Just in:ಉಪರಾಷ್ಟ್ರಪತಿ ಆಗುವ ಆಸೆ; ಬಿಜೆಪಿ ಹೇಳಿಕೆ ಜೋಕ್ ಎಂದ ನಿತೀಶ್
ಪಾಟ್ನಾ, ಆಗಸ್ಟ್ 11: ನಿತೀಶ್ ಕುಮಾರ್ ಅವರನ್ನು ಉಪರಾಷ್ಟ್ರಪತಿ ಮಾಡದ ಕಾರಣ ಬಿಜೆಪಿ ಮತ್ತು ಜೆಡಿ(ಯು) ನಡುವಿನ ಜಟಾಪಟಿಗೆ ಕಾರಣ ಎಂಬ ಬಿಜೆಪಿ ನಾಯಕ ಸುಶೀಲ್ ಮೋದಿ ಅವರ ಹೇಳಿಕೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ತಳ್ಳಿಹಾಕಿದ್ದಾರೆ.
ಈ ಹೇಳಿಕೆ ಸಂಪೂರ್ಣ ಬೋಗಸ್ ಎಂದು ಬಣ್ಣಿಸಿದ ನಿತೀಶ್ ಕುಮಾರ್, "ಇದು ತಮಾಷೆಯೇ? ನನಗೆ ಅಂತಹ ಆಸೆ ಇಲ್ಲ. ನಾವು ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿದ್ದೇವೆ. ನಾನು ಉಪರಾಷ್ಟ್ರಪತಿಯಾಗಲು ಬಯಸುವುದು ತಮಾಷೆಯಾಗಿದೆ" ಎಂದು ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ಹೇಳಿದ್ದಾರೆ.
ನಿತೀಶ್ ಕುಮಾರ್ ಅವರನ್ನು ಉಪರಾಷ್ಟ್ರಪತಿ ಮಾಡಬೇಕೆಂದು ಜನತಾ ದಳ (ಯುನೈಟೆಡ್) ನಾಯಕರು ತಮ್ಮ ಬಳಿಗೆ ಬಂದಿದ್ದರು ಎಂದು ಸುಶೀಲ್ ಮೋದಿ ನಿನ್ನೆ ಹೇಳಿದರು. ನಿತೀಶ್ ಕುಮಾರ್ ದೆಹಲಿ ರಾಜಕಾರಣಕ್ಕೆ ಹೋದರೆ ಸುಶೀಲ್ ಮೋದಿ ಬಿಹಾರ ಮುಖ್ಯಮಂತ್ರಿಯಾಗಬಹುದು ಎಂಬ ಯೋಜನೆಯೊಂದಿಗೆ ಬಂದಿದ್ದರು ಎಂದಿದ್ದರು.

'ನಿತೀಶ್ ಕುಮಾರ್ ಅವರನ್ನು ಉಪರಾಷ್ಟ್ರಪತಿ ಮಾಡಿ ಮತ್ತು ಬಿಹಾರದಲ್ಲಿ ನೀವೇ ಆಡಳಿತ ನಡೆಸಬೇಕು' ಎಂದು ಕೆಲವು ಜೆಡಿಯು ಜನರು ಹೇಳಲು ಬಂದಿದ್ದರು ಎಂದು ಮೋದಿ ಸುದ್ದಿಗಾರರಿಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, 'ನಾವು ಎರಡು ಚುನಾವಣೆ ಮುಗಿಯುವುದನ್ನು ಕಾಯುತ್ತಿದ್ದೆವು. ಬಳಿಕ ನಾವು ಸಭೆ ನಡೆಸಿದ್ದೇವೆ. ಅವರು ನನ್ನ ಬಗ್ಗೆ ಜಾಸ್ತಿ ಮಾತನಾಡಲಿ, ಆಗ ಅವರಿಗೆ ಸ್ಥಾನ ಸಿಗಬಹುದು' ಎಂದು ಹೇಳಿದ್ದಾರೆ.
ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಲಾಲನ್ ಸಿಂಗ್ ಕೂಡ ನಿನ್ನೆ ಮೋದಿ ಆರೋಪವನ್ನು ತಳ್ಳಿ ಹಾಕಿದ್ದರು.
Recommended Video
ಎನ್ಡಿಎ ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಿನದ ನಂತರ ನಿತೀಶ್ ಕುಮಾರ್ ಬುಧವಾರ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications