಗ್ ಎಂದು ಹೋಲಿಕೆ ನೀಡಿದ್ದನ್ನು ಎಲ್ ಜೆಪಿ ನಾಯಕ ಸಂಜಯ್ ಸಿಂಗ್ ಅವರು ಪ್ರಸ್ತಾಪಿಸಿ, ಜೆಡಿಯು ಜೊತೆ ಸಖ್ಯ ಬೇಡ ಎಂದು ಆಗ್ರಹಿಸಿದರು.
''ಚಿರಾಗ್ ಅವರು ಬಿಹಾರದಲ್ಲಿನ ಸಮಸ್ಯೆಗಳ ಬಗ್ಗೆ ಮಾತನಾಡಿದರೆ ರೆಬೆಲ್ ಎಂದು ಲೆಬೆಲ್ ಹಾಕಲಾಯಿತು. ಬಿಹಾರದ ಅಭಿವೃದ್ಧಿಗಾಗಿ ಎಲ್ ಜೆಪಿ ಯೋಚಿಸುವುದು ತಪ್ಪೇ, ಜೆಡಿಯು ಅಭ್ಯರ್ಥಿ ಇರುವ ಕಡೆ ಎಲ್ ಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ'' ಎಂದು ಸಂಜಯ್ ಸಿಂಗ್ ಬೇಡಿಕೆ ಮುಂದಿಟ್ಟರು.

ಏಕಾಂಗಿ ಹೋರಾಟ ಸಾಧ್ಯವೆ?
ಜೆಡಿಯು ಸಖ್ಯ ತೊರೆದು ಎಲ್ ಜೆಪಿ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಬಗ್ಗೆ ಕೇಂದ್ರ ಸಂಸದೀಯ ಮಂಡಳಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಹಾಲಿ, ಮಾಜಿ ಸಂಸದರ ಜೊತೆ ಕೂಡಾ ಚಿರಾಗ್ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಗಾಗಿ ನಾವು ಜೆಡಿಯು ಜೊತೆ ಅನಿವಾರ್ಯವಾಗಿ ಕೈ ಜೋಡಿಸಿದ್ದೇ ವಿನಾ ರಾಜ್ಯಮಟ್ಟದಲ್ಲಿ ಜೆಡಿಯು ಜೊತೆ ಮೈತ್ರಿ ಅಗತ್ಯವಿಲ್ಲ, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಕಾಲ ಬಂದಿದೆ ಎಂದು ಹಿರಿಯ ಎಲ್ ಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಎಲ್ ಜೆಪಿ, ಬಿಜೆಪಿ ಹಾಗೂ ಜೆಡಿಯು ನಡುವಿನ ಸಭೆ ಇನ್ನೂ ನಡೆದಿಲ್ಲ, ಚಿರಾಗ್ ನಿರ್ಣಯದ ಬಗ್ಗೆ ಎಲ್ಲರಿಗೂ ಕುತೂಹಲವಿದ್ದೇ ಇದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications