ರಾಬ್ರಿ ದೇವಿ ಇಫ್ತಾರ್ ಕೂಟದಲ್ಲಿ ಸಿಎಂ ನಿತೀಶ್ ಕುಮಾರ್; ಬಿಜೆಪಿಗೆ ಪರೋಕ್ಷ ಸಂದೇಶ!
ಪಾಟ್ನಾ, ಏಪ್ರಿಲ್ 23: ಬಿಹಾರದಲ್ಲಿ ಜೆಡಿಯು ಮತ್ತು ಭಾರತೀಯ ಜನತಾ ಪಕ್ಷ(ಬಿಜೆಪಿ) ನಡುವಿನ ಸಂಬಂಧ ಹಳಸಿದಂತೆ ತೋರುತ್ತಿದೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದಲ್ಲಿ ಆಯೋಜಿಸಿದ ಇಫ್ತಿಯಾರ್ ಕೂಟದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಣಿಸಿಕೊಂಡಿದ್ದಾರೆ.
ಡೊರಾಂಡಾ ಖಜಾನೆ ಮೇವು ಹಗರಣ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ಗೆ ಜಾಮೀನು ಸಿಕ್ಕ ನಂತರದಲ್ಲಿ ಅವರ ಪತ್ನಿ ಹಾಗೂ ಮಾಜಿ ಸಿಎಂ ರಾಬ್ರಿ ದೇವಿಯವರ ಅಧಿಕೃತ ನಿವಾಸದಲ್ಲಿ ಮೊದಲ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಈ ಔತಣಕೂಟದಲ್ಲಿ ಸಿಎಂ ನಿತೀಶ್ ಕುಮಾರ್ ಹಾಜರಾಗಿರುವುದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ನಾಂದಿ ಹಾಡಿದಂತೆ ತೋರುತ್ತಿದೆ.
ಬಿಹಾರದಲ್ಲಿ ಸಿಪಾಯಿ ದಂಗೆಯ ವೀರ ವೀರ್ ಕುನ್ವರ್ ಸಿಂಗ್ ಜಯಂತಿಯ ಅಂಗವಾಗಿ ಬಿಜೆಪಿಯು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೆ ಒಂದು ದಿನ ಬಾಕಿ ಇರುವಂತೆ ಬಿಜೆಪಿ ಜೊತೆಗೆ ಸೇರಿಕೊಂಡು ಸರ್ಕಾರ ರಚಿಸಿರುವ ನಿತೀಶ್ ಕುಮಾರ್ ನಡೆಯು ಸಾಕಷ್ಟು ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.

ಬಿಜೆಪಿ ಮತ್ತು ಜೆಡಿಯು ಮಧ್ಯೆ ವೈಮನಸ್ಸು:
ಬಿಹಾರದಲ್ಲಿ ನಡೆಯುತ್ತಿರುವ ಇತ್ತೀಚಿನ ರಾಜಕೀಯ ಚಟುವಟಿಕೆಗಳನ್ನು ಗಮನಿಸಿದಾಗ ಬಿಜೆಪಿ ಹಾಗೂ ಜೆಡಿಯು ಮಧ್ಯೆ ಎಲ್ಲವೂ ನೆಟ್ಟಗಿಲ್ಲ ಎನ್ನುವ ಅನುಮಾನಗಳು ಹುಟ್ಟಿಕೊಳ್ಳದೇ ಇರಲಾಗದು. ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ನಾಯಕರು ಮೇಲಿಂದ ಮೇಲೆ ಅಸಮಾಧಾನ ಹೊರ ಹಾರುತ್ತಿದ್ದಾರೆ. ಸರ್ಕಾರದ ನಡೆಗೆ ಮಿತ್ರಪಕ್ಷದವರೇ ಅಡ್ಡಗಾಲು ಹಾಕುತ್ತಿರುವುದು ಸ್ವತಃ ಮುಖ್ಯಮಂತ್ರಿಯನ್ನೂ ಕೆರಳುವಂತೆ ಮಾಡಿದೆ. ಈ ನಡುವೆ ಬಿಜೆಪಿಗೆ ಎಚ್ಚರಿಕೆ ಸಂದೇಶ ರವಾನೆ ಆದಂತೆ ಗೋಚರಿಸುತ್ತಿದೆ.

ಬಿಜೆಪಿಗೆ ಪರೋಕ್ಷ ಸಂದೇಶ ಕೊಟ್ಟರೇ ನಿತೀಶ್ ಕುಮಾರ್?:
ರಾಜ್ಯದಲ್ಲಿ ಬಿಜೆಪಿ ನಾಯಕರ ಟೀಕೆಗಳಿಂದ ರೋಸಿ ಹೋಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಂದ್ರದ ನಾಯಕರಿಗೆ ಪರೋಕ್ಷ ಎಚ್ಚರಿಕೆ ನೀಡಿದಂತೆ ಕಾಣುತ್ತಿದೆ. ಅಮಿತ್ ಶಾ ರಾಜ್ಯ ಭೇಟಿಗೂ ಮುನ್ನ ದಿನವೇ ಆರ್ ಜೆಡಿ ಕುಟುಂಬದ ಇಫ್ತಾರ್ ನಲ್ಲಿ ಭಾಗವಹಿಸುವ ಮೂಲಕ ತಮ್ಮ ಮುಂದಿನ ದಾರಿ ಮುಕ್ತವಾಗಿದೆ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
Recommended Video
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications