ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಸೋಲು: ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಮುಖಂಡರು

|
Google Oneindia Kannada News

ನವದೆಹಲಿ, ನವೆಂಬರ್ 19: ಇತ್ತೀಚೆಗಷ್ಟೇ ನಡೆದ ಬಿಹಾರ ವಿಧಾನಸಭಾ ಸೋಲಿನಲ್ಲಿ ಕಾಂಗ್ರೆಸ್ ಸೋಲಿನ ಹಿನ್ನೆಲೆಯಲ್ಲಿ ಅಲ್ಲಿನ ಕಾಂಗ್ರೆಸ್ ಮುಖಂಡರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ಸೇರಿದಂತೆ ಅನೇಕ ಮುಖಂಡರು ಇದೇ ರೀತಿಯ ಮಾತುಗಳನ್ನಾಡಿದ್ದಾರೆ. ಬಿಹಾರದಲ್ಲಿ ಪಕ್ಷದ ಸಾಧನೆ ಕುರಿತು ಸಮಗ್ರ ವಿಮರ್ಶೆ ನಡೆಯಬೇಕು ಎಂದು ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಬಿಹಾರದಲ್ಲಿ ಸಚಿವರಾದ 3 ದಿನದಲ್ಲೇ ಮೇವಾಲಾಲ್ ಕುರ್ಚಿಗೆ ಕುತ್ತು!ಬಿಹಾರದಲ್ಲಿ ಸಚಿವರಾದ 3 ದಿನದಲ್ಲೇ ಮೇವಾಲಾಲ್ ಕುರ್ಚಿಗೆ ಕುತ್ತು!

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಬಗ್ಗೆ ಸಮಗ್ರ ಪರಿಶೀಲನೆಗೆ ಕರೆ ನೀಡಿರುವ ಕಾಂಗ್ರೆಸ್ ಮುಖಂಡರು, ಹೈ-ಕಮಾಂಡ್‌ನ ನಿರ್ದೇಶನಗಳ ನಂತರ ಈ ಬಗ್ಗೆ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Bihar Defeat Fallout: State Congress Leaders Offer Resignation

ಬಿಹಾರ ಎಐಸಿಸಿ ಉಸ್ತುವಾರಿ ಶಕ್ತಿಸಿನ್ಹಾ ಗೊಹಿಲ್ ಮತ್ತಿತರ ಮುಖಂಡರು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಹೈಕಮಾಂಡ್ ಗೆ ಸಲ್ಲಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಮಧನ್ ಮೋಹನ್ ಝಾ ಕೂಡಾ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ, ಹೈ ಕಮಾಂಡ್ ಮುಂದಿನ ನಿರ್ದೇಶನಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಇದು ಕ್ರಮದ ಸಮಯವಾಗಿದೆ ಎಂದು ಹಿರಿಯ ಮುಖಂಡ ಕಪಿಲ್ ಸಿಬಲ್ ಹೇಳಿರುವಂತೆಯೇ, ಬಿಹಾರ ಚುನಾವಣೆಯಲ್ಲಿನ ಕಳಪೆ ಸಾಧನೆ ಬಗ್ಗೆ ವಿಮರ್ಶೆ ನಡೆಯಬೇಕೆಂದು ಕೆಲ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

English summary
Congress leaders in Bihar called for a comprehensive review on Wednesday of the party's election loss in the state and said they would move further on this after directions from the high-command.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X