ಐಪಿಎಲ್ ಮುಗಿದ್ಮೇಲೆ ದೇಶಿ ಕ್ರಿಕೆಟ್ ಶುರು ಮಾಡಲು ಬೇಡಿಕೆ!
ಪಾಟ್ನಾ, ಸೇ. 20: ಕೊರೊನಾವೈರಸ್ ಭೀತಿಯ ನಡುವೆ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ನ 13ನೇ ಆವೃತ್ತಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯೋಜಿಸಿದೆ. ಯುಎಇಯಲ್ಲಿ ಐಪಿಎಲ್ 2020 ನಡೆಯುತ್ತಿರುವ ವೇಳೆಯಲ್ಲಿ ಭಾರತದಲ್ಲಿ ದೇಶಿ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಬಗ್ಗೆ ಚರ್ಚೆ ನಡೆದಿದೆ.
ಬಿಹಾರ ಕ್ರಿಕೆಟ್ ಮಂಡಳಿ ಸಾಮಾನ್ಯ ಸಭೆಯಲ್ಲಿ ಇಂದು ಐಪಿಎಲ್ ಯಶಸ್ವಿಯಾಗಿ ಆಯೋಜನೆ ಮಾಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಾಯ್ ಶಾ, ಖಚಾಂಚಿ ಅರುಣ್ ಧುಮಾಲ್, ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಐಪಿಎಲ್ ಬಳಿಕ ಭಾರತದಲ್ಲಿ ದೇಶಿ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ಆಯೋಜಿಸುವಂತೆ ಬಿಸಿಸಿಐಗೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಸಿಎ ಕಾರ್ಯದರ್ಶಿ ಆದಿತ್ಯ ವರ್ಮಾ, ದೇಶಿ ಕ್ರಿಕೆಟ್ ಆಟಗಾರರಿಗೆ ಇನ್ನೂ ಹೆಚ್ಚಿನ ಅವಕಾಶ ಸಿಗಬೇಕಿದೆ. ಬಿಹಾರ ಆಟಗಾರರಿಗೆ ಸಿಗಬೇಕಿರುವ ಟಿಎ/ ಡಿಎ ಬಾಕಿಯನ್ನು ದೊರಕಿಸಿಕೊಡಬೇಕಿದೆ. ಕಾನೂನು ಸಮಸ್ಯೆಯಿಂದಾಗಿ ಬಿಹಾರ ಕ್ರಿಕೆಟ್ ಮಂಡಳಿ ಮಾನ್ಯತೆ ಕಳೆದುಕೊಂಡಿದ್ದು, ಕೋರ್ಟ್ ನಿಂದ ಮಾನ್ಯತೆಗಾಗಿ ಕಾನೂನು ಸಮರ ಒಂದು ಕಡೆ ನಡೆಯುತ್ತಿದ್ದರೆ ಇನ್ನೊಂದೆಡೆ ಬಿಸಿಸಿಐಯಿಂದ ಸಿಗಬೇಕಿರುವ ಅಧಿಕೃತ ಮುದ್ರೆ ಸಿಕ್ಕರೆ ಸ್ಥಳೀಯ ಆಟಗಾರರನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಬಿಹಾರ ಕ್ರಿಕೆಟ್ ಮಂಡಳಿಗೆ ನೋಂದಣಿಯನ್ನು ಐಜಿ ರಿಜಿಸ್ಟ್ರಾರ್ ರದ್ದುಗೊಳಿಸಿದ್ದಾರೆ. ಈ ಹಿಂದಿನ ಉನ್ನತ ಅಧಕಾರಿಗಳ ಮಂಡಳಿಯಿಂದ ಬಿಸಿಎಗೆ ದಕ್ಕಿದ್ದ 10. 8 ಕೋಟಿ ರು ಅನುದಾನ ಕೂಡಾ ಅನಧಿಕೃತ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹೀಗಾಗಿ, ಗೊಂದಲಗಳ ನಡುವೆ ಬಿಹಾರ ಕ್ರಿಕೆಟ್ ಉತ್ತೇಜನ ನೀಡಲು ಆದಿತ್ಯ ವರ್ಮಾ ಅವರನ್ನು ಪ್ರತಿನಿಧಿಯಾಗಿ ಮಂಡಳಿ ಆಯ್ಕೆ ಮಾಡಿದೆ. ಬಿಸಿಸಿಐಯಿಂದ ಮಾನ್ಯತೆ ಪಡೆದರೆ ಬಿಹಾರದಲ್ಲಿ ಬಿಸಿಎ ಪಂದ್ಯಗಳನ್ನು ಎಂದಿನಂತೆ ಆಯೋಜಿಸಬಹುದಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications