ಅತ್ಯಾಚಾರ ಯತ್ನ: ವ್ಯಕ್ತಿಗೆ ಇಡೀ ಹಳ್ಳಿಯ ಮಹಿಳೆಯರ ಬಟ್ಟೆ ತೊಳೆಯುವ ಶಿಕ್ಷೆ
ಪಾಟ್ನಾ, ಸೆಪ್ಟೆಂಬರ್ 24: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಬಿಹಾರ ನ್ಯಾಯಾಲಯವು ಜಾಮೀನು ನೀಡಿದ್ದು, ಮಾಡಿದ ಕೃತ್ಯಕ್ಕೆ ಶಿಕ್ಷೆಯನ್ನೂ ಕೂಡ ವಿಧಿಸಿದೆ.
ಆರೋಪಿ 6 ತಿಂಗಳುಗಳ ಕಾಲ ಇಡೀ ಹಳ್ಳಿಯ ಮಹಿಳೆಯರ ಬಟ್ಟೆಯನ್ನು ತೊಳೆಯುವ ಶಿಕ್ಷೆಯನ್ನು ನೀಡಲಾಗಿದೆ. ಕೇವಲ ಬಟ್ಟೆಯನ್ನು ತೊಳೆಯುವುದಷ್ಟೇ ಅಲ್ಲದೆ ಬಟ್ಟೆಗೆ ಇಸ್ರಿಯನ್ನು ಕೂಡ ಹಾಕುವಂತೆ ನ್ಯಾಯಾಲಯ ಹೇಳಿದೆ.
20 ವರ್ಷದ ಲಾಲನ್ ಕುಮಾರ್ ಈ ಷರತ್ತಿನನ್ವಯ ಜಾಮೀನು ಪಡೆದ ಆರೋಪಿ. ಆರು ತಿಂಗಳುಗಳ ಕಾಲ ಬಗ್ಗೆ ಒಗೆಯಬೇಕು, ಅದಕ್ಕೆ ಬೇಕಾದ ಡಿಟರ್ಜೆಂಟ್ ಹಾಗೂ ಇತರೆ ವಸ್ತುಗಳನ್ನು ಸ್ವಯಂ ಖರೀದಿಸಬೇಕು ಎಂದು ಷರತ್ತಿನಲ್ಲಿ ಹೇಳಲಾಗಿದೆ. ಗ್ರಾಮದಲ್ಲಿರುವ ಮಹಿಳೆಯರ ಸಂಖ್ಯೆ ಸುಮಾರು 2 ಸಾವಿರ.

ನಿರ್ಭಯಾ ಪ್ರಕರಣದ ಬಳಿಕ ದೇಶದಲ್ಲಿ ಅತ್ಯಾಚಾರ ಪ್ರಕರಣ ಸಂಬಂಧಿತ ಕಾಯ್ದೆ ಬಿಗಿಗೊಂಡಿವೆ. ಆದರೆ ಕೃತ್ಯಗಳು ಕಡಿಮೆಯಾಗಿಲ್ಲ. 2020ರಲ್ಲಿ 28 ಸಾವಿರಕ್ಕೂ ಅಧಿಕ ಪ್ರರಣಗಳು ದಾಖಲಾಗಿವೆ. ಪೊಲೀಸರು ಇವುಗಳ ತಡೆಗೆ ಮುಂದಾಗಿಲ್ಲ ದೌರ್ಜನ್ಯ ಪ್ರಕರಣಗಳನ್ನು ಕೋರ್ಟ್ಗೆ ತರಲೂ ವಿಫಲರಾಗಿದ್ದಾರೆ ಎನ್ನುವ ಆರೋಪಗಳಿವೆ.
ಆದೇಶವು ಸಕಾರಾತ್ಮಕ ಪರಿಣಾಮ ಬೀರಿದೆ, ಮಹಿಳೆಯರ ವಿರುದ್ಧ ದೌರ್ಜನ್ಯವು ಚರ್ಚೆಗೆ ಗ್ರಾಸವಾಗಿದೆ. ಇದು ಗಮನಾರ್ಹ ಹೆಜ್ಜೆ, ಸಮಾಜಕ್ಕೆ ಉತ್ತಮ ಸಂದೇಶ ನೀಡಲಿದೆ ಎಂದು ಅಂಜುಂ ಪರ್ವೀನ್ ಹೇಳಿದ್ದಾರೆ.
ಬಿಹಾರದ ಮಜ್ಹೋರ್ ಗ್ರಾಮದ ಕುಮಾರ್ ವೃತ್ತಿಯಿಂದ ಧೋಬಿ, ಅತ್ಯಾಚಾರ ಯತ್ನ ಸೇರಿ ವಿವಿಧ ಆರೋಪಗಳಡಿ ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಬಂಧಿಸಲಾಗಿತ್ತು.
ಕೋರ್ಟ್ನ ತೀರ್ಮಾನವು ಗ್ರಾಮದ ಎಲ್ಲಾ ಮಹಿಳೆಯರಿಗೆ ಸಂತಸ ತಂದಿದೆ ಎಂದು ಗ್ರಾಮ ಪರಿಷತ್ನ ಮುಖ್ಯಸ್ಥೆಯಾಗಿರುವ ನಸೀಮಾ ಖತೂನ್ . ಇದು ಐತಿಹಾಸಿಕ ನಿರ್ಧಾರ. ಮಹಿಳೆಯರ ಬಗೆಗಿನ ಗೌರವ ಹೆಚ್ಚಲಿದೆ ಎಂದು ಹೇಳಿದ್ದಾರೆ.
ಬಟ್ಟೆ ತೊಳೆಯುವ ಹಾಗೂ ಇಸ್ತ್ರಿ ಮಾಡುವ ಶಿಕ್ಷೆಯ ಹೊರತಾಗಿ ತಲಾ 10 ಸಾಚಿರರೂಗಳ ಎರಡು ಶ್ಯೂರಿಟಿಗಳನ್ನು ನೀಡುವಂತೆ ನ್ಯಾಯಾಲಯವು ಆರೋಪಿಯನ್ನು ಕೇಳಿದೆ.
ಆರು ತಿಂಗಳ ಬಳಿಕ ಆರೋಪಿಯು ಹಳ್ಳಿಯ ಸರಪಂಚ್ ಅಥವಾ ಸೇವೆಯ ಯಾವುದೇ ಸರ್ಕಾರಿ ಅಧಿಕಾರಿಯಿಂದ ನೀಡಲಾದ ಪ್ರಮಾಣಪತ್ರವನ್ನು ಹಸ್ತಾಂತರಿಸಬೇಕು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications